Asani Cyclone Alert: ಬಂಗಾಳಕೊಲ್ಲಿಯಲ್ಲಿ ಮೂಡಿರುವ 'ಅಸಾನಿ' ಚಂಡಮಾರುತ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯ ಸಮೀಪ ವಾಯವ್ಯ ದಿಕ್ಕಿನಲ್ಲಿ ಚಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಅದೇ ಸಮಯದಲ್ಲಿ, ಈ ಪ್ರದೇಶಗಳಲ್ಲಿ ಎನ್ಡಿಆರ್ಎಫ್ ನ 50 ತಂಡಗಳನ್ನು ನಿಯೋಜಿಸಲಾಗಿದೆ.
ವರುಣನ ರೌದ್ರಾವತಾರಕ್ಕೆ 90ಕ್ಕೂ ಹೆಚ್ಚು ತಂಗಿನಮರ ನೆಲಸಮ. ಕೆ ಆರ್ ಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ತೆಂಡೇಕೆರೆ ಗ್ರಾಮಪಂಚಾಯತಿಯ ವ್ಯಾಪ್ತಿಗೆ ಬರುವ ಅಂಚನಹಳ್ಳಿ ಗ್ರಾಮದಲ್ಲಿ ಘಟನೆ.
ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣವನ್ನು ಮಾರ್ಚ್ 1ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು. ಆದರೆ, ಭಾನುವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ಕ್ರೀಡಾಂಗಣದ ಗ್ಯಾಲರಿ ಧರೆಗುರುಳಿದೆ.
ಹುಬ್ಬಳ್ಳಿಯಲ್ಲಿ ನಿನ್ನೆ ಭಾರೀ ಗಾಳಿ ಸಹಿತ ಮಳೆಯಾಗಿದೆ. ಈ ಸಂದರ್ಭದಲ್ಲಿ ಸ್ಕೂಟಿಯಲ್ಲಿ ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿನಿಯರು ಬಿರುಗಾಳಿಯ ಹೊಡೆತಕ್ಕೆ ಸಿಲುಕಿ ಪರದಾಡಿದ್ದಾರೆ. ಈ ರೀತಿ ವಿದ್ಯಾರ್ಥಿಗಳು ಗಾಳಿ ಮಳೆಗೆ ಸಿಲುಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ ಆರ್ಭಟಕ್ಕೆ ನಗರದ ಹಲವೆಡೆ ಮರಗಳು ಧರೆಗುರುಳಿವೆ. ನಗರದ ಶ್ರೀರಾಂಪುರ, ಮಲ್ಲೇಶ್ವರಂ, ಗಾಂಧಿನಗರ, ಯಶವಂತಪುರ ಸೇರಿ ಹಲವೆಡೆ ಮರಗಳು ಧರೆಗುರುಳಿವೆ. ಪಶ್ಚಿಮ ವಲಯದಲ್ಲೇ ಅತಿ ಹೆಚ್ಚು ಮರ ಬಿದ್ದಿರೋ ಬಗ್ಗೆ ವರದಿ ಆಗಿದೆ.
ಗದಗ, ಶಿವಮೊಗ್ಗ, ವಿಜಯಪುರದಲ್ಲಿ ಧಾರಾಕಾರ ಮಳೆಯಾಗಿದೆ.. ಗದಗ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಮೇತ ಧಾರಾಕಾರ ಮಳೆಯಾಗಿದೆ. ಶಿವಮೊಗ್ಗ ಗ್ರಾಮೀಣ ಭಾಗಗಳಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.