ಕಾಪಿರೈಟ್ ಕೇಸ್ ಎದುರಿಸುತ್ತಿದ್ದ ಕಾಂತಾರ ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ವರಾಹ ರೂಪಂ ಹಾಡನ್ನು ಪ್ರಸಾರ ಮಾಡದಂತೆ ನೀಡಿದ್ದ ಅದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಇದರಿಂದ ಹೊಂಬಾಳೆ ಫಿಲಂಸ್ಗೆ ಗೆಲುವು ಲಭಿಸಿದಂತಾಗಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು "ಕೆಜಿಎಫ್" ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, "ಕಾಂತಾರ" ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ವಿಪಕ್ಷ ನಾಯಕ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ಭಾರತದಾದ್ಯಂತ ಕಾಂತಾರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಚಿತ್ರದ ‘ವರಾಹ ರೂಪಂ..’ ಹಾಡು ಕಾಪಿರೈಟ್ ವಿವಾದ ಎದುರಿಸುತ್ತಿದೆ. ಅಲ್ಲದೆ, ʼತೈಕ್ಕುಡಂ ಬ್ರಿಡ್ಜ್ʼ ಹಣಕ್ಕಾಗಿ ಇದೆಲ್ಲವನ್ನು ಮಾಡುತ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಈ ಕುರಿತು ಮಾತನಾಡಿರುವ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ನ ಸದಸ್ಯರೊಬ್ಬರು ಹಣ ಬೇಕಿಲ್ಲ, ಹಾಡಿಗೆ ಕ್ರಿಡಿಟ್ ಹಾಕಿದ್ರೆ ಸಾಕು ಎಂದಿದ್ದಾರೆ.
ಪೊಸ್ಟರ್ನಿಂದಲೇ ಅಖಂಡ ಭಾರತ ಸಿನಿ ರಂಗದಲ್ಲಿ ಕುತೂಹಲ ಮೂಡಿಸಿದ್ದ ಪ್ರಶಾಂತ್ ನೀಲ್ ನಿರ್ದೇಶನದ ಹಾಗೂ ನಟ ಪ್ರಭಾಸ್ ನಟನೆಯ ʼಸಲಾರ್ʼ ಸಿನಿಮಾದ ಎರಡನೇ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಹೈಪ್ ಹೆಚ್ಚಿಸಿದೆ. ಮಾಲಿವುಡ್ ಸ್ಟಾರ್ ಖ್ಯಾತ ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಅವರ ರಗಡ್ ಲುಕ್ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ.
ಪೊಸ್ಟರ್ನಿಂದಲೇ ಅಖಂಡ ಭಾರತ ಸಿನಿ ರಂಗದಲ್ಲಿ ಕುತೂಹಲ ಮೂಡಿಸಿದ್ದ ಪ್ರಶಾಂತ್ ನೀಲ್ ನಿರ್ದೇಶನದ ಹಾಗೂ ನಟ ಪ್ರಭಾಸ್ ನಟನೆಯ ʼಸಲಾರ್ʼ ಸಿನಿಮಾದ ಎರಡನೇ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಹೈಪ್ ಹೆಚ್ಚಿಸಿದೆ. ಮಾಲಿವುಡ್ ಸ್ಟಾರ್ ಖ್ಯಾತ ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಅವರ ರಗಡ್ ಲುಕ್ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ.
ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ "ಧೂಮಂ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, "ಲೂಸಿಯಾ" ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಸಿನಿಮಾಗಳನ್ನ ತೆರೆ ಮೇಲೆ ತಂದು ಯಶಸ್ವಿಯಾಗಿರುವ ನಿರ್ದೇಶಕ, ನಟ ರಿಷಬ್ ಶೆಟ್ಟಿ ಸದ್ಯ ʼಕಾಂತಾರʼದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಕಾಂತಾರ ಟ್ರೈಲರ್ ಅಭಿಮಾನಿಗಳಲ್ಲಿ ಕುತೂಹಲ ಮೂಡುವಂತೆ ಮಾಡಿದೆ. ಸದ್ಯ ಚಿತ್ರತಂಡ ಸಿನಿಮಾದ ಮೇಕಿಂಗ್ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಚಿತ್ರದ ಮೇಲಿನ ಕಾನ್ಫಿಡೆನ್ಸ್ ಹೆಚ್ಚಿಸಿದೆ.
ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವ "ಸಿಂಗಾರ ಸಿರಿಯೆ" ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ತೋರಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ.
ಕೆಜಿಎಫ್-1' ಹಾಗೂ 'ಕೆಜಿಎಫ್-2' ಮೂಲಕ ಇಡೀ ಜಗತ್ತಿನ ಗಮನ ಕನ್ನಡ ಸಿನಿಮಾ ಇಂಡಸ್ಟ್ರಿ ಮೇಲೆ ಬೀಳುವಂತೆ ಮಾಡಿದ 'ಹೊಂಬಾಳೆ' ಸಂಸ್ಥೆ, ಈಗ ದೊಡ್ಮನೆಯ ಮತ್ತೊಂದು ಕುಡಿಯನ್ನ ಸ್ಯಾಂಡಲ್ವುಡ್ಗೆ ಪರಿಚಯ ಮಾಡುತ್ತಿದೆ. ಯುವರಾಜ್ ನಾಯಕನಾಗಿ ನಟಿಸಲು ಸಿನಿಮಾ ಸಿದ್ಧವಾಗ್ತಾ ಇದ್ದು, ಈ ಸಿನಿಮಾಗೆ 'ವಿಶ್ವ ಸುಂದರಿ' ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ ಬಲವಾಗಿ ಹರಿದಾಡುತ್ತಿದೆ.
ಚಲನಚಿತ್ರ ನಿರ್ಮಾಣದಲ್ಲಿ ಯಶಸ್ಸಿನ ಓಟ ನಡೆಸುತ್ತಿರುವ ಹೊಂಬಾಳೆ ಫಿಲಂಸ್ ತನ್ನ ಚೊಚ್ಚಲ ಮಲಯಾಳಂ ಚಲನಚಿತ್ರವನ್ನು ಘೋಷಿಸಿದ್ದು, ಮಲಯಾಳಂನ 'ಸೂಪರ್ ಸ್ಟಾರ್' ಪೃಥ್ವಿರಾಜ್ ಸುಕುಮಾರನ್ ಅವರು ಲೀಡ್ ರೋಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸಿನಿಮಾ ನೋಡಿಲ್ಲ ಅಂದ್ರೆ ಯಾರಾದ್ರೂ ಸತ್ತು ಹೋಗ್ತಾರಾ..? ಇಲ್ಲ ಅಲ್ವಾ..? ಆದ್ರೆ ಇಲ್ಲೊಬ್ಬ ಹುಚ್ಚು ಅಭಿಮಾನಿ ಅಂತಹ ಬೆದರಿಕೆ ಪತ್ರ ಬರೆದಿದ್ದಾನೆ. ಅದು ಬೇರೆ ಯಾರಿಗೂ ಅಲ್ಲ, ಟಾಲಿವುಡ್ ಯಂಗ್ ರೆಬೆಲ್ ಪ್ರಭಾಸ್ ಅವರಿಗೆ..!
YuvaRajkumar: ಕೆಜಿಎಫ್ 2 ಯಶಸ್ಸಿನಲ್ಲಿರುವ ಹೊಂಬಾಳೆ ಫಿಲ್ಮ್ಸ್ ಮುಂದಿನ ಸಿನಿಮಾಗಳನ್ನು ಸಹ ಘೋಷಣೆ ಮಾಡಿದೆ. ಈಗಾಗಲೇ ಹಲವು ಬಿಗ್ಬಜೆಟ್ ಚಿತ್ರಗಳನ್ನು ಘೋಷಿಸಿದೆ. ಇದೀಗ ಮತ್ತೊಂದು ವಿಚಾರ ಸಿನಿಪ್ರಿಯರ ಸಂತಸಕ್ಕೆ ಕಾರಣವಾಗಿದೆ. ದೊಡ್ಮನೆ ಉತ್ತರಾಧಿಕಾರಿಗೆ ಹೊಂಬಾಳೆ ಫಿಲ್ಮ್ಸ್ ಮುನ್ನುಡಿ ಬರೆಯಲಿದೆ.
YuvaRajkumar: ಈಗಾಗಲೇ ರಾಘವೇಂದ್ರ ರಾಜ್ಕುಮಾರ್ ಎರಡನೇ ಪುತ್ರ ಯುವರಾಜ್ಕುಮಾರ್ ಎಂಟ್ರಿಗೆ ಸಕಲ ಪ್ರಯತ್ನವೂ ನಡೆಯುತ್ತಿದೆ. ಹೊಂಬಾಳೆ ಫಿಲ್ಮ್ಸ್ ಘೋಷಣೆಯ ಬೆನ್ನಲ್ಲೇ ನೆಟ್ಟಿಗರು ತಮ್ಮ ಅನಿಸಿಕೆಗಳ ಮೂಲಕ ಈ ಘೋಷಣೆಯ ಬಗ್ಗೆ ಊಹಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.