CM Basavaraj Bommai Tested Positive For Covid-19 - ರಾಜ್ಯ ಮುಖ್ಯಮಂತ್ರಿ (Karnataka CM) ಬಸವರಾಜ್ ಬೊಮ್ಮಾಯಿ (Basavaraj Bommai) ಅವರಿಗೆ ಕೊರೊನಾ (Covid-19) ಸೋಂಕು ತಗುಲಿದೆ. ಈ ಕುರಿತು ಖುದ್ದು ಮುಖ್ಯಮಂತ್ರಿಗಳೇ ಟ್ವೀಟ್ ಮಾಡಿದ್ದು, ತಮಗೆ ಕೊವಿಡ್ ಸೊಂಕು ದೃಢಪಟ್ಟಿದೆ ಮತ್ತು ವೈರಸ್ ನ ಲಘು ಲಕ್ಷಣಗಳಿವೆ ಎಂದು ಹೇಳಿದ್ದಾರೆ.
ಭಾರತದ ಆರೋಗ್ಯ ಸಚಿವಾಲಯವು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.ಹೊಸ ಮಾರ್ಗಸೂಚಿಗಳ ಪ್ರಕಾರ, ಭಾರತಕ್ಕೆ ಆಗಮಿಸಿದಾಗ, ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರು 7 ದಿನಗಳ ಕಾಲ ಹೋಮ್ ಕ್ವಾರಂಟೈನ್ನಲ್ಲಿರಬೇಕು.ಈ ಹೊಸ ಮಾರ್ಗಸೂಚಿಗಳು ಜನವರಿ 11 ರಿಂದ ಜಾರಿಗೆ ಬರಲಿದೆ.ಕ್ವಾರಂಟೈನ್ ಮುಗಿದ 8 ನೇ ದಿನದಂದು ಆರ್ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿದೆ ಎಂದು ಮಾರ್ಗಸೂಚಿಗಳಲ್ಲಿ ಉಲ್ಲೇಖಿಸಲಾಗಿದೆ.
Corona Travel Guidelines - ವಿದೇಶದಿಂದ ಭಾರತಕ್ಕೆ ಬರುವ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರು ಇದೀಗ ಒಂದು ವಾರದವರೆಗೆ ಹೋಮ್ ಕ್ವಾರಂಟೈನ್ನಲ್ಲಿ ಇರಬೇಕಾಗಲಿದೆ. ಹೆಚ್ಚುತ್ತಿರುವ ಕೊರೊನಾ (Coronavirus) ಪ್ರಕರಣಗಳ ನಡುವೆ ಕೇಂದ್ರ ಸರ್ಕಾರವು ಹೊಸ ಪ್ರಯಾಣ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
Oxygen Cylinders: ಸರಬರಾಜಿಗೆ ಸಹಾಯ ಮಾಡಲು ಖಾಲಿ ಆಮ್ಲಜನಕ ಸಿಲಿಂಡರ್ಗಳನ್ನು ದಾನ ಮಾಡುವಂತೆ ದೆಹಲಿ ಸರ್ಕಾರ ಮನವಿ ಮಾಡಿದೆ. ರಾಜ್ಘಾಟ್ ಡಿಟಿಸಿ ಬಸ್ ಡಿಪೋವನ್ನು ಕೇಂದ್ರವನ್ನಾಗಿ ಮಾಡಲಾಗಿದ್ದು, ಅಲ್ಲಿ ಆಮ್ಲಜನಕ ಸಿಲಿಂಡರ್ಗಳನ್ನು ದಾನ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಜನರು 011-23270718 ಸಂಖ್ಯೆಗೆ ಕರೆ ಮಾಡಬಹುದು.
ಭಾರತದಲ್ಲಿ ಕೋವಿಡ್ -19ರ ಹೊಸ ಪ್ರಕರಣಗಳು ಇದೇ ಮೊದಲ ಬಾರಿಗೆ ದಿನವೊಂದರಲ್ಲಿ 3 ಲಕ್ಷ ದಾಟಿದೆ. ಇದು ಅಮೇರಿಕಾದ ದೈನಂದಿನ ದಾಖಲೆಗಳ ದಾಖಲೆಯನ್ನು ಮುರಿದಿದೆ. ಇದಕ್ಕೂ ಮೊದಲು ಜನವರಿ 8 ರಂದು ಅಮೇರಿಕಾದಲ್ಲಿ 3,07,581 ಹೊಸ ಪ್ರಕರಣಗಳು ದಾಖಲಾಗಿದ್ದವು.
ಭಾರತದಲ್ಲಿ ಕೊರೊನಾವೈರಸ್ನ ರುದ್ರ ನರ್ತನ ಮುಂದುವರೆದಿದೆ ಮತ್ತು ಕಳೆದ 24 ಗಂಟೆಗಳಲ್ಲಿ 2.75 ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ, ವೇಗವಾಗಿ ಹೆಚ್ಚುತ್ತಿರುವ ಸಾವಿನ ಅಂಕಿ ಅಂಶಗಳು ಸರ್ಕಾರದ ಕಳವಳವನ್ನು ಹೆಚ್ಚಿಸಿವೆ.
ವಾಣಿಜ್ಯ ನಗರಿ ಮುಂಬೈಯಲ್ಲಿ ಪರಿಸ್ಥಿತಿ ತೀರಾ ವಿಕೋಪಕ್ಕೆ ಹೋಗಿರುವುದರಿಂದ ಬೇರೆ ವಿಧಿಯಿಲ್ಲದೆ ಮತ್ತೆ ಲಾಕ್ಡೌನ್ ಜಾರಿಗೆ ತರಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರೋನಾ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿರುವ ಹಿನ್ನಲೆಯಲ್ಲಿ ಎಪ್ರಿಲ್ 6ರಿಂದ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಘೋಷಿಸಲಾಗಿದೆ.
Akshay Kumar Tested Covid-19 Positive - ಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಅವರು ಈ ಮಾಹಿತಿಯನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ.
ಹಬ್ಬಗಳ ಸಮಯದಲ್ಲಿ ಕಿಕ್ಕಿರಿದು ತುಂಬಿರುವ ಮಾರುಕಟ್ಟೆಗಗಳಿಗೆ ಶಾಪಿಂಗ್ ಗಾಗಿ ತೆರಳುವುದು ಎಂದರೆ ಕರೋನಾವೈರಸ್ ಅನ್ನು ಆಹ್ವಾನಿಸಿದಂತೆಯೇ ಸರಿ. ಇದಕ್ಕೆ ಸಾಕ್ಷಿ ಎಂಬಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರುಕಟ್ಟೆಗಳು ಸೇರಿದಂತೆ ಈ ಐದು ಸ್ಥಳಗಳನ್ನು ಕರೋನಾ ಸೂಪರ್ ಸ್ಪ್ರೆಡರ್ ಎಂದು ಹೇಳಲಾಗುತ್ತಿದೆ.
ಕರೋನಾವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ, ಭೋಪಾಲ್, ಇಂದೋರ್, ಜಬಲ್ಪುರ್, ಬೆತುಲ್, ಚಿಂದ್ವಾರ, ರತ್ನಂನ ಖಾರ್ಗೊನ್ನಲ್ಲಿನ ಶಾಲೆಗಳು ಮತ್ತು ಕಾಲೇಜುಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಸೂಚನೆ ನೀಡಲಾಗಿದೆ.
ಮೊದಲು ಕರೋನಾವೈರಸ್ ಮಹಾಮಾರಿ ಭಾರತಕ್ಕೆ ಕಾಲಿಟ್ಟ ಸಂದರ್ಭದಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಕರೋನಾವೈರಸ್ ಪ್ರಕರಣಗಳನ್ನು ಹೊಂದಿದ್ದ ಮೈಸೂರು ನಂತರದ ದಿನಗಳಲ್ಲಿ ಕಠಿಣ ಕ್ರಮಗಳನ್ನು ಅನುಸರಿಸುವ ಮೂಲಕ ಕರೋನಾ ಹಿಡಿತದಿಂದ ಹೊರಬಂದಿತ್ತು.
ಕೋವಿಡ್ 2ನೇ ಅಲೆಯ ವೇಳೆ ರೋಗಿಗಳ ಸಂಖ್ಯೆ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳ ವ್ಯವಸ್ಥೆ ಬೇಕಾಗುತ್ತದೆ. ಯಾವುದೇ ಸಂಸ್ಥೆಯಲ್ಲಿ ಲೋಪ ಕಂಡುಬಂದರೆ ಆಯಾ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು.
Corona Updates Today: ಕರೋನಾ ವೈರಸ್ ಸೋಂಕು ಮತ್ತೊಮ್ಮೆ ವೇಗವಾಗಿ ಬೆಳೆಯುತ್ತಿದೆ. ಮತ್ತೊಮ್ಮೆ, ದೇಶದಲ್ಲಿ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಸೋಂಕಿನ ಮಟ್ಟವು 1.55% ರಿಂದ 1.96% ಕ್ಕೆ ಏರಿದೆ.
ಶನಿವಾರ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ನೀತಿ ಆಯೋಗದ (NITI Ayog) ಆರೋಗ್ಯ ಸದಸ್ಯ ಡಾ.ವಿನೋದ್ ಪಾಲ್ ಅವರು 9 ರಾಜ್ಯಗಳ ಆರೋಗ್ಯ ಕಾರ್ಯದರ್ಶಿಯನ್ನು ಭೇಟಿಯಾಗಿ ಆರೋಗ್ಯ ಕ್ರಮಗಳನ್ನು ಪರಿಶೀಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.