ಧರ್ಮ, ಜಾತಿ ಹೆಸರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಮನಸ್ಸನ್ನು ಕೆಡಿಸುತ್ತವೆ. ಆ ಎರಡೂ ಪಕ್ಷಗಳಿಗೆ ಅಭಿವೃದ್ಧಿ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.
ಮೀಸಲಾತಿ ವಿಚಾರದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಸ್ಟಿ ಸಮುದಾಯದವರಿಗೆ ಕೊಟ್ಟಿರುವ ಮೀಸಲಾತಿ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆ ಮಾಡಲು ನಾನು ಸಿದ್ಧನಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಕನ್ನಡ ನಾಡಿನ ಶ್ರೀಮಂತ ಪರಂಪರೆ, ಸಾಹಿತ್ಯ ಸಿರಿ ಸಂಪತ್ತಿನ ಹೆಗ್ಗುರುತು ನಾಡಹಬ್ಬ ಮೈಸೂರು ದಸರಾ ಬಗ್ಗೆ ರಾಜ್ಯ ಬಿಜೆಪಿ ಸರಕಾರದ ನೀತಿ ಅತ್ಯಂತ ಖಂಡನೀಯ. ಕನ್ನಡ ಭಾಷೆ, ಸಂಸೃತಿಯ ಕುರಿತು ಆಡಳಿತ ನಡೆಸುವವರ ದಿವ್ಯನಿರ್ಲಕ್ಷ್ಯ ಮಾತೃಭಾಷೆಗೆ ಮಾಡಿರುವ ಅಪಮಾನ ಮತ್ತು ದ್ರೋಹ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತೆಲಂಗಾಣ ಸಚಿವ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆಟಿಆರ್ ಭೇಟಿ ಮಾಡಿದ್ದಾರೆ. ಇಬ್ಬರು ನಾಯಕರು ಹೈದರಾಬಾದ್ನಲ್ಲಿ ಜತೆಯಲ್ಲೇ ಉಪಾಹಾರ ಸೇವಿಸಿದ್ದಾರೆ. ಇಬ್ಬರು ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ.
ಕರ್ನಾಟಕದ ಗಡಿಯಲ್ಲಿ ಮರಾಠಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ತಮ್ಮ ಸರಕಾರ ಬೆಂಬಲ ನೀಡುತ್ತದೆ ಎಂದು ಹೇಳಿಕೆ ನೀಡಿರುವ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಕ್ಕೆ ಹಿಂದಿಯಲ್ಲಿ ಟ್ವೀಟ್ ಮಾಡುವುದರ ಮೂಲಕ ಪ್ರತಿಕ್ರಿಯಿದ್ದ ಬಾಲಿವುಡ್ ನಟ ಅಜಯ್ ದೇವಗನ್ ನಡೆಗೆ ಈಗ ಮಾಜಿ ಮುಖ್ಯಮಂತ್ರಿ ಎಚ್.ಡಿ,ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸುದೀಪ್ ಹೇಳಿದ್ದರಲ್ಲಿ ಸರಿ ಇದೆ ಎಂದು ಹೇಳುವ ಮೂಲಕ ಈಗ ಕುಮಾರಸ್ವಾಮಿ ಕಿಚ್ಚ ಸುದೀಪ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
ಬೆಲೆ ಏರಿಕೆ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಜನರ ಶಾಂತಿ ನೆಮ್ಮದಿ ನನಗೆ ಬೇಕಾಗಿರುವುದು. ಯಾರನ್ನು ಮೆಚ್ಚಿಸಲು ನಾನು ಮಾತನಾಡುತ್ತಿಲ್ಲ. ನಾಡಿನ ಸಾಮರಸ್ಯ ಕದಡಲು ಜನರು ಅವಕಾಶ ನೀಡಬಾರದು. ಬಜರಂಗದಳ, ಆರ್ಎಸ್ಎಸ್, ವಿಎಚ್ಪಿಗೆ ಈ ದೇಶದ ಬಗ್ಗೆ ಅಭಿಮಾನ ಇದ್ದರೆ ಬೆಲೆ ಏರಿಕೆ ವಿರುದ್ಧ ಕೇಸರಿ ಶಾಲು ಧರಿಸಿ ಹೋರಾಟ ಮಾಡಲಿ. ನಿಮ್ಮ ಜೊತೆ ನಾವೂ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಸವಾಲಾಕಿದರು.
ಸೂಕ್ಷ್ಮ ವಿಷಯಗಳ ಮೂಲಕ ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು, “ಶ್ರೀರಾಮನ ಹೆಸರೇಳಿಕೊಂಡು ರಾವಣ ರಾಜ್ಯ ಸೃಷ್ಟಿ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy), ಹೊಟ್ಟೆಗೆ ತಿನ್ನೊಕೆ ಏನೂ ಕೊಡಬೇಡಿ ಹೊಟ್ಟೆಗೆ ತಣ್ಣಿರ್ ಬಟ್ಟೆ. ದೇವಸ್ಥಾನ ಕಟ್ಟುವರು ಓಬಿಸಿ, ದಲಿತರು, ದೇವಸ್ಥಾನದ ಒಳಗೆ ಕೂತುಕೊಂಡು ಆಸ್ತಿ ಹೊಡೆದು ಮಜಾ ಮಾಡುವುದು ನೀವು ಎಂದು ಕಿಡಿಕಾರಿದರು.
ಪರಿಶಿಷ್ಠ ಪಂಗಡದ ಮೀಸಲು ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ನಡೆಸುತ್ತಿರುವ ಧರಣೆಗೆ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.