ಬಂಗಾಳ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವು ಮೊದಲ ಇನ್ನಿಂಗ್ಸ್ನಲ್ಲಿ ಹಿನ್ನೆಡೆ ಸಾಧಿಸಿದರು ಸಹ ಎರಡನೇ ಇನಿಂಗ್ಸ್ ನಲ್ಲಿ ಭರ್ಜರಿ ಪುನರಾಗಮನ ಮಾಡಿತು
ಅನಾರೋಗ್ಯದಿಂದ ಬಳಲುತ್ತಿದ್ದ ರಮೇಶ್ ಬಾದಾಮಿ (43) ಯೋಧ ಸಾವು
ಬಾಗಲಕೋಟೆಯ ಶಿರೂರ ಗ್ರಾಮದ ಯೋಧ ರಮೇಶ್
ಜಮ್ಮು ಕಾಶ್ಮೀರದಲ್ಲಿ ಬಿಎಸ್ಎಫ್ ಯೋಧನಾಗಿ ಕಾರ್ಯ
ಇತ್ತೀಚಿಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ರು
ಶ್ರೀನಗರದಿಂದ ಹೊರಟ ಯೋಧನ ಪಾರ್ಥಿವ ಶರೀರ
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರೀ ಮಳೆಯಿಂದಾಗಿ ಮೇಘಸ್ಪೋಟ ಮತ್ತು ಭೂಕುಸಿತಗಳು ಸಂಭವಿಸಿ, ಜನಜೀವನವನ್ನು ಅಸ್ತವ್ಯಸ್ತಗೊಳಿಸಿವೆ. ಆಗಸ್ಟ್ 26, 2025 ರಂದು ದೋಡಾದ ಚಾರು ನಾಲಾದಲ್ಲಿ ಸಂಭವಿಸಿದ ಮೇಘಸ್ಪೋಟದಿಂದಾಗಿ ಮೂವರು ಸಾವನ್ನಪ್ಪಿದ್ದು, 15 ಮನೆಗಳು, ಹಲವಾರು ಗೋಶಾಲೆಗಳು, ಖಾಸಗಿ ಆರೋಗ್ಯ ಕೇಂದ್ರ ಮತ್ತು ಕಾಲುಸಂಕಗಳು ಧ್ವಂಸಗೊಂಡಿವೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ (NH-44) ರಾಂಬಾನ್ ಜಿಲ್ಲೆಯಲ್ಲಿ ಬಹು ಭೂಕುಸಿತಗಳಿಂದ ಟ್ರಾಫಿಕ್ ಸಂಪೂರ್ಣವಾಗಿ ಸ್ಥಗಿತಗೊಂಡಿತು.
ಶ್ರೀ ಮಾತಾ ವೈಷ್ಣೋದೇವಿ ಭವನ ಮಾರ್ಗದ ಬಳಿ ಸಂಭವಿಸಿದ ಭೂಕುಸಿತದಿಂದ 5 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇದೆ ವೇಳೆ 14 ಭಕ್ತರು ಗಾಯಗೊಂಡಿದ್ದು, ಕೆಲವು ಗಾಯಾಳುಗಳನ್ನು ಕ್ಯಾಟ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ವಿದ್ಯಾರ್ಥಿಗಳಿಗಾಗಿ ಜಮ್ಮು-ಕಾಶ್ಮೀರದ ಸರ್ಕಾರವು ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಜುಲೈ 1 ರಿಂದ 10 ರವರೆಗೆ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸುವ ಮೂಲಕ ಸಂವೇದನಾಶೀಲ ನಿರ್ಧಾರ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರಕ್ಕೆ ದೆಹಲಿಯಿಂದ ಹೊರಟಿದ್ದ ಇಂಡಿಗೋ ವಿಮಾನದ ಮೂತಿ ಆಲಿಕಲ್ಲು ಮಳೆಗೆ ಒಡೆದುಹೋಗಿದೆ. ಹಾರಾಟದ ನಡುವೆ ಈ ಹಾನಿ ಸಂಭವಿಸಿದ ಕಾರಣ, ವಿಮಾನ ತೀವ್ರ ನಡುಕಕ್ಕೆ ಒಳಗಾಗಿದ್ದು, ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೇ ಎಲ್ಲರೂ ಸುರಕ್ಷಿತವಾಗಿ ವಿಮಾನ ನಿಲ್ದಾಣದಲ್ಲಿ ಇಳಿದರು.
ಭಾರತದ ಗಡಿಗಳು ಸಂಪೂರ್ಣವಾಗಿ ಸುರಕ್ಷಿತವಾಗಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದೇಶದ ಗಡಿಗಳನ್ನು ರಕ್ಷಿಸುವಲ್ಲಿ ಅವಿರತ ಶ್ರಮಿಸುತ್ತಿರುವ ಯೋಧರನ್ನು ಅವರು ಅಭಿನಂದಿಸಿದ್ದಾರೆ. ಕಾಶ್ಮೀರದ ಕೆಲಾರ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರರನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಬೆಳಗಾವಿಯ ಸಂಸದ ಜಗದೀಶ್ ಶೆಟ್ಟರ್ ಅವರು ದೇಶದ ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಾ, "ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಶಾಂತಿ ನೆಲೆಸಿದೆ. ವಿಶೇಷವಾಗಿ ಜಮ್ಮು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಯಾಗಿದೆ," ಎಂದು ಹೇಳಿದ್ದಾರೆ.
ಈ ಹಿಂದೆ ನಡೆಸಲಾದ ಉರಿ ಸರ್ಜಿಕಲ್ ಸ್ಟ್ರೈಕ್ ಮತ್ತು ಬಾಲಕೋಟ್ ವೈಮಾನಿಕ ದಾಳಿಗೂ ಸಾಕ್ಷಿ ಕೇಳಿದ್ದ ಕಾಂಗ್ರೆಸ್ ಈಗ ʼಆಪರೇಷನ್ ಸಿಂದೂರ್ʼ ಕಾರ್ಯಾಚರಣೆಗೂ ಸೇನೆಯು ಸಾಕಷ್ಟು ಸಾಕ್ಷಿ ನೀಡಿದ್ದರೂ ಸಹ ತನ್ನ ನೀಚ ಬುದ್ಧಿ ಪ್ರದರ್ಶಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಜೈಸ್ವಾಲ್, ‘ಆಪರೇಷನ್ ಸಿಂದೂರ್’ ಆರಂಭವಾದಾಗಿನಿಂದ ಭಾರತ ಮತ್ತು ಅಮೆರಿಕದ ನಾಯಕರ ನಡುವೆ ಸೈನಿಕ ಪರಿಸ್ಥಿತಿಯ ಬಗ್ಗೆ ಚರ್ಚೆಗಳು ನಡೆದಿವೆಯಾದರೂ, ಈ ಮಾತುಕತೆಗಳಲ್ಲಿ ವಾಣಿಜ್ಯಕ್ಕೆ ಸಂಬಂಧಿಸಿದ ಯಾವುದೇ ವಿಷಯ ಎಗ್ಗಿಲ್ಲ ಎಂದು ಸ್ಪಷ್ಟಪಡಿಸಿದರು.
Khalid Abu Akasha: ಆಪರೇಷನ್ ಸಿಂಧೂರ್ನಲ್ಲಿ ಅನೇಕ ಪಾಕಿಸ್ತಾನಿ ಭಯೋತ್ಪಾದಕರನ್ನು ಕೊಂದು ಮಸಣಕ್ಕೆ ಕಳುಹಿಸಲಾಗಿದೆ. ಅದರಲ್ಲಿ ಒಬ್ಬ ಖಾಲಿದ್ ಅಲಿಯಾಸ್ ಅಬು ಆಕಾಶ. ಮಾಧ್ಯಮ ವರದಿಗಳ ಪ್ರಕಾರ, ಖಾಲಿದ್ ಅಲಿಯಾಸ್ ಅಬು ಆಕಾಶ ದಾಳಿಯಲ್ಲಿ ಸಾವನ್ನಪ್ಪಿದ್ದಾನೆ. ಖಾಲಿದ್ ಅಲಿಯಾಸ್ ಅಬು ಆಕಾಶ ಯಾರೆಂದು ನಮಗೆ ಗೊತ್ತಾ? ಇವನ ಹಿನ್ನೆಲೆ ಭಯಾನಕ...
Operation Sindoor: ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಸದೆಬಡಿದಿದೆ. 'ಆಪರೇಷನ್ ಸಿಂಧೂರ್'ನಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ನೆಲೆಯಾಗಿದ್ದ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿದೆ.
ದಾಳಿಯ ಹಿಂದೆ ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್-ಎ-ತೊಯ್ಬಾ (LeT), ಮತ್ತು ಜೈಶ್-ಎ-ಮೊಹಮ್ಮದ್ (JeM)ನಂತಹ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಒಡನಾಟಿಗಳ ಭಾಗೀದಾರಿಕೆಯ ಬಗ್ಗೆ ಮಾಹಿತಿ ದೊರೆತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.