ಸಿಎಲ್ಪಿ ಸಭೆಯಲ್ಲಿ ಸಿದ್ದರಾಮಯ್ಯರನ್ನ ಆಯ್ಕೆ ಮಾಡಿದಾಗ, 50-50 ಅಂತಾ ಏನೂ ಚರ್ಚೆಯಾಗಿಲ್ಲ. CLP ಸಭೆಯಲ್ಲಿ ಶಾಸಕರ ಒಮ್ಮತದಿಂದ ಸಿಎಂ ಆಯ್ಕೆ ಮಾಡಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಜೆಡಿಎಸ್ಗೆ 25 ವರ್ಷಗಳ ರಜತ ಮಹೋತ್ಸವ ಸಂಭ್ರಮಾಚರಣೆಯನ್ನು ಜೆ.ಪಿ. ಭವನದಲ್ಲಿ ಮಾಜಿ ಪ್ರಧಾನಿಗಳು ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ದೇವೇಗೌಡ ಅವರು ಹಾಗೂ ಕೇಂದ್ರ ಸಚಿವರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಆಚರಿಸಲಾಯಿತು.
ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಅವರು (ಶಿವಕುಮಾರ್) ನನ್ನನ್ನ ಯಾವಾಗ ಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತದೆ ಎಂಬುದರ ಕುರಿತು ಪ್ರತಿದಿನ ದೇವರೊಂದಿಗೆ ಚರ್ಚಿಸುತ್ತಾರೆ. ಇದು ಅವರ ಮತ್ತು ದೇವರ ನಡುವಿನ ವಿಷಯ ಎಂದು ಟೀಕಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.