ಹಾಸನದ ಸಕಲೇಶಪುರ ತಾಲ್ಲೂಕಿನ ಗುಳಗಲಳೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿರುವುದನ್ನು ಗ್ರಾಮಸ್ಥರು ವಿರೋಧಿ ಕಾಮಗಾರಿಯನ್ನು ನಿಲ್ಲಿಸಲಾಗಿತ್ತು. ಈ ಬಗ್ಗೆ ಜೀ ಕನ್ನಡ ನ್ಯೂಸ್ ವಿಸ್ತೃತವಾದ ವರದಿ ಮಾಡಿದ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಗುಳಗಲಳೆ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಹಾಗೂ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ದೇವೇಗೌಡರ ಹೆಸರಿಗೆ ಮಸಿ ಬಳಿಯಲು ಅವರ ಕುಟುಂಬದವರು ಮಾಡುತ್ತಿರುವ ಅಕ್ರಮ, ದಬ್ಬಾಳಿಕೆಯ ಬಗ್ಗೆ ಗೊತ್ತಿದ್ದರೂ ಹೊಳೆನರಸೀಪುರ ಕ್ಷೇತ್ರದ ಜನರು ಏನೂ ಮಾಡಲಾಗದ ಸ್ಥಿತಿಯಲ್ಲಿದ್ದಾರೆ. ನಾನು ಅವರ ವಿರುದ್ಧ ಬರುವ ಚುನಾವಣೆಯಲ್ಲಿ ಬಿಜೆಪಿ ಅಥವಾ ಪಕ್ಷೇತರವಾಗಿಯಾದರೂ ಸ್ಪರ್ಧಿಸಿ ಗೆದ್ದು ಶಾಸಕನಾಗುತ್ತೇನೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ.
ವಿಧವೆಯ ಜೊತೆಗೆ ಮದುವೆಯಾಗಿರುವ ವಿಚಾರ ಮುಚ್ಚಿಟ್ಟಿದ್ದ ಯೋಧ ಕಿರಣ್ಕುಮಾರ್ 2ನೇ ಮದುವೆಯಾಗಲು ತಯಾರಿ ನಡೆಸಿದ್ದ. ಆದರೆ ಮೊದಲ ಪತ್ನಿ ಆಶಾ ಕಲ್ಯಾಣಮಂಟಪಕ್ಕೆ ಆಗಮಿಸಿ ಮದುವೆ ನಿಲ್ಲಿಸಿದ್ದಳು.
ಹಾಸನದ ಸಕಲೇಶಪುರದಲ್ಲಿ ಮಳೆಯ ಆರ್ಭಟ. ಭಾರೀ ಮಳೆ ಹಿನ್ನೆಲೆ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ. ತಾಲೂಕಿನ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ನೀಡಿ ಆದೇಶ. ಅಂಗನವಾಡಿಗಳು ಮತ್ತು 10ನೇ ತರಗತಿವರೆಗಿನ ಶಾಲೆಗಳಿಗೆ ರಜೆ. ಸಕಲೇಶಪುರ ತಹಶೀಲ್ದಾರ್ ಹೆಚ್.ಬಿ.ಜೈ ಕುಮಾರ್ ಆದೇಶ.
Earthquake in Karnataka: ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣ, ಮುದ್ದನಹಳ್ಳಿ, ಹನೆಮಾರನಹಳ್ಳಿ, ಕ್ಯಾತನಹಳ್ಳಿ, ಹೊಳೆನರಸೀಪುರದಲ್ಲಿ ಇಂದು ಮುಂಜಾನೆ ಭೂಕಂಪ ಆಗಿರುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ದೃಢಪಡಿಸಿದೆ.
ದೇವೇಗೌಡರು ಮೇ 18, 1933ರಲ್ಲಿ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಶೈಕ್ಷಣಿಕವಾಗಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪಡೆದ ಅವರು 1953ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. 1962ರವರೆಗೆ ಪಕ್ಷಕ್ಕಾಗಿ ದುಡಿದ ದೇವೇಗೌಡರು ಬಳಿಕ ಸ್ವತಂತ್ರ್ಯ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ನಿಂತು ವಿಧಾನಸಭೆಗೆ ಕಾಲಿಟ್ಟರು.
ಶಾಸಕರಾದ ರಾಮಸ್ವಾಮಿ ಹಾಗೂ ಶಿವಲಿಂಗೇಗೌಡ ಜೆಡಿಎಸ್ ನಿಂದ ದೂರ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಜಿಲ್ಲೆಯ ಅರಕಲಗೂಡು ತಾಲೂಕಿನ ಮಲ್ಲಿತಿಮ್ಮನಹಳ್ಳಿ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆಮ್ಮಿಗೆ ಗ್ರಾಮಕ್ಕೆ ಕಾಡಾನೆಗಳು ಎಂಟ್ರಿ ಕೊಟ್ಟಿವೆ.. ಗ್ರಾಮದೊಳಗೆ ಕಾಡಾನೆಗಳ ಸಂಚಾರ ಮಾಡಿದ್ದು, ಗ್ರಾಮಸ್ಥರು ಕಾಡಾನೆ ಕಂಡು ಭಯಭೀರಾಗಿದ್ದಾರೆ. ರಾತ್ರಿ 9 ಗಂಟೆ ಸುಮಾರಿನಲ್ಲಿ ಗ್ರಾಮದೊಳಗೆ ಕಾಡಾನೆಗಳು ಸಾಗುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಿರಂತರ ಆನೆ ಕಾಟದಿಂದ ಬೇಸತ್ತ ಜನ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಈ ಇಫ್ತಿಯಾರ್ ಕೂಟದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಮಾಜಿ ಸಚಿವ ರೋಷನ್ ಬೇಗ್, ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಂಸದ ಪ್ರಜ್ವಲ್ ರೇವಣ್ಣ ಇನ್ನಿತರ ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು. ನಗರದ ಹೊಸ ಈದ್ಗಾ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸಂಘಟಿತ ವಲಯದಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಜತೆಗೆ ಸಾಫ್ಟ್ ವೇರ್ ವಲಯವೊಂದರಲ್ಲೇ ವರ್ಷಕ್ಕೆ 5 ಲಕ್ಷದಂತೆ ಒಟ್ಟು 25 ಲಕ್ಷ ಉದ್ಯೋಗ ಅವಕಾಶ ಲಭ್ಯವಾಗಲಿದೆ. ಈ ಮೂಲಕ ಒಟ್ಟಾರೆ 55 ಲಕ್ಷ ಉದ್ಯೋಗಗಳು ಯುವಜನರಿಗೆ ಸಿಗಲಿವೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಬಸ್ - ಕಾರು(KSRTC Bus and Car) ಮುಖಾಮುಖಿ ಡಿಕ್ಕಿ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ರೆ, ಆಸ್ಪತ್ರೆಗೆ ಸಾಗಿಸೋ ಮಾರ್ಗಮಧ್ಯೆ ಓರ್ವ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸೂಕ್ತಪರಿಹಾರಕ್ಕೆ ಸಂಬಂಧಿಕರು ಆಗ್ರಹಿಸಿದ್ದಾರೆ.
ಪೈಪ್ ಬೆಲೆ ಸೇರಿದಂತೆ ಕೃಷಿ ಚಟುವಟಿಕೆಗೆ ಸಂಬಂಧಪಟ್ಟ ಸಲಕರಣೆಗಳ ಬೆಲೆ ಹೆಚ್ಚಳ ಮಾಡಿ ಮಾರುವಂತಿಲ್ಲ. ಇಂತಹ ಪ್ರಕರಣಗಳು ಗಮನಕ್ಕೆ ಬಂದರೆ ತಕ್ಷಣ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ - ಸಹಕಾರ ಸಚಿವ ಎಸ್.ಟಿ. ಸೋಮಶೇಖರ್
ಜಿಲ್ಲೆಯೊಳಗೆ ಒಂದು ತಾಲ್ಲೂಕಿನಿಂದ ಮತ್ತೊಂದು ತಾಲ್ಲೂಕಿಗೆ ಕೃಷಿ ಚಟುವಟಿಕೆಗಳ ಕಾರಣಕ್ಕೆ ಹೋಗುವ ರೈತರಿಗೆ ನಿರ್ಬಂಧವಿಲ್ಲ. ಅಂತರ ಜಿಲ್ಲಾ ಗಡಿಭಾಗದಲ್ಲಿ ಜಮೀನು ಹೊಂದಿರುವ ರೈತರು ಕೂಡ ಕೃಷಿ ಕೆಲಸ ಮಾಡಬಹುದು.
ಸರ್ಕಾರದ ವತಿಯಿಂದ ನೆರೆ ಸಂತ್ರಸ್ತರಿಗಾಗಿ ಯಾವ ರೀತಿಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂಬುದನ್ನು ಅರಿತು, ಸಂತ್ರಸ್ತರ ನೆರವಿಗೆ ಉಳಿದ ಅಗತ್ಯತೆಗಳ ಬಗ್ಗೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.