Chamarajnagar loksabha Constituency congress candidate Sunil bose: ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಗೋ ಬ್ಯಾಕ್ ಅಂಥಾ ಯಾಕೆ ಹಾಕಿದ್ದಾರೆ, ನಾನು ಹೊರಗಿವನಾ? ಎಂದು ಪ್ರಶ್ನಿಸಿದರು.
Lok Sabha Election 2024: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಅನುಮತಿಯೊಂದಿಗೆ ಪ್ರವಾಸಪಟ್ಟಿ ಹೊರಡಿಸಿದ್ದು ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಹೆಸರಿಸಲಾಗಿದೆ.
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಈ ಸುತ್ತೋಲೆಯನ್ನು ಹೊರಡಿಸಿದೆ. ಕೇವಲ 10 ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಧಾರ್ಮಿಕ ಹಬ್ಬಗಳನ್ನು ಆಚರಿಸಿದರೆ ಆಯಾ ಪ್ರಿನ್ಸಿಪಾಲರು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.
ಸಿದ್ದರಾಮಯ್ಯ ಮತ್ತು ಡಿಕೆಶಿ ಇವರಿಬ್ಬರ ಕುರ್ಚಿ ಕದನದಲ್ಲಿ ಇಡೀ ರಾಜ್ಯವೇ ಬಲಿಯಾಗುತ್ತಿದೆ. ಬೆಂಗಳೂರಿನ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಡಿಸಿಎಂ ಡಿಕೆ ಸಾಹೇಬರು ಲ್ಯಾಂಡ್ ಮಾಫಿಯಾ, ರಿಯಲ್ ಎಸ್ಟೇಟ್ ದಂಧೆ ನಡೆಸಿ ಲೂಟಿ ಹೊಡೆಯಲು ಕನಕಪುರವನ್ನು ಕರ್ನಾಟಕದ ರಾಜಧಾನಿಯನ್ನಾಗಿ ಬೇಕಾದರೂ ಮಾಡಬಹುದೇನೋ? ಎಂದು ಬಿಜೆಪಿ ಟೀಕಿಸಿದೆ.
Cauvery Water Sharing Dispute: ಕಾಂಗ್ರೆಸ್ನ INDI Allianceನ ಪ್ರಮುಖ ಸದಸ್ಯ ಪಕ್ಷವಾದ ಡಿಎಂಕೆಯ ಸ್ಟಾಲಿನ್ ಅವರ ಹೆಗಲ ಮೇಲೆ ಕೈ ಹಾಕಿ ಮಾತನಾಡುವ ಡಿಸಿಎಂ ಡಿಕೆಶಿ ಈಗೇಕೆ ಮೇಕೆದಾಟು ಯೋಜನೆಗೆ ಸಹಕಾರ ಕೇಳುತ್ತಿಲ್ಲ? ಮಾತುಕತೆಯಲ್ಲಿ ಮುಗಿಯುವ ಸಮಸ್ಯೆಗೆ ಊರು ತುಂಬಾ ಪಾದಯಾತ್ರೆ ಮಾಡಿದ್ದು ಏಕೆ? ಎಂದು BJP ಪ್ರಶ್ನಿಸಿದೆ.
Cauvery water dispute: ಸುಪ್ರೀಂಕೋರ್ಟ್ ತೀರ್ಪು ಬರುವ ಮುನ್ನವೇ ತಮಿಳುನಾಡಿಗೆ ನೀರು ಹರಿಸಿದ್ದೇಕೆ?, ಇದುವರೆಗೂ ತಮಿಳುನಾಡು ಸರ್ಕಾರದ ಜೊತೆಗೆ ಕಾಂಗ್ರೆಸ್ ಮಾತುಕತೆ ಮಾಡದೆ ಮೌನವಾಗಿರುವುದೇಕೆ? ಎಂದು ಬಿಜೆಪಿ ಪ್ರಶ್ನಿಸಿದೆ.
ರಾಜ್ಯದಲ್ಲಿ ಬರಗಾಲ ಬಂದಿದೆ ಕುಡಿಯಲು ನೀರಿಲ್ಲ, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದ್ಯಾವುದರ ಚಿಂತೆ ಇಲ್ಲದ #ATMSarkara ಸಂತೆಯಲ್ಲಿ ಬೀದಿ ಜಗಳ ಮಾಡುತ್ತಾ ಕರ್ನಾಟಕವನ್ನು ಬಲಿಕೊಡುತ್ತಿದೆ. ಸಿಎಂ-ಡಿಸಿಎಂ ಅವರ ವೈಯಕ್ತಿಕ ಹಿತಾಸಕ್ತಿಯ ಮೇಲಾಟದಲ್ಲಿ ರಾಜ್ಯದ ರೈತರ ಬದುಕು ದುರ್ಬರವಾಗುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
Congress Government Guarantee Schemes: ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ ಎಂದು ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ.
PTCL Act: ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಇಂದು ಸಭೆ ಕರೆಯಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಅಕ್ಕಿ ರಾಜಕಾರಣದ ಬಗ್ಗೆ ಎಂ ಬಿ ಪಾಟೀಲ್ ಸದಾಶಿವನಗರ ನಿವಾಸದಲ್ಲಿ ಮಾತನಾಡಿ, “ಸಿಎಂ ಈಗಾಗಲೇ ಗಂಭೀರ ಪ್ರಯತ್ನ ಮಾಡ್ತಾ ಇದಾರೆ. ಛತ್ತೀಸ್ ಗಡ ರಾಜ್ಯದ ಜೊತೆ ಮಾತಾಡಿದ್ದಾರೆ. ಆದರೆ ಟ್ರಾನ್ಸ್ಪೋರ್ಟ್ ಖರ್ಚನ್ನು ಕೂಡಾ ನೋಡಬೇಕು. ನಾವೇನು ಕೇಂದ್ರ ಸರ್ಕಾರದ ಬಳಿ ಸುಮ್ಮನೆ ಕೊಡಲು ಕೇಳ್ತಾ ಇಲ್ಲ.v
Karnataka Assembly Election 2023: ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಮೈಸೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಆಗಮಿಸಿದ ಸಿದ್ದರಾಮಯ್ಯನವರು ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನದ ಬಳಿಕ ನಂಜನಗೂಡು ಟಿಕೆಟ್ ಫೈಟ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಧ್ರುವನಾರಾಯಣ ಪುತ್ರನಿಗೆ ಟಿಕೆಟ್ ಕೊಡಿ ಅನ್ನೋ ಒತ್ತಾಯ ಒಂದು ಕಡೆಯಾದ್ರೆ, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಕೂಡ ಜಿದ್ದಿಗೆ ಬಿದ್ದಂತಿದೆ.
ಮುದ್ದೇಬಿಹಾಳದಲ್ಲಿ ಪ್ರಜಾಧ್ವನಿ ಸಮಾವೇಶ ಉದ್ಘಾಟನೆ. ವಿಜಯಪುರ ಜಿಲ್ಲೆಯಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ. ವೇದಿಕೆ ಮುಂಭಾಗದಲ್ಲಿ ಮಹಿಳೆಯರಿಂದ ಭರ್ಜರಿ ಡ್ಯಾನ್ಸ್. ಕಾರ್ಯಕ್ರಮದಲ್ಲಿ ಸಿದ್ರಾಮಯ್ಯ, ಎಂಬಿ ಪಾಟೀಲ್, ಜಮೀರ್, HC ಮಹಾದೇವಪ್ಪ ಸೇರಿದಂತೆ ಇತರರು ಸಮಾವೇಶದಲ್ಲಿ ಭಾಗಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.