ಉತ್ತರ ಕರ್ನಾಟಕದ ಸಮಸ್ಯೆಗಳು ಸೇರಿ ರಾಜ್ಯ ಎದುರಿಸುತ್ತಿರುವ ತೀವ್ರ ಬರದ ಬಗ್ಗೆ ಕಲಾಪದಲ್ಲಿ ಚರ್ಚೆ ಮಾಡುವುದು ನನ್ನ ಉದ್ದೇಶ. ಆದರೆ, ನನ್ನನ್ನು ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ನ 45 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆಂಬ ಮಾಹಿತಿ ಗುಪ್ತಚರ ಇಲಾಖೆಯಿಂದ ಸರ್ಕಾರಕ್ಕೆ ಸಿಕ್ಕಿದೆ. ಅದನ್ನು ತಡೆಯಲು ಸಿಎಂ, ಡಿಸಿಎಂ ಕಸರತ್ತು ನಡೆಸಿದ್ದಾರೆ' ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಹುಲಿ ಉಗುರು ರೀತಿಯಲ್ಲಿರುವ ಪೆಂಟೆಂಟ್ ನೈಜವಲ್ಲ. ಅದನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡಲು ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ನಾಮಕಾರಣ
ರಾಮನಗರವನ್ನ ಮರುನಾಮಕರಣಕ್ಕೆ ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು ದಕ್ಷಿಣ ಎಂದು ಮರು ನಾಮಕಾರಣ ಮಾಡಿ
ರಾಮನಗರ ಜಿಲ್ಲಾ ಕೇಂದ್ರ ಮಾಡಲು ಚಿಂತನೆ ಮಾಡಿದ್ದೇವೆ
ಟ್ವೀಟ್ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ
ಹೆಚ್ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್
ನಕಲಿ ಪತ್ರದ ವಿರುದ್ಧ ಪೊಲೀಸ್ ಠಾಣೆಗೆ ದೂರು
ಬೆಂಗಳೂರಿನ ಜೆಸಿ ನಗರ ಠಾಣೆಗೆ ಇಬ್ರಾಹಿಂ ದೂರು
ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಇಬ್ರಾಹಿಂ ಮನವಿ
ಸೋಶಿಯಲ್ ಮೀಡಿಯಾದಲ್ಲಿ ನಕಲಿ ಪತ್ರ ವೈರಲ್
ಎಷ್ಟು ಸೀಟ್ ಗಳು ಎಂಬುದರ ಬಗ್ಗೆ ಇದುವರೆಗೂ ಚಿಂತನೆ ಮಾಡಿಲ್ಲ
28 ಕ್ಷೇತ್ರದ ಇವತ್ತಿನ ಪರಿಸ್ಥಿತಿ, ಚುನಾವಣೆ ಬಳಿಕದ ಪರಿಸ್ಥಿತಿ ಬಗ್ಗೆ ಚರ್ಚಿಸ್ತೀವಿ
ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ. ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು!! ಹೀಗಿದೆ ನಮ್ಮ ಸ್ಥಿತಿ. ಆ ರಾಜ್ಯವು ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಅಂಕಿ-ಅಂಶದ ಬಗ್ಗೆ ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ- ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ
ಸಿದ್ದರಾಮಯ್ಯ ನೇತೃತ್ವದಲ್ಲೇ ವರ್ಗಾವಣೆ ದಂಧೆ ನಡೆಯುತ್ತಿದೆ
ವರ್ಗಾವಣೆ ಆದೇಶ ಆಗುತ್ತೆ. ತಕ್ಷಣ ಅದು ಬದಲಾವಣೆ ಆಗುತ್ತದೆ
ಮೈಸೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ
ಪ್ರಮುಖ ಎಲ್ಲಾ ಹುದ್ದೆಗಳೆಲ್ಲವೂ ದುಡ್ಡಿನಿಂದಲೇ ವರ್ಗಾವಣೆ ಆಗ್ತಿವೆ
ಸರ್ಕಾರ ನಡೆಯಬೇಕಾದರೆ ವರ್ಗಾವಣೆ ಮಾಡಬೇಕಾದದ್ದು ಅನಿವಾರ್ಯ
ಪೆನ್ ಡ್ರೈವ್ ದಾಖಲೆಯನ್ನ ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುವೆ
ಈ ಸರ್ಕಾರ ಏನು ಮಾತಾಡಬೇಕು ಎಲ್ಲವನ್ನೂ ಮಾತನಾಡಲಿ
ಹಿಟ್ ಅಂಡ್ ರನ್ ಅಂತಾರೆ, ಏನಾದರೂ ಹೇಳಿಕೊಳ್ಳಲಿ ಅಂತಾರೆ
ಮೈಸೂರಿನಲ್ಲಿ ಮತ್ತೆ ಕಾಂಗ್ರೆಸ್ ವಿರುದ್ಧ ಗುಡುಗಿದ ಹೆಚ್ಡಿಕೆ
ಹೀಗೆ ಮಾತನಾಡಲಿ, ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡ್ತೀನಿ
ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಬಗೆಹರಿಯದ ಹಾಸನ ಜೆಡಿಎಸ್ ಟಿಕೆಟ್ ಗೊಂದಲ. ಟಿಕೆಟ್ಗಾಗಿ ದೇವರ ಮೊರೆ ಹೋದ ಭವಾನಿ ರೇವಣ್ಣ. ಕುಮಾರಸ್ವಾಮಿಗೆ ಭವಾನಿ ರೇವಣ್ಣ ಪರೋಕ್ಷ ಟಾಂಗ್. ಹಾಸನ ಕ್ಷೇತ್ರದ ದೊಡ್ಡಪುರದಲ್ಲಿ ಜೆಡಿಎಸ್ ಮತಬೇಟೆ. ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಭರ್ಜರಿ ಸ್ವಾಗತ.
ಸಿಎಂ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಹೆಚ್ಡಿಕೆ ಪಂಚರತ್ನ ಯಾತ್ರೆ. ರಾಣೆಬೆನ್ನೂರು ತಾ. ಹಲಗೇರಿಯಿಂದ ಮೆಡ್ಲೇರಿವರೆಗೂ ಯಾತ್ರೆ. ಚುನಾವಣೆ ಬಂದಾಗ ಐಟಿ ರೇಡ್ ನಡೆಸುವುದು ಬಿಜೆಪಿ ಪ್ಲ್ಯಾನ್. ರಾಜ್ಯದಲ್ಲಿ ವಿರೋಧ ಪಕ್ಷಗಳ ಮುಖಂಡರ ಮೇಲೆ ರೇಡ್ ಆಗ್ತಾವೆ ಎಂದ ಕುಮಾರಸ್ವಾಮಿ.
ಹಾವೇರಿಯಲ್ಲಿಂದು ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಯಲಿದೆ.. ರಾಣೇಬೆನ್ನೂರು ತಾಲೂಕಿನ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ರಥಯಾತ್ರೆ ನಡೆಯಲಿದೆ.
ಜಂಟಿ ಅಧಿವೇಶನ ಆರಂಭವಾಗಿ ಎರಡು ದಿನ ಆಗಿದೆ.. ಇಂದು ಮೂರನೇ ದಿನದ ಕಲಾಪ ನಡೆಯಲಿದೆ. ಇದು ಸರ್ಕಾರದ ಕೊನೆಯ ಅಧಿವೇಶನ ಆಗಿದೆ. ಆದ್ರೆ ಯಾವುದೇ ಗಂಭೀರ ವಿಷಯಗಳ ಬಗ್ಗೆ ಚರ್ಚೆಯಾಗದೆ ಸಮಯ ವ್ಯರ್ಥವಾಗುತಿದೆ. ಇದರ ನಡುವೆ ನಿನ್ನೆ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಮತ್ತು ಬಿಜೆಪಿ ನಾಯಕರ ಮಹಾಭಾರತದ ಕಥೆಯ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಇಂದು ಧಾರವಾಡ ಜಿಲ್ಲೆಯಲ್ಲಿ ದಳಪತಿಗಳ ದಂಡಯಾತ್ರೆ. ಜೆಡಿಎಸ್ ಪಂಚರತ್ನ ಯಾತ್ರೆಗೆ ದಳ ಕಾರ್ಯಕರ್ತರಿಂದ ತಯಾರಿ. ನವಲಗುಂದ ವ್ಯಾಪ್ತಿಯಲ್ಲಿ ಪಂಚರತ್ನ ಯಾತ್ರೆ ರೋಡ್ ಶೋ. ಜಲಮಂಡಳಿ ಗುತ್ತಿಗೆ ನೌಕರರ ಸಮಸ್ಯೆ ಆಲಿಸಲಿರುವ ಹೆಚ್ಡಿಕೆ. ಬಳಿಕ ಮೊರಬ ಗ್ರಾಮದಲ್ಲಿ ಸಾರ್ವಜನಿಕ ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭಾಗಿ.
ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ನಡೆಸುತ್ತಿದೆ. ಅಧಿವೇಶನದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಹೊಂದಾಣಿಕೆ ಮಾಡಿಕೊಂಡು ಯಾತ್ರೆ ನಡೆಸುವ ಯೋಜನೆ ಹಾಕಿಕೊಂಡಿದ್ದಾರೆ. ಹಾಗೂ ಬಿಜೆಪಿ ಕೂಡ ವಿಜಯ ಸಂಕಲ್ಪ ಯಾತ್ರೆ, ಭೂತ್ ಅಭಿಯಾನ ಸೇರಿದಂತೆ ಅನೇಕ ಕಾರ್ಯಕ್ರಮ ನಡೆಸುತ್ತಿದೆ. ಜೊತೆಗೆ ಜೆಡಿಎಸ್ ಪಂಚ ರತ್ನ ಯಾತ್ರೆ ಕೂಡ ಸಾಗುತ್ತಿದ್ದೂ ಎಲ್ಲಾರು ಚುನಾವಣೆಯ ತಯಾರಿಯಲ್ಲಿದ್ದು, ಈ ಬಾರಿಯ ಅಧಿವೇಶನಕ್ಕೆ ಮೂರು ಪಕ್ಷದ ನಾಯಕರು ಗೈರಾಗುವ ಸಾಧ್ಯತೆ ಜಾಸ್ತಿಯಿದೆ.
ಎರಡು ಸದನ ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣ..!
ಬಿಜೆಪಿ ವಿರುದ್ಧ ಗುಡುಗಲು ಕೈ ಮತ್ತು ದಳ ಸಜ್ಜು..!
ಬಜೆಟ್ ಮೂಲಕ ಬಿಜೆಪಿ ಪ್ರಣಾಳಿಕೆ ತೋರಿಸಲು ಪ್ಲಾನ್
ಫೆ. 17ಕ್ಕೆ ಕಾಮನ್ ಮ್ಯಾನ್ನಿಂದ 2ನೇ ಬಾರಿ ಬಜೆಟ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.