Gyanvapi Issue: ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ಪೀಠವು ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರ ವಾದವನ್ನು ಪರಿಗಣಿಸಿತು. ನ್ಯಾಯಾಲಯವು ಶುಕ್ರವಾರ ಅರ್ಜಿಯನ್ನು ವಿಚಾರಣೆಗೆ ಪಟ್ಟಿಮಾಡಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಇರುವ ಆದಾಯ ಗಳಿಕೆ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ಮಧ್ಯಂತರ ತಡೆಯಾಜ್ಞೆಯನ್ನು ಎಪ್ರಿಲ್ ೧೩ ರವವರೆಗೆ ವಿಸ್ತರಿಸಿದೆ.
MLA Madal Virupakshappa: ಕಳೆದ ತಿಂಗಳು ಲೋಕಾಯುಕ್ತರು ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಬೆಂಗಳೂರಿನ ವೈಯಕ್ತಿಕ ಕಚೇರಿ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಶಾಸಕರ ಪುತ್ರ ಮಾಡಾಳು ಪ್ರಶಾಂತ ಅವರು 40 ಲಕ್ಷ ರೂ. ಹಣವನ್ನು ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು. ಇನ್ನು ಕಚೇರಿ ಹಾಗೂ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಬರೋಬ್ಬರಿ 6 ಕೋಟಿ ರೂ. ಹಣ ಲಭ್ಯವಾಗಿತ್ತು.
ನಿರೀಕ್ಷಣಾ ಜಾಮೀನು ಕೋರಿ ಮಾಡಾಳ್ ವಿರೂಪಾಕ್ಷಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.. ಇಂದೇ ವಿಚಾರಣೆಗೆ ತೆಗೆದುಕೊಳ್ಳಲು ವಕೀಲರು ಮನವಿ ಮಾಡಿದ್ದಾರೆ.. ಹೈಕೋರ್ಟ್ ವಿಚಾರಣೆ ನಾಳೆಗೆ ಮುಂದೂಡಿದೆ.
Interesting Villages In India: ಆರಂಭದಲ್ಲಿ, ಈ ಗ್ರಾಮದ ಜನರ ಹೆಸರುಗಳು ಹಣ್ಣುಗಳು ಮತ್ತು ಪ್ರಾಣಿಗಳೊಂದಿಗೆ ಸಂಬಂಧ ಹೊಂದಿದ್ದವು. ಈ ಜನರು ಪ್ರಪಂಚದ ವಿಷಯಗಳ ಬಗ್ಗೆ ತಿಳಿದುಕೊಳ್ಳಲು ಪ್ರಾರಂಭಿಸಿದರು. ಅದೇ ರೀತಿಯಲ್ಲಿ ಈ ಜನರು ತಮ್ಮ ಮಕ್ಕಳಿಗೆ ಆ ಪ್ರಸಿದ್ಧ ವಿಷಯಗಳು ಮತ್ತು ವ್ಯಕ್ತಿತ್ವಗಳ ಹೆಸರನ್ನು ಇಡಲು ಪ್ರಾರಂಭಿಸಿದರು. ಈ ಗ್ರಾಮದಲ್ಲಿ ವಾಸಿಸುವ ಜನರ ಹೆಸರುಗಳು ಅಮಿತಾಬ್, ಸಲ್ಮಾನ್, ಶಾರುಖ್ ಮತ್ತು ಅಮೀರ್ ಎಂದೆಲ್ಲಾ ಇದೆ.
ಕರ್ನಾಟಕದ ಶಾಲೆ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕುರಿತಾಗಿ ಇಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ. ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಬಳಿಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
ಗದಗ ನಗರದ ಹೃದಯ ಭಾಗದಲ್ಲಿರುವ ಬೃಹತ್ ಐತಿಹಾಸಿಕ ಭೀಷ್ಮ ಕೆರೆ ಒತ್ತುವರಿ ಮಾಡಿಕೊಂಡು ಬೃಹತ್ ಕಟ್ಟಡಗಳನ್ನ ನಿರ್ಮಿಸಿದ್ದ ಪ್ರಭಾವಿ ಕುಳಗಳಿಗೆ ಈಗ ಢವಢವ ಶುರುವಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಒತ್ತುವರಿ ಸರ್ವೇ ಕಾರ್ಯ ಆರಂಭವಾಗಿದೆ.
ಕರ್ನಾಟಕ ಸರ್ಕಾರಕ್ಕೆ ಭಾರೀ ಹಿನ್ನಡೆಯಲ್ಲಿ, ಸಾರ್ವಜನಿಕ ಸೇವಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ತನಿಖೆಗಾಗಿ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ನ್ಯಾಯಾಲಯವು ಅಧಿಕಾರವನ್ನು ಮರುಸ್ಥಾಪಿಸಿದೆ.
ಜಾರ್ಖಂಡ್ ಹೈಕೋರ್ಟ್ ನ್ಯಾಯಾಧೀಶ ಡಾ.ಎಸ್.ಎನ್.ಪಾಠಕ್ ಅವರ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ಆದೇಶ ನೀಡಿದೆ. ಪೊಲೀಸ್ ಇಲಾಖೆಯ ಇತ್ತೀಚಿನ ನಿರ್ಧಾರದಿಂದ ಸಾಮಾನ್ಯ ವರ್ಗದ ನೌಕರರ ಬಡ್ತಿ ಪಡೆಯುವ ಅವಕಾಶಕ್ಕೆ ಅಡ್ಡಿಯಾಗಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು. ಈ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ಅರ್ಜಿದಾರರ ಪರವಾಗಿ ವಕೀಲ ದಿವಾಕರ್ ಉಪಾಧ್ಯಾಯ ವಾದ ಮಂಡಿಸಿದರು
ಟ್ರಾಫಿಕ್ ಅಥವಾ ಸಿವಿಲ್ ಪೊಲೀಸರು ಡ್ರೈವಿಂಗ್ ಲೈಸೆನ್ಸ್ ನೀಡುವುದಿಲ್ಲ, ಹಾಗಾಗಿ ಡ್ರೈವಿಂಗ್ ಲೈಸೆನ್ಸ್ ಅನ್ನು ಅಮಾನತು ಅಥವಾ ರದ್ದುಗೊಳಿಸುವ ಹಕ್ಕು ಸಹ ಅವರಿಗೆ ಇರುವುದಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಸ್ಪಷ್ಟಪಡಿಸಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.