ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳೆ ಹಿಜಾಬ್ ಗೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಏಳು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ತಕ್ಷಣಕ್ಕೆ ಜಾರಿಯಾಗುವಂತೆ ಏಳು ಜನರನ್ನ ಅಮಾನತು ಮಾಡಿ ಗದಗ ಡಿಡಿಪಿಐ ಜಿಎಮ್ ಬಸವಲಿಂಗಪ್ಪ ಆದೇಶ ಹೊರಡಿಸಿದ್ದಾರೆ.
ಕೋವಿಡ್ ನಂತರ ಇದೇ ಪ್ರಪ್ರಥಮ ಬಾರಿಗೆ ಸಾಧಾರಣ ರೀತಿಯಲ್ಲೇ SSLC ಪರೀಕ್ಷೆ ನಡೆಸಲಾಗಿದೆ. 8ನೇ ಹಾ ಗೂ 9ನೇ ತರಗತಿಗಳನ್ನು ಆನ್ಲೈನ್ನಲ್ಲೇ ಅಟೆಂಡ್ ಆಗಿ ಪಾಸ್ ಆಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ದೈಹಿಕವಾಗಿ ಹಾಜರಾಗಿ ಇಂದು SSLC ಪರೀಕ್ಷೆ ಬರೆದಿದ್ದಾರೆ.
ಈ ವರ್ಷ ಶೈಕ್ಷಣಿಕ ವರ್ಷ ಮುಗಿದಿದ್ದು, ಪರೀಕ್ಷೆಗಳು ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಹೆತ್ತವರು ಮಕ್ಕಳ ಭವಿಷ್ಯದ ಬಗ್ಗೆ ಗಮನ ಹರಿಸಬೇಕು ಎಂದು ಉಡುಪಿಯ ಧಾರ್ಮಿಕ ಮುಖಂಡ ರೆಹಮಾನ್ ರಜ್ವೀ ಕರೆ ನೀಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕೊರೊನಾವೈರಸ್ (Coronavirus) ಭಯದ ನಡುವೆ ಕೇವಲ ಮೂರು ದಿನ ಮಾತ್ರ ಪರೀಕ್ಷೆ ನಡೆದಿತ್ತು. ಆದರೆ ಈ ವರ್ಷ ಯಾವುದೇ ಭಯವಿಲ್ಲದೆ ಪರೀಕ್ಷೆ ನಡೆಯಲಿದೆ. ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ, ಬೆಳಗ್ಗೆ 10:30ಕರಿಂದ ಮಧ್ಯಾಹ್ನ 01:45ರವರೆಗೆ ಪರೀಕ್ಷೆ ನಡೆಯಲಿದೆ.
ಮಾರ್ಚ್ 28ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದೆ.
ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಿಜಾಬ್ ಧರಿಸಿಕೊಂಡು ಬಾರದಂತೆ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ರಾಜ್ಯ ಹೈಕೋರ್ಟ್ (High Court) ಹಿಜಾಬ್ ಕುರಿತು ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಜೊತೆಗೆ ರಾಜ್ಯ ಬಂದ್ ಕರೆ ಕೊಟ್ಟ ಕೆಲ ಮುಸ್ಲಿಂ ಸಂಘಟನೆಗಳ ನಡೆಯ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಚರ್ಚೆ ನಡೆಸಲಾಯಿತು.
ಹಿಜಾಬ್ ವಿವಾದದ ಕುರಿತಂತೆ ರಾಜ್ಯ ಹೈಕೋರ್ಟ್ ತೀರ್ಪಿನಿಂದಾಗಿ ಅಸಮಾಧಾನಗೊಂಡಿರುವ ಸಮುದಾಯದ ಮುಖಂಡರು ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಆದರೆ, ಅವರು ನ್ಯಾಯಾಲಯದ ತೀರ್ಪು ಧಿಕ್ಕರಿಸಿ ಈ ಪ್ರತಿಭಟನೆ ಮಾಡುವುದಾಗಿ ಹೇಳಿಲ್ಲ ಎಂಬುದನ್ನು ಸಿದ್ದರಾಮಯ್ಯ ಉಲ್ಲೇಖಿಸಿದರು.
ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಹಾಗೂ ಯಾರ ಮೇಲೂ ಯಾವ ರೀತಿಯ ಒತ್ತಾಯವನ್ನೂ ಹೇರದೆ ಈ ಬಂದ್ಗೆ ಬೆಂಬಲ ಸೂಚಿಸುವಂತೆ ಧರ್ಮಗುರುಗಳ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ.
ಧರ್ಮ ಮತ್ತು ಅದರ ನಂಬಿಕೆಗಳಿಗಿಂತ ಸಂವಿಧಾನವು ಸರ್ವೋಚ್ಚವಾಗಿದೆ ಎಂದು ಹೈಕೋರ್ಟ್ನ ತೀರ್ಪು ಸಾಬೀತುಪಡಿಸಿದೆ. ನ್ಯಾಯಾಲಯದ ತೀರ್ಪನ್ನು ಗೌರವಿಸುವಂತೆ ಮತ್ತು ಇನ್ನು ಮುಂದೆ ಈ ವಿಷಯವನ್ನು ಅನಗತ್ಯವಾಗಿ ವಿವಾದ ಮಾಡದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿನಂತಿಸಿದರು.
ನಮಗೆ ನ್ಯಾಯಾಲಯದ ಮೇಲೆ ಬಹಳ ನಿರೀಕ್ಷೆ ಇತ್ತು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಬಹಳ ಭರವಸೆ ಇತ್ತು. ಆದರೆ ಹೈಕೋರ್ಟ್ ನಲ್ಲಿ ತೀರ್ಪು ನಮ್ಮ ವಿರುದ್ಧ ಬಂದಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಹಿಜಾಬ್ ತೆಗೆದು ಪರೀಕ್ಷೆ ಬರೆಯುವಂತೆ ಸೂಚಿಸಿದಾಗ ಅದಕ್ಕೆ ಒಪ್ಪದ ವಿದ್ಯಾರ್ಥಿಗಳು ಕೋರ್ಟ್ ಆದೇಶ ಬರುವವರೆಗೂ ಕಾಯುವುದಾಗಿ ಹೇಳಿದ್ದರು. ಆದರೆ ಕೋರ್ಟ್ ಆದೇಶ ಬಂದ ನಂತರ ಗ ಕ್ಲಾಸ್ ಬಿಟ್ಟು ಹೋಗುವುದಾಗಿ ಹೇಳಿ ಪರೀಕ್ಷೆ ಬಿಟ್ಟು ಹೊರ ನಡೆದಿದ್ದಾರೆ.
Hijab Row: ಹಿಜಾಬ್ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್ (Karnataka High Court) ತೀರ್ಪು ನೀಡಿದ್ದು, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದೆ. ಅದರ ನಂತರ AIMIM ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಒಪ್ಪಲು ನಿರಾಕರಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ತಾವು ಒಪ್ಪುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.
Hijab Verdict: ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಸಮಾಜದ ಮುಖಂಡರು ತೀರ್ಮಾನ ತೆಗೆದುಕೊಳ್ತಾರೆ ಎಂದು ಎಂಎಲ್ ಸಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.