ಸಿಲಿಕಾನ್ ಸಿಟಿಯನ್ನು ಬಿಟ್ಟೂ ಬಿಡದೆ ಕಾಡ್ತಿದೆ ರಣಚಂಡಿ ಮಳೆ! ಧಾರಾಕಾರ ಮಳೆಗೆ ನಗರದ ಹಲವು ರಸ್ತೆಗಳು ಜಲಾವೃತವಾಗಿದ್ದು ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಅಪ್ಡೇಟ್: ಕಳೆದ ಒಂದು ವಾರದಿಂದ ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಬೆಂಗಳೂರಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಬನಶಂಕರಿ, ಎಮ್ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇನ್ನೂ ಎರಡು ದಿನ ಬೆಂಗಳೂರಲ್ಲಿ ಮಳೆ ಮುನ್ಸೂಚನೆ. ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಬೆಂಗಳೂರು ಹವಾಮಾನ ಇಲಾಖೆ ವಿಜ್ಞಾನಿ ನೀಡಿದೆ. ಇನ್ನು ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಐಎಂಡಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಜಾರ್ಖಂಡ್ನ ಸೆರೈಕೆಲಾ-ಖರ್ಸಾನ್ವಾ, ಪಶ್ಚಿಮ ಮತ್ತು ಪೂರ್ವ ಸಿಂಗ್ಭೂಮ್ ಜಿಲ್ಲೆಗಳು ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕಾವೇರಿ ನದಿ ಪ್ರವಾಹ ಹಿನ್ನಲೆಯಲ್ಲಿ ನಿಮಿಷಾಂಭ ದೇಗುಲದ ಬಳಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು ದೇಗುಲದ ಬಳಿ ಸ್ನಾನಘಟ್ಟ ಸೇರಿ ಸ್ನಾನ ಗೃಹ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಕಾವೇರಿ ನದಿ ದಂಡೆಯ ಬಳಿ ದೇಗುಲದ ಬಳಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.
ಇದಲ್ಲದೆ, ಕಳೆದ ಮೂರ ದಿನಗಳಿಂದ ಬೆಳಗಾವಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ರಣಮಳೆಯ ಆರ್ಭಟಿಸಿದೆ. ಮಳೆಯಿಂದ ರಾಜ್ಯದಲ್ಲಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ಜಲಾಶಯಗಳು ಬೋರ್ಗರೆಯುತ್ತಿದ್ದು, ಗ್ರಾಮ ಗ್ರಾಮಗಳೇ ಜಲಾವೃತವಾಗಿವೆ.. ಹಳ್ಳಿಗಳ ಸಂಪರ್ಕ ಬಂದ್ ಆಗಿದ್ದು ಸಂಚಾರಕ್ಕೆ ಪರದಾಡುವಂತಾಗಿದೆ.
ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗ್ತಿದೆ. ಕೊಡಗು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದಿನಿಂದ ಆಗಸ್ಟ್ 11ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಅಂಗನವಾಡಿ-ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಐಎಂಡಿ ಈ ಐದು ಜಿಲ್ಲೆಗಳಲ್ಲಿ ಆಗಸ್ಟ್ 8, ಆಗಸ್ಟ್ 9, ಆಗಸ್ಟ್ 10 ರಂದು ಆರೆಂಜ್ ಅಲರ್ಟ್ ನೀಡಿದೆ.
ಗಾಳಿ ಮಿಂಚು ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ವೇಗ 30-40 ವೇಗದಲ್ಲಿ ಗಾಳಿಯ ಬೀಸಲಿದೆ ಹೀಗಾಗಿ ಅಗತ್ಯ ಕ್ರಮ ಮತ್ತು ಎಚ್ಚರ ವಹಿಸುವಂತೆ ಇಲಾಖೆಯಿಂದ 20 ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳಿಗೆ ಅಲರ್ಟ್ ಸಂದೇಶ ರವಾನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.