ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ಭಾನುವಾರ ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಯಿತು. ಪೂಂಚ್ನಲ್ಲಿ ಗುಂಡಿನ ದಾಳಿ ಜೊತೆಗೆ ಪಾಕಿಸ್ತಾನ ಸಣ್ಣ ಶಸ್ತ್ರಾಸ್ತ್ರ ಮತ್ತು ಶೆಲ್ ದಾಳಿ ನಡೆಸಿದೆ.
ಆಗಸ್ಟ್ 25 ರಂದು ಭೀಜ್ಬೆರಾ ಪ್ರದೇಶದಲ್ಲಿ ಕಲ್ಲು ತೂರಾಟದಲ್ಲಿ ಟ್ರಕ್ ಚಾಲಕ ಸಾವನ್ನಪ್ಪಿದ್ದಾನೆ. ಈ ಘಟನೆಯಲ್ಲಿ ಸಾವನ್ನಪ್ಪಿರುವ ಟ್ರಕ್ ಚಾಲಕನನ್ನು ನೂರ್ ಮೊಹಮ್ಮದ್ ದಾರ್ ಎಂದು ಗುರುತಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಬುಧವಾರದಂದು ರಾಜ್ಯದಲ್ಲಿನ ಯಥಾಸ್ಥಿತಿ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದರು.370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಉಂಟಾಗುವ ಜೀವ ಹಾನಿ ತಡೆಗಟ್ಟಲು ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಹೇಳಿದರು.
ಕಾಶ್ಮೀರಿ ಮಹಿಳೆಯೊಬ್ಬರು ಶ್ರೀನಗರದಿಂದ ದೆಹಲಿಗೆ ಹೋಗುತ್ತಿದ್ದಾಗ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ತಮ್ಮ ಅವಸ್ಥೆಯನ್ನು ವಿವರಿಸುತ್ತಿರುವ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಸೇರಿದಂತೆ ಪ್ರತಿಪಕ್ಷಗಳು ಗುರುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಧನಕ್ಕೊಳಗಾದ ರಾಜಕೀಯ ನಾಯಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದವು.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್ 370 ಮತ್ತು 35 ನೇ ವಿಧಿಯನ್ನು ರದ್ದುಗೊಳಿಸಿದಾಗಿನಿಂದ, ಪಾಕಿಸ್ತಾನವು ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ಸತತವಾಗಿ ಪ್ರಯತ್ನಿಸುತ್ತಿದೆ.
370 ನೇ ವಿಧಿಯನ್ನು ರದ್ದುಗೊಳಿಸುವ ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸುವ ಬಗ್ಗೆ ಭಾರತದ ಕ್ರಮವನ್ನು ತಡೆಯಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (ಯುಎನ್ಎಸ್ಸಿ) ವಿಫಲ ಪ್ರಯತ್ನ ಮಾಡಿದ್ದಕ್ಕಾಗಿ ಶಿವಸೇನಾ ಮುಖವಾಣಿ ಸಾಮ್ನಾ ತನ್ನ ಸಂಪಾದಕೀಯದಲ್ಲಿ ಪಾಕಿಸ್ತಾನ ಮತ್ತು ಚೀನಾ ಎರಡನ್ನೂ ಅಪಹಾಸ್ಯ ಮಾಡಿದೆ.
ಸರ್ಕಾರಿ ನೌಕರರು ತಮ್ಮ ಕಚೇರಿಗಳಿಗೆ ಹೋಗಲು ನಿರ್ಬಂಧಗಳನ್ನು ಸಡಿಲಿಸಲಾಗಿದೆ. 50,000 ಕ್ಕೂ ಹೆಚ್ಚು ಲ್ಯಾಂಡ್ಲೈನ್ ಫೋನ್ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಶನಿವಾರ ಪುನರಾರಂಭಿಸಿದ 24 ಗಂಟೆಗಳ ನಂತರ ಮತ್ತೆ ಜಮ್ಮು ಪ್ರದೇಶದಲ್ಲಿ ಸ್ಥಗಿತಗೊಳಿಸಲಾಗಿದೆ. ಜಮ್ಮು, ಸಾಂಬಾ, ಕಥುವಾ, ಉಧಂಪುರ್ ಮತ್ತು ರಿಯಾಶಿ ಜಿಲ್ಲೆಗಳಲ್ಲಿ ಈ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
12 ದಿನಗಳ ಅಂತರದ ನಂತರ, ಈ ಪ್ರದೇಶದಲ್ಲಿ 2 ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಶನಿವಾರ ಪುನರಾರಂಭಿಸಲಾಯಿತು. ಆದರೆ ಪುನಃಸ್ಥಾಪನೆಯಾದ ಕೆಲವೇ ದಿನಗಳಲ್ಲಿ, ರಾಜೌರಿ ಸಮೀಪದ ಪ್ರದೇಶಗಳಲ್ಲಿ ಕೆಲವು ಭಾರತ ವಿರೋಧಿ ಮೆಸೇಜ್ ಗಳನ್ನು ಪ್ರಸಾರ ಮಾಡುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತು. ಆದ್ದರಿಂದ, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಸೇವೆಯನ್ನು ಸ್ಥಗಿತಗೊಳಿಸಲಾಯಿತು.
ವಿಶ್ವಸಂಸ್ಥೆ ಭದ್ರತಾ ಮಂಡಳಿ ಶುಕ್ರವಾರ ಕ್ಲೋಸ್ಡ್ ಡೋರ್ ಸಭೆಯನ್ನು ಪ್ರಾರಂಭಿಸಿತು. ಭಾರತವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡಿರುವ ವಿಚಾರದ ಬಗ್ಗೆ ಚರ್ಚಿಸಲು ಪ್ರಾರಂಭಿಸಿತು.ಈ ಸಭೆಯಲ್ಲಿ ಚೀನಾ ದೇಶವು ಪಾಕ್ ನ ಕಳವಳಕ್ಕೆ ಬೆಂಬಲ ವ್ಯಕ್ತಪಡಿಸಿದೆ ಎನ್ನಲಾಗಿದೆ.
ಆಗಸ್ಟ್ 19 ರಿಂದ ಕಾಶ್ಮೀರದ ಎಲ್ಲಾ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಮತ್ತೆ ಆರಂಭವಾಗಲಿವೆ ಎಂದು ಜಮ್ಮು ಮತ್ತು ಕಾಶ್ಮೀರ ಆಡಳಿತದ ಮೂಲಗಳು ತಿಳಿಸಿವೆ.ಈ ಮೊದಲು ಜೆ & ಕೆ ಗವರ್ನರ್ ಸತ್ಯ ಪಾಲ್ ಮಲಿಕ್ ಅವರು ಶ್ರೀನಗರದ ಸಿವಿಲ್ ಸೆಕ್ರೆಟರಿಯಟ್ ಮತ್ತು ಎಲ್ಲಾ ಸರ್ಕಾರಿ ಕಚೇರಿಗಳನ್ನು ಇಂದಿನಿಂದ ಪುನರಾರಂಭಿಸುವಂತೆ ನಿರ್ದೇಶಿಸಿದ್ದರು.
ಮುಂದಿನ ಕೆಲವೇ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಸುಧಾರಿಸುತ್ತದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.ಜಮ್ಮು ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಸುಧಾರಿಸುತ್ತಿದೆ. ನಿರ್ಬಂಧಗಳನ್ನು ಕ್ರಮೇಣ ತೆಗೆದು ಹಾಕಲಾಗುತ್ತಿದೆ ಎಂದು ಹೇಳಿದೆ.10 ದಿನಗಳಿಗಿಂತ ಹೆಚ್ಚು ಕಾಲ ಕಣಿವೆಯಲ್ಲಿನ ನಿರ್ಬಂಧಗಳನ್ನು ತಕ್ಷಣವೇ ತೆಗೆದುಹಾಕುವಂತೆ ಕೋರಿ ಸಲ್ಲಿಸಿದ ಅರ್ಜಿಯೊಂದಕ್ಕೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದೆ.
ಪೂಂಚ್ ಮತ್ತು ರಾಜೌರಿಯಲ್ಲಿ ಪಾಕಿಸ್ತಾನವು ಗಡಿಯಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಪಾಕಿಸ್ತಾನದ ಈ ಉದ್ಧಟತನಕ್ಕೆ ಭಾರತ ಸೂಕ್ತ ಉತ್ತರ ನೀಡಿದ್ದು, ಪ್ರತೀಕಾರವಾಗಿ ಭಾರತೀಯ ಮೂರು ಪಾಕಿಸ್ತಾನಿ ಸೈನಿಕರನ್ನು ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.