ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರ್ಕಾರವನ್ನೂ ಟೀಕಿಸಿಲ್ಲ. ಆದರೂ ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ನಮ್ಮ ಹೆಮ್ಮೆಯ ಸೇನೆಯ 40ಕ್ಕೂ ಹೆಚ್ಚು ವೀರಯೋಧರು ರಕ್ಷಣಾ ಕಾರ್ಯಕ್ಕೆ ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಈ ಬಗ್ಗೆ ಅವರೇ ಉತ್ತರಿಸಬೇಕು ಎಂದು ಎಚ್ಡಿಕೆ ಕುಟುಕಿದ್ದಾರೆ.
ಹಾಸನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆವತ್ತು ನಾನಾಗಲಿ ಅಥವಾ ದೇವೇಗೌಡರಾಗಲಿ ಕಾಂಗ್ರೆಸ್ʼನವರ ಮನೆ ಬಾಗಲಿಗೆ ಬಂದಿದ್ದವಾ? ದೇವೇಗೌಡರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಿದ್ದು ಕಮ್ಯುನಿಸ್ಟ್ ಪಕ್ಷಗಳು ಹಾಗೂ ಸಂಯುಕ್ತ ರಂಗದ ಅಂಗಪಕ್ಷಗಳು. ಒಬ್ಬ ಕನ್ನಡಿಗನನ್ನು ಪ್ರಧಾನಿ ಸ್ಥಾನದಿಂದ ತೆಗೆದವರು ಯಾರು? ನಾನು ಏನು ತಪ್ಪು ಮಾಡಿದ್ದೆ ಎಂದು ನನ್ನ ಸರಕಾರ ತೆಗೆದರು? ಇದರ ಬಗ್ಗೆಯೂ ಉಪ ಮುಖ್ಯಮಂತ್ರಿ ಹೇಳಬೇಕಲ್ಲವೇ ಎಂದು ಚಾಟಿ ಬೀಸಿದರು.
ನಾನು ರಾಜ್ಯಕ್ಕೆ ಬರುವುದನ್ನೇ ಸಹಿಸಲ್ಲ ಅಂದರೆ ನನ್ನಿಂದ ಏನು ನಿರೀಕ್ಷೆ ಮಾಡುತ್ತಾರೆ ಇವರು..? ನಾನು ಬರಲೇಬಾರದು ಎನ್ನುವ ರೀತಿ ಸಿಎಂ, ಡಿಸಿಎಂ ಹಾಗೂ ಸಚಿವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸ್ಥಳ ಪರಿಶೀಲನೆ ಮಾಡುವುದು ಜನಪ್ರತಿನಿಧಿಯಾಗಿ ನನ್ನ ಧರ್ಮ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಕೋವಿಡ್ ಸಮಯದಲ್ಲಿ ಮನೆಗೆ ಹೊರಗೆ ಕಾಲಿಡದ, ಜನರ ಸಂಕಷ್ಟಗಳನ್ನು ಕೇಳದ, ಜನರ ನೋವಿಗೆ ಮಿಡಿಯದ ಕುಮಾರಸ್ವಾಮಿಯವರಿಗೆ ಈಗ ರಾಜ್ಯಕ್ಕೆ, ರಾಜ್ಯದ ಜನರಿಗೆ ಅನುಕೂಲವಾಗುತ್ತದೆ ಎಂದು ನಿರೀಕ್ಷಿಸಲು ಸಾಧ್ಯವೇ?! ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಅಂಕೋಲಾ ಗುಡ್ಡ ಕುಸಿತ ಭೀಕರತೆಯನ್ನು ವೀಕ್ಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಣ್ಣು ತೆರವು ಮತ್ತಿತರೆ ಪರಿಹಾರ ಕಾರ್ಯಗಳ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಅಲ್ಲದೆ, ಮಳೆ ಪರಿಸ್ಥಿತಿಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಮೂಡಾದಲ್ಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ ಮಾಡಿಕೊಂಡಿದ್ದು, ಅವರ ವಿರುದ್ಧ ದೂರು ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ..
Actress Radhika Kumaraswamy: ಚಂದನವನದ ಖ್ಯಾತ ತಾರೆ ನಟಿ ರಾಧಿಕಾ ಕುಮಾರಸ್ವಾಮಿ ಇಂದು ಎಲ್ಲರಿಗೂ ಚಿರಪರಿಚಿತರು. ಆದರೆ, ರಾಧಿಕಾ ಕುಮಾರಸ್ವಾಮಿ ಅವರ ಮೊದಲ ಪತಿ ಎಚ್ಡಿ ಕುಮಾರಸ್ವಾಮಿ ಅವರಲ್ಲ ಎಂಬುದು ಸಾಕಷ್ಟು ಮಂದಿಗೆ ತಿಳಿದಿಲ್ಲ. ಚಿಕ್ಕ ವಯಸ್ಸಿನಲ್ಲಿ ಮದುವೆಯಾಗಿದ್ದ ರಾಧಿಕಾ ಅವರ ಬದುಕು ಹೇಗಿತ್ತು ಗೊತ್ತಾ?
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವರು ಶೋಕ ವ್ಯಕ್ತಪಡಿಸಿದ್ದಾರೆ.
ಕಾವೇರಿ ಸರ್ವಪಕ್ಷ ಸಭೆಗೆ ಗೈರಾದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, CWRC ಶಿಫಾರಸು ಹಿನ್ನಲೆ ಸರ್ವಪಕ್ಷ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಕರೆದಿದ್ದರು ಈ ಸಭೆಯನ್ನು? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದು ಹೋಗಿದೆ. ಕಬಿನಿಯಿಂದ ನೀರು ಹರಿದಿದೆ ಎಂದರು
ಕಿಂಗ್ ಆಫ್ ಕರಪ್ಶನ್ ಎಂದು ಜನ ನನ್ನನ್ನಾಗಲಿ,ನನ್ನ ಕುಟುಂಬದವರನ್ನು ಕರೆದಿಲ್ಲ. ಆ ರೀತಿ ಯಾರನ್ನು ಕರೆದಿದ್ದಾರೆ ಎಂದು ಚರ್ಚೆಗೆ ಬರಲಿ ತಿಳಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಮಾಡಿರುವುದನ್ನು ಪ್ರಸ್ತಾಪಿಸಿದ್ದಾರೆ. ಅವರ ಅಷ್ಟು ಆರೋಪಗಳು ವಿಧಾನ ಪರಿಷತ್ತಿನ ನಡವಳಿಕೆಗಳಲ್ಲಿ ದಾಖಲಾಗಿರುತ್ತದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಬಾಬು ತಿಳಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಗೆ ಸದ್ಯಕ್ಕೆ ಬ್ರೇಕ್
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರೇ ಮುಂದುವರಿಕೆ
ಆದ್ರೆ ಇನ್ನೂ ನಾಲ್ಕು ತಿಂಗಳು ಅಧ್ಯಕ್ಷ ಸ್ಥಾನ ಬದಲಾಗಲ್ಲ
ಕೇವಲ ಶಾಸಕಾಂಗ ಪಕ್ಷದ ನಾಯಕರ ಮಾತ್ರ ಬದಲಾಣೆ
ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರವಿದೆ. ಸೀಡಿ ಫ್ಯಾಕ್ಟರಿ ಬಂದ್ ಆಯಿತು. ಈಗ ಮುಡಾ ಫ್ಯಾಕ್ಟರಿ ಶುರುವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದರು.
ಇಂದು ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪವರ್ ಶೋ
ಡಿಕೆಶಿ ಜನಸ್ಪಂದನಕ್ಕೆ ದಳಪತಿ ʻಜನತಾ ದರ್ಶನʼ ಕೌಂಟರ್
ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಬೃಹತ್ ಕಾರ್ಯಕ್ರಮ
ಮೊದಲ ಬಾರಿಗೆ ಮಂಡ್ಯದಲ್ಲಿ ಕುಮಾರಸ್ವಾಮಿ ಜನತಾ ದರ್ಶನ
ಸಿಎಂ ಆಗಿದ್ದಾಗ ರಾಜ್ಯದಲ್ಲಿ ಅಪಾರ ಖ್ಯಾತಿ ತಂದುಕೊಟ್ಟಿದ್ದ ಜನತಾ ದರ್ಶನವನ್ನು ಕೇಂದ್ರ ಕೈಗಾರಿಕಾ ಮತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತೆ ರಾಜ್ಯದಲ್ಲಿ ಚಾಲನೆ ನೀಡಲಿದ್ದಾರೆ.
ಮುಖ್ಯವಾಗಿ ಯಂತ್ರೋಪಕರಣಗಳ ಕ್ಷಮತೆ, ಅವುಗಳ ಸದ್ಯದ ಸ್ಥಿತಿ, ಆಡಳಿತ ವ್ಯವಸ್ಥೆ, ಕಾರ್ಮಿಕರ ಸ್ಥಿತಿಗತಿಗಳ ಬಗ್ಗೆ ಬಗ್ಗೆ ಸುದೀರ್ಘ ಪರಿಶೀಲನೆ ನಡೆಸಿದರು. ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್ ಸೇರಿದಂತೆ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಕಾರ್ಖಾನೆಯ ವಿಸ್ತೃತ ಪರಿಶೀಲನೆ ನಡೆಸಿದರು
ನವದೆಹಲಿಯಿಂದ ಮಧ್ಯಾಹ್ನದ ನಂತರ ಕಾರ್ಖಾನೆಗೆ ಭೇಟಿ ನೀಡಿದ ಸಚಿವರು, ಇಡೀ ಕಾರ್ಖಾನೆಯನ್ನು ಒಂದು ಸುತ್ತು ಹಾಕಿ ಉತ್ಪಾದನಾ ಚಟುವಟಿಕೆ ವೀಕ್ಷಿಸಿದರು ಹಾಗೂ ಯಂತ್ರಗಳ ಕಾರ್ಯಾಚರಣೆ ವೇಳೆಯಲ್ಲೇ ಉತ್ಪಾದನೆ ಕ್ಷಮತೆಯನ್ನು ಖುದ್ದು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದರು, ಹೆಜ್ಜೆ ಹೆಜ್ಜೆಗೂ ಅಧಿಕಾರಿಗಳಿಂದ ಮಾಹಿತಿ ಕೇಳಿ ತಿಳಿದುಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.