Himachal Pradesh New CM candidate : ಮುಖ್ಯಮಂತ್ರಿ ಆಯ್ಕೆಯನ್ನು ಹೈಕಮಾಂಡ್ ನಿರ್ಧರಿಸುತ್ತದೆ. ರಾಜ್ಯದಲ್ಲಿ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಸೋನಿಯಾ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದು, ಇದೀಗ ಫಲಿತಾಂಶ ಎಲ್ಲರ ಮುಂದಿದೆ ಎಂದು ಹೇಳಿದ್ದಾರೆ.
Himachal Pradesh Election Result 2022 : ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಟ್ರೆಂಡ್ಗಳ ಪ್ರಕಾರ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಆದರೆ, ಕಾಂಗ್ರೆಸ್ಗೆ ‘ಆಪರೇಷನ್ ಕಮಲ’ದ ಭೀತಿ ಕಾಡುತ್ತಿದೆ.
ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಲು ಮೋದಿ ರಣತಂತ್ರ. ಗುಜರಾತ್, ಹಿಮಾಚಲ ಪ್ರದೇಶದಲ್ಲಿ BJP ಮಾಸ್ಟರ್ ಪ್ಲಾನ್. ಕರ್ನಾಟಕದಲ್ಲೂ ಕಮಲ ಅರಳಿಸಲು ಮೋದಿ, ಶಾ ತಂತ್ರ. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಜತೆ ಮಹತ್ವದ ಚರ್ಚೆ.
ಗುಜರಾತ್, ಹಿಮಾಚಲ ಪ್ರದೇಶ ಚುನಾವಣೋತ್ತರ ಸಮೀಕ್ಷೆ. ಗುಜರಾತ್ ಮತ್ತೆ ಬಿಜೆಪಿ ತೆಕ್ಕೆಗೆ, ಹಿಮಾಚಲ ಪ್ರದೇಶ ಅತಂತ್ರ. ಮತಗಟ್ಟೆ ಸಮೀಕ್ಷೆಯಲ್ಲಿ ಗುಜರಾತ್ನಲ್ಲಿ 7ನೇ ಬಾರಿ ಅಧಿಕಾರ? ಹಿಮಾಚಲ ಪ್ರದೇಶದಲ್ಲಿಯೂ ಬಿಜೆಪಿ ಮೇಲುಗೈ ಭವಿಷ್ಯ.
Viral Post: ಭಾಕ್ರಾ ನಂಗಲ್ ಅಣೆಕಟ್ಟಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರವನ್ನು ಓದಿದ ನಂತರ ಶಿಕ್ಷಕರು ಆಶ್ಚರ್ಯಚಕಿತರಾದರು. ಏಕೆಂದರೆ ಆ ಉತ್ತರದಲ್ಲಿ ವಿದ್ಯಾರ್ಥಿಯು ಹೀಗೆ ಬರೆದಿದ್ದ. “ಸಟ್ಲೆಜ್ ನದಿಯ ಮೇಲೆ ಭಾಕ್ರಾ ನಂಗಲ್ ಅಣೆಕಟ್ಟನ್ನು ನಿರ್ಮಿಸಲಾಗಿದೆ” ಎಂದು ಬರೆದಿದ್ದ. ಇದು ಒಂದೇ ಒಂದು ವಿಷಯ ತಿಳಿದಿತ್ತು ಎಂದು ತೋರುತ್ತದೆ.
Himachal Pradesh Assembly Election 2022: ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮೊದಲೇ 26 ಮಂದಿ ಪ್ರದೇಶ ಕಾಂಗ್ರೆಸ್ ಮುಖಂಡರು ಮತ್ತು ಪದಾಧಿಕಾರಿಗಳು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷ ಭಾರೀ ಹಿನ್ನಡೆ ಅನುಭವಿಸುವಂತಾಗಿದೆ.
ಸಂಕಲ್ಪ ಪತ್ರದಲ್ಲಿ ಬಿಜೆಪಿ ಹಲವು ಭರವಸೆಗಳನ್ನು ನೀಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಶಿಮ್ಲಾದಲ್ಲಿ ಬಿಡುಗಡೆ ಮಾಡಿದರು.
3 ದಶಕಗಳಿಂದ ದೆಹಲಿಯಲ್ಲಿ ಅಸ್ಥಿರತೆ ಇತ್ತು, ಸರ್ಕಾರಗಳು ಬಂದವು-ಹೋದವು, ಪದೇ ಪದೇ ನಡೆದ ಚುನಾವಣೆಯಲ್ಲಿ ಸಾವಿರಾರು ಕೋಟಿ ರೂಪಾಯಿ ವ್ಯರ್ಥವಾಯಿತು ಅಂತಾ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.
ನಟಿ ಕಂಗನಾ ರಣಾವತ್ ರಾಜಕೀಯ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಶನಿವಾರದಂದು ನಡೆದ ಕಾರ್ಯಕ್ರಮದಲ್ಲಿ ಕಂಗನಾ 2024ರ ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಿಂದ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.
ಬಾಬಾ ಕೇದಾರನಾಥದ ಪುಣ್ಯಭೂಮಿಯನ್ನು ತಲುಪಿದ ಪ್ರಧಾನಿ ಮೋದಿ ಅವರು ಹಿಮಾಚಲ ಪ್ರದೇಶದ ಸ್ಥಳೀಯ ವಿಶೇಷ ಉಡುಗೆಯನ್ನು ಧರಿಸಿ ಕೇದಾರನಾಥನ ದರ್ಶನಕ್ಕೆ ಹೋಗಿರುವುದು ತುಂಬಾ ವಿಶೇಷವಾಗಿತ್ತು.
ದೇಶದ ಹಲವು ರಾಜ್ಯಗಳಲ್ಲಿ ಮಳೆಯ ರುದ್ರನರ್ತನ ಇನ್ನೂ ನಿಂತಿಲ್ಲ. ಅದರಲ್ಲೂ ಉತ್ತರಾಖಂಡ್, ಹಿಮಾಚಲ ಪ್ರದೇಶ ಮತ್ತು ಒಡಿಶದಲ್ಲೂ ಕಳೆದೆರಡು ದಿನದಿಂದ ವರುಣ ಅಬ್ಬರಿಸ್ತಿದಾನೆ. ಇದರಿಂದ ಲಕ್ಷಾಂತರ ಮಂದಿ ಸಂತ್ರಸ್ತರಾಗಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹವು ಹಲವು ಪ್ರದೇಶಗಳಲ್ಲಿ ಹಾನಿಯನ್ನುಂಟುಮಾಡಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಈವರೆಗೆ 22 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಉತ್ತರಾಖಂಡದ ಗೋವಿಂದ್ ಘಾಟ್ ಗುರುದ್ವಾರ, ಋಷಿಕೇಶದ ಗೀತಾ ಭವನ, ಹಿಮಾಚಲ ಪ್ರದೇಶದ ನ್ಯಿಂಗ್ಮಪಾ ಮೊನಾಸ್ಟ್ರೀ ಮತ್ತು ಆಂಧ್ರಪ್ರದೇಶದ ತಿರುಪತಿ ಬಾಲಾಜಿಗೆ ಭೇಟಿ ನೀಡುವ ಅವಕಾಶ ನಿಮಗೆ ಸಿಕ್ಕಿದರೆ, ನೀವು ಅದನ್ನು ಮಿಸ್ ಮಾಡಿಕೊಳ್ಳಬೇಡಿ. ಏಕೆಂದರೆ ಈ ಪ್ರದೇಶಗಳಲ್ಲಿ ಪ್ರಕೃತಿ ಸೌಂದರ್ಯದ ಜೊತೆಗೆ ಸೌಲಭ್ಯಗಳು ಉಚಿತವಾಗಿ ಸಿಗುತ್ತವೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಇಂದಿನಿಂದ ಜುಲೈ 25 ರವರೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಜುಲೈ 26 ರವರೆಗೆ ಮತ್ತು ಪಂಜಾಬ್ನಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಸಿಡಿಲು ಸಹಿತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಜುಲೈ 26 ರವರೆಗೆ ಮತ್ತು ಹರಿಯಾಣದಲ್ಲಿ ಜುಲೈ 25 ರವರೆಗೆ ಮಳೆಯಾಗುವ ಮುನ್ಸೂಚನೆ ಇದೆ.
ಕೇಂದ್ರದ ಮೋದಿ ಸರ್ಕಾರಕ್ಕೆ 8 ವರ್ಷ ಪೂರ್ಣ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಗರೀಬ್ ಕಲ್ಯಾಣ್ ಸಮ್ಮೇಳನ ಆಯೋಜಿಸಲಾಗಿತ್ತು. ಈ ಸಮ್ಮೇಳನ ಉದ್ಘಾಟಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು.
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬಿಜೆಪಿಗೆ ಸೇರ್ಪಡೆಯಾಗಲು ಮುಂದಾಗಿದ್ದಾರಾ? ಎನ್ನುವ ಪ್ರಶ್ನೆ ಈಗ ಎಲ್ಲರಲ್ಲೂ ಎದುರಾಗಿದೆ. ಹೌದು, ಮೇ 12 ರಿಂದ ಮೇ 15 ರವರೆಗೆ ಧರ್ಮಶಾಲಾದಲ್ಲಿ ನಡೆಯಲಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಅಧಿವೇಶನದಲ್ಲಿ ರಾಹುಲ್ ದ್ರಾವಿಡ್ ಅವರ ಉಪಸ್ಥಿತಿ ಈಗ ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಜನವರಿ 3 ರ ಮೊದಲು ಕೆಲಸ ಮಾಡುವ ಮತ್ತು ಹೆಚ್ಚಿನ ವೇತನ ಶ್ರೇಣಿಯಿಂದ ವಂಚಿತರಾದ ನೌಕರರು ಇತರರಿಗೆ ಸಮಾನವಾಗಿ ಸಂಬಳವನ್ನು ಪಡೆಯುತ್ತಾರೆ ಎಂದು ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.