ಬಂಧಿತ ಆರೋಪಿಗಳಾದ ಯಶ್ಪಾಲ್ ಅರೋರಾ ಮತ್ತು ರಾಹುಲ್ ಅರೋರಾ ಅವರು ಯಶ್ಪಾಲ್ ಬಾತ್ರಾ ಎಂಬುವರ ವಿರುದ್ಧದ ದೂರನ್ನು ಹಿಂಪಡೆಯುವ ಸಲುವಾಗಿ 4 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
ಹರಿಯಾಣದ ಪಾಣಿಪತ್ ಜಿಲ್ಲೆಯ ಗ್ರಾಮಕ್ಕೆ ಚಿರತೆ ಪ್ರವೇಶಿಸಿದ್ದು, ಜನರು ಭೀತಿಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರ ಮೇಲೆ ಕಾಡುಪ್ರಾಣಿ ದಾಳಿ ನಡೆಸಿದೆ. ಪಾಳು ಬಿದ್ದ ಕಟ್ಟಡವೊಂದರಲ್ಲಿ ಈ ಚಿರತೆ ಅಡಗಿ ಕುಳಿತುಕೊಂಡಿತ್ತು.
Terrorist caught from Karnal: ಶಂಕಿತರಿಂದ ಭಾರೀ ಪ್ರಮಾಣದ ಬುಲೆಟ್ಗಳು ಮತ್ತು ಮದ್ದುಗುಂಡುಗಳಿದ್ದ ಕಂಟೈನರ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಂಟೈನರ್ನಲ್ಲಿ ಪತ್ತೆಯಾಗಿರುವ ವಸ್ತು ಆರ್ಡಿಎಕ್ಸ್ ಆಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಕೊರೊನಾವೈರಸ್ನ ನಾಲ್ಕನೇ ಅಲೆಯ ಶೀಘ್ರದಲ್ಲೇ ಭಾರತಕ್ಕೆ ಅಪ್ಪಳಿಸುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಶುಕ್ರವಾರದಂದು ಕೆಲವು ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.ಕೊರೊನಾ ಪ್ರಸರಣ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.
Liquor Rules: ಹರಿಯಾಣದಲ್ಲಿ ಈಗ ಮದ್ಯಪಾನ ಮತ್ತು ಮದ್ಯ ಮಾರಾಟ ಮಾಡುವ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಇಳಿಸಲಾಗಿದೆ. ಹೊಸ ಅಬಕಾರಿ ನೀತಿಯ ಅಡಿಯಲ್ಲಿ, ರಾಜ್ಯದಲ್ಲಿ ಮದ್ಯದ ಬಗ್ಗೆ ಅನೇಕ ಕಾನೂನುಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.
ಹರಿಯಾಣದ ಭಿವಾನಿ ಜಿಲ್ಲೆಯ ತೋಷಮ್ ಬ್ಲಾಕ್ನಲ್ಲಿರುವ ದಡಮ್ ಗಣಿಗಾರಿಕೆ ವಲಯದಲ್ಲಿ ಭೂಕುಸಿತದಿಂದ ಕನಿಷ್ಠ ನಾಲ್ವರು ಗಣಿಗಾರಿಕೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.ಈಗ ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಮೃತರ ನಿಖರ ಸಂಖ್ಯೆ ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದೆ.
Noida gang rape: ಮಹಿಳೆ ತನ್ನ ದೂರಿನಲ್ಲಿ, ವಕೀಲರು ತನಗೆ ಸಹಾಯ ಮಾಡುವ ನೆಪದಲ್ಲಿ ನೋಯ್ಡಾದಲ್ಲಿರುವ ತನ್ನ ಕಚೇರಿಗೆ ಕರೆಸಿಕೊಂಡರು. ಅಲ್ಲಿ ತಮ್ಮ ಸಹಚರರ ಜತೆ ಸೇರಿ ತನ್ನ ಮೇಲೆ ಅತ್ಯಾಚಾರ ಎಸಗಿದರು. ಘೋರ ಅಪರಾಧದ ವಿಡಿಯೋ ಕ್ಲಿಪ್ ಕೂಡ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
Suspicious death: ಹರಿಯಾಣದ ಹಿಸಾರ್ನಲ್ಲಿ ಒಂದೇ ಕುಟುಂಬದ 5 ಜನರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ವೇಳೆ ನಾಲ್ಕು ಕೊಲೆ ಮಾಡಿ ಐದನೇ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Recording telephonic conversation: ಹೆಂಡತಿಯ ಫೋನ್ ಕರೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡುವುದು "ಖಾಸಗಿತನದ ಉಲ್ಲಂಘನೆ" ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಯಮುನಾ ನಗರದಲ್ಲಿರುವ ಗುಜರಿ ಸಾಮಗ್ರಿಗಳನ್ನು ಸಂಗ್ರಹಿಸಲಾಗುತ್ತಿದ್ದ ಗೋದಾಮಿನಲ್ಲಿ ಬುಧವಾರ ರಾತ್ರಿ ಬೆಂಕಿ ಹೊತ್ತಿಕೊಂಡಿದೆ. ಈ ದುರ್ಘಟನೆಯಲ್ಲಿ ತಂದೆ ಮತ್ತು ಮೂವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ.
Heavy Rain: ದೇಶದ ರಾಷ್ಟ್ರೀಯ ರಾಜಧಾನಿ ದೆಹಲಿ ಸೇರಿದಂತೆ ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಅವಾಂತರವನ್ನುಂಟು ಮಾಡಿದೆ. ಭಾನುವಾರ ಬೆಳಗ್ಗೆಯಿಂದ ಈ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ರಾಜಧಾನಿಯ ಹಲವು ರಸ್ತೆಗಳು ಮಳೆಯಿಂದಾಗಿ ಮುಳುಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.