ಜೆಡಿಎಸ್ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ.ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್ ಎನ್ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮೇಲ್ಮನೆಯಲ್ಲಿ ನಡೆದ ಘಟನೆ ಬಳಿದ ಧರ್ಮೇಗೌಡ ಅವರು ಅತ್ಯಂತ ಮಾನಸಿಕ ಖಿನ್ನತೆಗೊಳಗಾಗಿದ್ದರು. ಧರ್ಮೇಗೌಡ ಅವರು ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಅವರ ಸಹೋದರ ಬೋಜೇಗೌಡ ಅವರು 10 ದಿನಗಳ ಹಿಂದೆಯೇ ನನಗೆ ಹೇಳಿದ್ದರು
ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ಈಗ ಚರ್ಚೆಯ ಸಂಗತಿಯಾಗಿದೆ. ಈ ನಡುವೆ, ಧರ್ಮೇಗೌಡರ ಆತ್ಮೀಯ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಕೂಡಾ ಚರ್ಚೆಗೆ ಗ್ರಾಸವಾಗಿದೆ
ಜೆಡಿಎಸ್ ಬಿಜೆಪಿ ಜೊತೆ ಹೊಂದಾಣಿಕೆ ಅಥವಾ ಮೈತ್ರಿ ಮಾಡಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ಒಂದು ವೇಳೆ ನಮ್ಮ ತೀರ್ಮಾನಕ್ಕೆ ವಿರುದ್ದವಾಗಿ ಪಕ್ಷ ನಿಲುವು ತೆಗೆದು ಕೊಂಡರೆ ನಮ್ಮ ತೀರ್ಮಾನವನ್ನು ಪ್ರಕಟಿಸಬೇಕಾಗುತ್ತದೆ
ಮೈತ್ರಿ ಸರ್ಕಾರ ಮಾಡಲು ಬೆಂಬಲ ನೀಡಿದ್ದು ಕಾಂಗ್ರೆಸ್ಸಿನ ಹೈಕಮಾಂಡ ಎನ್ನುವುದು ತಿಳಿದಿರಲಿ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೀತು ಎಂಬ ಭಯವಿತ್ತು. ಅದಕ್ಕಾಗಿ ಹೈಕಮಾಂಡ ಹೇಳಿದಂತೆ ಸಿದ್ದರಾಮ್ಯಯನವರು ಕುಮಾರಸ್ವಾಮಿ ಅವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರೆ ಹೊರತು ಇದಕ್ಕಾಗಿ ಸಿದ್ದರಾಮಯ್ಯ ಬೆಂಬಲ ನೀಡಿಯೇ ಇಲ್ಲ
ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್ ಪಕ್ಷವು ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ನ ಈ ನಿಲುವಿನ ವಿಚಾರವಾಗಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಈ ಇಲ್ಲ ಟೀಕೆಗಳಿಗೆ ಉತ್ತರಿಸುವ ಪ್ರಯತ್ನ ಮಾಡಿದ್ದಾರೆ.
ಸ್ಥಳೀಯ ಸಂಸ್ಥೆಯಲ್ಲಿ ಅವಕಾಶ ಇದ್ದರೂ ಅಧಿಕಾರ ಕೊಡಿಸಲು ಪ್ರಯತ್ನಿಸಲಿಲ್ಲ ಎಂಬ ಕಾರಣಕ್ಕೆ ಜೆಡಿಎಸ್ನ ಜನಪ್ರತಿನಿಧಿಗಳು ಕಾಂಗ್ರೆಸ್ ಪಕ್ಷ ಸೇರಿ ಅಧಿಕಾರ ಅನುಭವಿಸಿದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.