The Kerala Story Controversy: ದಿ ಕೇರಳ ಸ್ಟೋರಿ ಸಿನಿಮಾಗೆ ಸಂಬಂಧಿಸಿದ ವಿವಾದಗಳು ಅಂತ್ಯದ ಹೆಸರನ್ನು ತೆಗೆದುಕೊಳ್ಳುತ್ತಿಲ್ಲ. ಚಿತ್ರ ದೇಶ ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ನಲ್ಲಿ ಇದರ ಗಳಿಕೆಯು 250 ಕೋಟಿ ದಾಟುವ ಅಂಚಿನಲ್ಲಿದೆ. ಇದು ಪಠಾಣ್ ನಂತರ ಈ ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿದೆ. ಈ ಮಧ್ಯೆ ಕೇರಳ ಸ್ಟೋರಿ ಪ್ರದರ್ಶಿಸುತ್ತಿರುವ ಚಿತ್ರಮಂದಿರವೊಂದಕ್ಕೆ ಬಾಂಬ್ ಬೆದರಿಕೆ ಬಂದಿದೆ.
The Kerala Story: ದಿ ಕೇರಳ ಸ್ಟೋರಿ ಚಿತ್ರದ ಬಿಡುಗಡೆಗೆ ತಡೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಈ ಚಿತ್ರದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಏನಿದೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ, ಏಕೆಂದರೆ ನಮಗೆ ತಿಳಿದಿರುವಂತೆ, ಈ ಚಿತ್ರವನ್ನು ಐಸಿಸ್ ವಿರುದ್ಧ ತೋರಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನ ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತಿಕೊಂಡಿದೆ. ಐಸಿಸ್ ಸಂಘಟನೆಯ ವಕ್ತಾರ ಇಸ್ಲಾಮಿಕ್ ಸ್ಟೇಟ್ಸ್ ಕೊರಸನ್ ಪ್ರಾವಿನ್ಸ್ ನಡೆಸುವ ವಾಯ್ಸ್ ಆಫ್ ಕೂರಸ ನಿಯತಕಾಲಿಕೆಯಲ್ಲಿ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿದೆ.
ಈ ಹಿಂದೆ ಐಸಿಸ್ ಬಗ್ಗೆ ಒಲವನ್ನು ಹೊಂದಿದ್ದ ಆರೀಫ್..!. ಆಫ್ಘಾನಿಸ್ತಾನದದಲ್ಲಿ ಆಲ್ ಖೈದಾ, ತಾಲಿಬಾನ್ ಚಟುವಟಿಕೆ. ತಾಲಿಬಾನ್ ಪವರ್ಫುಲ್ ಬಳಿಕ ಆಲ್ ಖೈದಾ ಮೇಲೆ ಒಲವು. ಈ ಹಿಂದೆ ಟ್ವಿಟರ್ನಲ್ಲಿ ಉಗ್ರ ಸಂಘಟನೆ ಪರವಾಗಿ ಫೇಕ್ ಅಕೌಂಟ್. ಟೆಲಿಗ್ರಾಮ್ನಲ್ಲಿ ಆಲ್ ಖೈದಾ ಗ್ರೂಪ್ಗಳಲ್ಲಿ ಆರೀಫ್ ಆಕ್ಟೀವ್..?
ISIS ಉಗ್ರ ಸಂಘಟನೆ ಜೊತೆ ಸಂಪರ್ಕ ಶಂಕೆ ಹಿನ್ನೆಲೆಯಲ್ಲಿ ಗಂಗಾವತಿ ನಗರದ ಶಬ್ಬಿರ್ ಎನ್ನುವ ವ್ಯಕ್ತಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.. ಶಿವಮೊಗ್ಗದ ಶಂಕಿತ ಉಗ್ರರ ಜತೆ ಶಬ್ಬಿರ್ ಸಂಪರ್ಕ ಹೊಂದಿದ್ದ ಎನ್ನಲಾಗ್ತಿದೆ.
NIA Raid: ದೇಶಾದ್ಯಂತ ಇರುವ ಪಿಎಫ್ಐ ಕಛೇರಿಗಳ ಮೇಲೆ ನಡೆಸಿದ ದಾಳಿಯ ನಂತರ ಎನ್ಐಎ ಮಹತ್ವದ ಮಾಹಿತಿ ಬಹಿರಂಗಪಡಿಸಿದೆ. ಲಷ್ಕರ್ ಮತ್ತು ಐಸಿಸ್ ನಂತಹ ಭಯೋತ್ಪಾದಕ ಸಂಘಟನೆಗಳಿಗೆ ಮುಸ್ಲಿಂ ಯುವಕರನ್ನು ಸೇರಿಸಿ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿಸಲು ಪಿಎಫ್ಐ ಸಂಚು ನಡೆಸುತ್ತಿದೆ ಎಂದು ಎನ್ಐಎ ಹೇಳಿದೆ.
ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ ಪ್ರಕರಣದಲ್ಲಿ ಕೆಲ ಸ್ಪೋಟಕ ಮಾಹಿತಿಗಳು ಲಭ್ಯವಾಗಿವೆ ಎಂದು ರಾಜ್ಯ ಸುವ್ಯವಸ್ಥೆ ವಿಭಾಗ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ಬಂಧನದಿಂದ ಮುಂದಾಗುವ ಅನಾಹುತ ತಪ್ಪಿಸಲಾಗಿದೆ. ಮತ್ತೋರ್ವ ಶಂಕಿತ ನಾಪತ್ತೆಯಾಗಿದ್ದು ಆತನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದಿದ್ದಾರೆ.
ಮಾಹಿತಿ ಪಡೆದ ಬಳಿಕ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಸಚಿವಾಲಯದ ಪ್ರಕಾರ, “ಐಸಿಸ್ ತನ್ನ ಸಿದ್ಧಾಂತವನ್ನು ಪ್ರಚಾರ ಮಾಡಲು ವಿವಿಧ ಇಂಟರ್ನೆಟ್ ಆಧಾರಿತ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುತ್ತಿದೆ. ಈ ನಿಟ್ಟಿನಲ್ಲಿ ಸೈಬರ್ಸ್ಪೇಸ್ ಅನ್ನು ಸಂಬಂಧಪಟ್ಟ ಏಜೆನ್ಸಿಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ ಮತ್ತು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ತಿಳಿಸಿದೆ.
ತುಮಕೂರಿನಲ್ಲಿ ಎನ್ಐಎ ದಾಳಿ ಮಾಡಿದ್ದು ಓರ್ವ ಶಂಕಿತ ಉಗ್ರನನ್ನು ವಶಕ್ಕೆ ಪಡೆದಿದ್ದಾರೆ. ಐಸಿಸ್ ಸಂಘಟನೆ ಜೊತೆ ನಂಟು ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ತುಮಕೂರಿನ ಹೆಚ್ಎಂಎಸ್ ಯುನಾನಿ ಕಾಲೇಜ್ ಮೇಲೆ ದಾಳಿ ಮಾಡಲಾಗಿದ್ದು, ಮಹಾರಾಷ್ಟ್ರ ಮೂಲದ ಓರ್ವ ಮೆಡಿಕಲ್ ವಿದ್ಯಾರ್ಥಿಯನ್ನು ಎನ್ಐಎ ವಶಕ್ಕೆ ಪಡೆಯಲಾಗಿದೆ.
ಈ ಇಡೀ ಘಟನೆಯಲ್ಲಿ ಪಾಕಿಸ್ತಾನ ಭಾಗಿಯಾಗಿರುವುದು ಬಯಲಾಗಿದೆ. ವಾಸ್ತವವಾಗಿ, ಈ ಇಬ್ಬರೂ ಆರೋಪಿಗಳು ಪಾಕಿಸ್ತಾನಲ್ಲಿರುವ ಕೆಲವು ಜನರೊಂದಿಗೆ ಸಂಪರ್ಕದಲ್ಲಿದ್ದರು. ಅಷ್ಟೇ ಅಲ್ಲ, ಮೂಲಗಳ ಪ್ರಕಾರ ಇಬ್ಬರೂ ಆರೋಪಿಗಳು ಕನ್ಹಯ್ಯಾ ಲಾಲ್ ಹತ್ಯೆಗೆ ಐಸಿಸ್ನ ವೀಡಿಯೋಗಳನ್ನು ನೋಡಿದ್ದರು ಎಂದು ಹೇಳಲಾಗುತ್ತಿದೆ.
ರಾಜಸ್ಥಾನದಲ್ಲಿ ಹಿಂದೂ ಟೈಲರ್ ಹತ್ಯೆ ನಾಚಿಕೆಗೇಡು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.. ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ. ರಾಜಸ್ಥಾನ ಘಟನೆ ಮತ್ತು ಗಲಭೆ ಹಿಂದೆ ವಿದೇಶಿ ಕೈವಾಡವಿದೆ. ಕಾಂಗ್ರೆಸ್ ಈಗ ಮೌನವಾಗಿರೋದ್ರ ಹಿನ್ನೆಲೆ ಏನು? ಎಂದು ಕಟೀಲ್ ಪ್ರಶ್ನಿಸಿದ್ದಾರೆ.
ರಾಜಸ್ಥಾನದಲ್ಲಿ ಹಿಂದೂ ಟೈಲರ್ ಕನ್ಹಯ್ಯ ಹತ್ಯೆಯನ್ನು ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಖಂಡಿಸಿದ್ದಾರೆ. ಇದು ಇಡಿ ದೇಶ ತಲೆ ತಗ್ಗಿಸುವಂತಹ ವಿಚಾರ. ಆರೋಪಿಗಳಾದ ಮೊಹಮ್ಮದ್ ರಿಯಾಜ್ ಮತ್ತು ಅನ್ಸಾರಿಯನ್ನು ಗುಂಡಿಟ್ಟು ಹತ್ಯೆ ಮಾಡಬೇಕು. ಇಂಥಹ ಕೊಲೆಗಡುಕರು ಐಸಿಸ್ ಏಜೆಂಟರು ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಬೂಲ್ ನಗರದಲ್ಲಿನ ಸಿಖ್ ಗುರುದ್ವಾರದ ಮೇಲೆ ನಡೆದ ದಾಳಿಯ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಇದು ಪ್ರವಾದಿ ಮಹಮ್ಮದ್ ಅವರನ್ನು ಅವಮಾನಿಸಿದ್ದಕ್ಕೆ ಪ್ರತಿಕಾರ ಎಂದು ಉಗ್ರ ಸಂಘಟನೆ ಹೇಳಿದೆ.
ಐಸಿಎಸ್ ಗೆ ಉಗ್ರರ ನೇಮಕಾತಿ ಮತ್ತು ತರಬೇತಿ ವಿಚಾರವಾಗಿ ಮೂವರ ಮೇಲೆ ಎನ್ಐಎ ಚಾರ್ಜಶೀಟ್ ಸಲ್ಲಿಸಿದೆ.ಮೂವರು ಆರೋಪಿಗಳನ್ನು ಬೆಂಗಳೂರಿನ ತಿಲಕ ನಗರದ ಮುಹಮ್ಮದ್ ತೌಕಿರ್ ಮಹಮೂದ್,ಹಾಗೂ ಕಾಮನಹಳ್ಳಿಯ ಜೊಹೈಬ್ ಮನ್ನಾ, ಹಾಗೂ ಭಟ್ಕಳದ ಮೊಹಮ್ಮದ್ ಶಿಹಾಬ್ ಎಂದು ಗುರುತಿಸಲಾಗಿದೆ.
ಕಾಬೂಲ್ ವಿಮಾನ ನಿಲ್ದಾಣದ ಮೇಲೆ ದಾಳಿಗೆ ಸಂಬಂಧಿಸಿದಂತೆ ಅಮೆರಿಕ ಬ್ರಿಟನ್ ಅನ್ನು ಗುರಿಯಾಗಿಸಿಕೊಂಡಿದೆ. ವಿಮಾನ ನಿಲ್ದಾಣದ ಗೇಟ್ ಅನ್ನು ಮುಚ್ಚಬೇಕೆಂದು ಯುಎಸ್ ಬಯಸಿತು, ಆದರೆ ಬ್ರಿಟನ್ ಅದಕ್ಕೆ ಸಿದ್ಧವಿರಲಿಲ್ಲ. ಏಕೆಂದರೆ ಬ್ರಿಟನ್ ತನ್ನ ರಕ್ಷಣಾ ಕಾರ್ಯಾಚರಣೆಯನ್ನು ಆದಷ್ಟು ಬೇಗ ಮುಗಿಸಬೇಕಿತ್ತು. ಈ ಕಾರಣದಿಂದ ಭಯೋತ್ಪಾದಕರಿಗೆ ದಾಳಿ ಮಾಡಲು ಅವಕಾಶ ಸಿಕ್ಕಿತು ಎಂದು ಯುಎಸ್ ಆರೋಪಿಸಿದೆ.
US Military Airstrike On ISIS- K: ಅಫ್ಘಾನಿಸ್ತಾನದಲ್ಲಿರುವ ಐಸಿಸ್-ಕೆ ನೆಲೆಗಳನ್ನು ಗುರಿಯಾಗಿಸಿ ಅಮೆರಿಕ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಐಸಿಸ್ ಭಾರೀ ನಷ್ಟವನ್ನು ಅನುಭವಿಸಿದೆ ಎನ್ನಲಾಗಿದೆ.
Kabul Airport Attack: ಕಾಬೂಲ್ ವಿಮಾನ ನಿಲ್ದಾಣದ ಮೇಲಿನ ಭಯೋತ್ಪಾದಕ ದಾಳಿಗೆ ಸೇಡು ತೀರಿಸಿಕೊಳ್ಳುವುದಾಗಿ ಅಮೆರಿಕ ಪ್ರತಿಜ್ಞೆ ಮಾಡಿದೆ. ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಅಧ್ಯಕ್ಷ ಜೋ ಬಿಡೆನ್ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಇಂತಹ ದಾಳಿಯ ಸಾಧ್ಯತೆಯನ್ನು ಹೆದರಿಸಲಾಗುತ್ತಿದೆ. ಅದೇ ಸಮಯದಲ್ಲಿ, ಐಸಿಸ್ ದಾಳಿಯ ಹೊಣೆ ಹೊತ್ತುಕೊಂಡಿದೆ.
Bomb Threat To Delhi Airport - ಆಗಸ್ಟ್ 15 ಕ್ಕಿಂತ ಮುಂಚೆ, ಭಯೋತ್ಪಾದಕ ಸಂಘಟನೆ ಅಲ್ ಖೈದಾ ದೆಹಲಿಯ ಐಜಿಐ ವಿಮಾನ ನಿಲ್ದಾಣವನ್ನು ಅಂದರೆ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (Indira Gandhi International Airport) ಸ್ಫೋಟಿಸುವುದಾಗಿ ಬೆದರಿಕೆ ಹಾಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.