NDA Complaint Against DK Shivakumar: ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು ಈ ದಾಂಧಲೆ ನಡೆಸಿದ್ದಾರೆ. ತಮ್ಮ ಬೆಂಬಲಿಗರಿಗೆ ಡಿಕೆಶಿ ಅವರೇ ಕುಮ್ಮಕ್ಕು ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಆಯೋಗಕ್ಕೆ ಮನವಿ ಮಾಡಲಾಗಿದೆ.
ಹಾಸನದಲ್ಲಿ ಜೆಡಿಎಸ್ ಮೈತ್ರಿಗೆ ಓಕೆ ಎಂದ ಪ್ರೀತಂ ಗೌಡ
ಬಿಎಸ್ವೈ, ವಿಜಯೇಂದ್ರ ನಡೆಸಿದ ಮಾತುಕತೆ ಫಲಪ್ರದ
ಪ್ರಜ್ವಲ್ ರೇವಣ್ಣ ಪರ ಪ್ರಚಾರಕ್ಕೆ ಪ್ರೀತಂ ಸಮ್ಮತಿ
ನಿನ್ನೆ ನಡೆದ ಬಂಡಾಯ ಶಮನ ಸಭೆಯಲ್ಲಿ ಒಪ್ಪಿಗೆ
ಹಾಸನದಲ್ಲಿಂದು ದಳಪತಿಗಳು ಅಬ್ಬರದ ಪ್ರಚಾರ ನಡೆಸಿದ್ರು.. ಈ ವೇಳೆ ಮಾಜಿ ಪ್ರಧಾನಿ ಅವ್ರು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ರು.. ಹಾಗಾದ್ರೆ ಏನ್ ಹೇಳಿದ್ರು ಕೇಳೋಣ ಬನ್ನಿ..
BJP-JDS alliance: ದೇವೇಗೌಡರೇ, ಎಪ್ಪತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದು ಕನ್ನಡಿಗರ ಪ್ರೀತಿ-ಅಭಿಮಾನವನ್ನು ಉಂಡು ಬೆಳೆದ ನೀವು ʼನಾವು ಪ್ರಧಾನಿ ಮೋದಿಯವರ ಹೆಸರಿನಲ್ಲಿಯೇ ಚುನಾವಣೆ ನಡೆಸುತ್ತೇವೆ” ಎಂಬ ಶರಣಾಗತಿಯ ಹೇಳಿಕೆಯನ್ನು ನೀಡುವಾಗ ಕನಿಷ್ಠ ನಿಮ್ಮ ಆತ್ಮಾಭಿಮಾನವೂ ಕುಟುಕಲಿಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
HD Deve Gowda: ಅಲ್ಲದೆ, ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆಯನ್ನು ಬೆಂಬಲಿಸಿ ಅದನ್ನು ಕಾರ್ಯಗತಗೊಳಿಸುವ ಅಚಲ ನಿರ್ಧಾರವನ್ನು ಇದೇ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಸೇರಿ ಎಲ್ಲಾ ಪಕ್ಷಗಳು ದೃಢ ಹೆಜ್ಜೆಯನ್ನು ಇಡಲಿ ಎಂದು ಮಾಜಿ ಪ್ರಧಾನಿ ಆಗ್ರಹಪಡಿಸಿದರು.
ಹೊಟ್ಟೆಪಾಡಿಗಾಗಿ ದೇವೇಗೌಡರು ಬಿಜೆಪಿ ಜತೆ ಹೋಗಿದ್ದಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ನೀಡಿರುವ ಲಘುವಾದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಂಡ್ಯದಲ್ಲಿ ಶುಕ್ರವಾರ ಲೋಕಸಭೆ ಚುನಾವಣೆಗಾಗಿ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
CM Siddaramaiah: ಇಂದು ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುಟ್ಟಣ್ಣ ಜಯಗಳಿಸಿರುವ ಹಿನ್ನೆಲೆಯಲ್ಲಿ ಕಂಗೇರಿಯ ಸೂಲಿಕೇರಿ ಮೈದಾನದಲ್ಲಿ ಆಯೋಜಿಸಿರುವ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
HD Deve Gowda: ಪಕ್ಷದ ರಾಜ್ಯ ಕಾವೇರಿ ಜೆ ಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಕಡೆ ಗ್ಯಾರಂಟಿ ಕೊಟ್ಟಿದ್ದೇವೆ, ಸಾಧನೆ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡು ಓಡಾಡುತ್ತಿದ್ದಾರೆ. ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸೋಮವಾರ ರಾಜ್ಯ ಜೆಡಿಎಸ್ ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಸೀಟು ಹಂಚಿಕೆ ಬಗ್ಗೆ JDS-BJP ನಡುವೆ ಯಾವುದೇ ಗೊಂದಲ ಇಲ್ಲ
ರಾಜ್ಯದ 28 ಕ್ಷೇತ್ರಗಳನ್ನ ಗೆಲ್ಲಬೇಕು ಎನ್ನುವುದೇ ನಮ್ಮ ಗುರಿ
ಕೆಂಪೇಗೌಡ ಏರ್ಪೋರ್ಟ್ನಲ್ಲಿ H.D.ಕುಮಾರಸ್ವಾಮಿ ಹೇಳಿಕೆ
ಶೀಘ್ರ ಸೀಟು ಹಂಚಿಕೆ ಗೊಂದಲ ನಿವಾರಣೆ- ನಿಖಿಲ್ ಕುಮಾರಸ್ವಾಮಿ
ರಾಷ್ಟ್ರನಾಯಕರು ಹಾಗೂ HDK-HDD ತೀರ್ಮಾನಿಸುತ್ತಾರೆ- ನಿಖಿಲ್
*ನೀವು ಪ್ರಧಾನಿಯಾದರೆ ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುತ್ತದೆಯೇ.." ಎಂದು ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ತೀಕ್ಷ್ಣವಾಗಿ ಪ್ರಶ್ನೆ ಮಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ʼಸೋ ಕಾಲ್ಡ್ ಗ್ಯಾರಂಟಿಗಳುʼ ಎಂದು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
ನೈಸ್ ಯೋಜನೆಯನ್ನು ರಾಜ್ಯ ಸರಕಾರ ವಶಕ್ಕೆ ಪಡೆಯಬೇಕು ಆಗ್ರಹಪಡಿಸಿರುವ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು; ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರಕಾರ ಮರು ವಶಪಡಿಸಿಕೊಳ್ಳಬೇಕು ಎಂದರು.
ಇಂದು ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ನ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು.
JDS Council & Legislature Meeting: ಪಕ್ಷದ ಶಿಸ್ತು ಉಲ್ಲಂಘನೆ, ವರಿಷ್ಠರ ಬಗ್ಗೆ ಅವಹೇಳಕಾರಿ ಹೇಳಿಕೆ ಮತ್ತು ತಮ್ಮದೇ ಒರಿಜಿನಲ್ ಜೆಡಿಎಸ್ ಎಂದಿರುವ ರಾಜ್ಯಾಧ್ಯಕ್ಷ ಸಿಎಂ ಇಬ್ರಾಯಿಂಗೆ ರಾಷ್ಟ್ರೀಯ ಅಧ್ಯಕ್ಷರು ಶೋಕಾಸ್ ನೋಟಿಸ್ ಜಾರಿಗೊಳಿಸುವ ಸಾಧ್ಯತೆ ಇದೆ.
ಕಾವೇರಿ ನೀರು ಹಂಚಿಕೆ ವಿವಾದ ಕುರಿತು ಪ್ರಧಾನಿ ಮೋದಿ ಅವರಿಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಸುದೀರ್ಘ ಪತ್ರ ಬರೆದಿದ್ದಾರೆ. ಎರಡು ರಾಜ್ಯಗಳಿಗೆ ಸಂಬಂಧವಿಲ್ಲದ, ತಟಸ್ಥವಾದ ಒಂದು ಸಮಿತಿಯನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಕಳಿಸಿ ವಸ್ತುನಿಷ್ಠ ಮಾಹಿತಿ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.