ವಿದೇಶಾಂಗ ಸಚಿವ ಎಸ್.ಜೈಶಂಕರ್ ಇಂದು ಚೀನಾಕ್ಕೆ ನಿರ್ಣಾಯಕ ಸಂದೇಶ ರವಾನಿಸಿದ್ದಾರೆ.ಜಮ್ಮು ಕಾಶ್ಮೀರದ ವಿಚಾರವಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಗೆ ಸ್ಪಷ್ಟೀಕರಣ ನೀಡಿರುವ ಭಾರತ, ಈಗ ಮಾಡಿರುವ ಬದಲಾವಣೆಗಳೆಲ್ಲವೂ ಸಹಿತ ಆಂತರಿಕ ಬದಲಾವಣೆಗಳು ಎಂದು ಹೇಳಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ತಮ್ಮ ಕಂಪನಿಯು ಜಮ್ಮು ಮತ್ತು ಕಾಶ್ಮೀರ ಮತ್ತು ಇತ್ತೀಚೆಗೆ ರಚನೆಯಾದ ಎರಡು ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್ ಕುರಿತಾಗಿ ಹಲವು ಯೋಜನೆಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿ ವಿಧಿಸಲಾದ ನಿಷೇದಾಜ್ಞೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಮುಂದೊಂದು ದಿನ ಮಹಾರಾಷ್ಟ್ರವನ್ನು ಇದೇ ಮಾದರಿಯಲ್ಲಿ ವಿಂಗಡಿಸಬಹುದು ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದನಡೆ ಸಂವಿಧಾನದ ಚೌಕಟ್ಟಿನಲ್ಲಿದೆ ಎಂದು ಈಗ ಭಾರತದ ನಡೆಯನ್ನು ರಷ್ಯಾ ಬೆಂಬಲಿಸಿದೆ. ಇನ್ನು ಉಭಯ ದೇಶಗಳ ನಡುವೆ ಇರುವ ಭಿನ್ನಾಭಿಪ್ರಾಯಗಳನ್ನು ದ್ವಿಪಕ್ಷೀಯವಾಗಿ ಸಿಮ್ಲಾ ಒಪ್ಪಂದ ಮತ್ತು ಲಾಹೋರ್ ಘೋಷಣೆಯ ಆಧಾರದ ಮೇಲೆ ಪರಿಹರಿಸಿಕೊಳ್ಳಲಿವೆ ಎಂದು ಆಶಿಸಿದೆ.
ಜಮ್ಮು ಮತ್ತು ಕಾಶ್ಮಿರಕ್ಕೆ ನೀಡಿದ್ದ 370 ನೇ ವಿಧಿ ರದ್ದು ಪಡಿಸಿದ ನಂತರ ಮೊದಲ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ನಿರ್ಧಾರವನ್ನು ಐತಿಹಾಸಿಕ ಎಂದು ಕರೆದರು.'370 ನೇ ವಿಧಿಯನ್ನು ರದ್ದುಗೊಳಿಸುವುದರೊಂದಿಗೆ, ದೇಶವು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಸರ್ದಾರ್ ಪಟೇಲ್ ಅವರ ಕನಸುಗಳು ನನಸಾಗಿವೆ' ಎಂದು ಪ್ರಧಾನಿ ಹೇಳಿದರು.
ಕಾಶ್ಮೀರದ ಮೇಲಿನ ಕ್ರಮಗಳನ್ನು ಮರುಪರಿಶೀಲಿಸಲು ನವದೆಹಲಿ ಒಪ್ಪಿದರೆ ಭಾರತದ ವಿರುದ್ಧದ ನಿರ್ಧಾರವನ್ನು ಪರಿಶೀಲಿಸಲು ಪಾಕಿಸ್ತಾನ ಸಿದ್ಧ ಎಂದು ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನದ ಅವಕಾಶ ನೀಡುತ್ತಿದ್ದ 370ನೇ ಕಲಂ ಅನ್ನು ರದ್ದು ಪಡಿಸಿ ಈಗ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿರುವ ನಿರ್ಧಾರವನ್ನು ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಜಮ್ಮು ಕಾಶ್ಮೀರದ ಕೊನೆಯ ಸದರ್-ಎ-ರಿಯಾಸತ್ ಕರಣ್ ಸಿಂಗ್ ಶ್ಲಾಘಿಸಿದ್ದಾರೆ.
ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ವಿಷಯದಲ್ಲಿ, ಇದು ಆಂತರಿಕ ವಿಷಯ ಮತ್ತು ಅದರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನರೇಂದ್ರ ಮೋದಿ ಸರ್ಕಾರ ಸ್ಪಷ್ಟಪಡಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದು ಮಾಡುವ ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಉದ್ದೇಶದ ಬಗ್ಗೆ ಭಾರತವು ಅಮೆರಿಕಕ್ಕೆ ಮಾಹಿತಿ ನೀಡಿಲ್ಲ ಎಂದು ಅಮೆರಿಕಾದ ರಾಜ್ಯ ಇಲಾಖೆ ಬುಧವಾರದಂದು ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಲಂ 370 ಅನ್ನು ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ರದ್ದುಗೊಳಿಸಿದ ನಂತರ ಇದಕ್ಕೆ ಪ್ರತಿಯಾಗಿ ಪಾಕ್ ಈಗ ಇಬ್ಬರು ಭಾರತೀಯ ಕೈದಿಗಳನ್ನು ವಾಪಸ್ ಕಳುಹಿಸುವುದಕ್ಕೆ ಪಾಕಿಸ್ತಾನ ತಡೆ ನೀಡಿದೆ.
ಕಲಂ 370 ಮತ್ತು 35 ಎ ಯನ್ನು ರದ್ದುಗೊಳಿಸುವ ನಿರ್ಧಾರವು ನಿಜಕ್ಕೂ ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿದೆ. ಈಗ ಈ ವಿವಾದದ ಸುತ್ತ ಸಿನಿಮಾ ಮಾಡಲು ಚಿತ್ರ ಭಾರತೀಯ ಚಲನಚಿತ್ರ ನಿರ್ಮಾಪಕರು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಈಗಲೇ ಚಲನಚಿತ್ರ ಶೀರ್ಷಿಕೆಗಳನ್ನು ಕಾಯ್ದಿರಿಸುವ ಆತುರದಲ್ಲಿದ್ದಾರೆ ಎನ್ನಲಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೆಹಬೂಬಾ ಮುಫ್ತಿ ಮತ್ತು ಫಾರೂಕ್ ಅಬ್ದುಲ್ಲಾ ಅವರಂತಹ ನಾಯಕರು ಭಯೋತ್ಪಾದಕರಲ್ಲ ಮತ್ತು "ಪ್ರತ್ಯೇಕಿಸಲು ಸಾಧ್ಯವಿಲ್ಲ" ಎಂದು ಗುಡುಗಿದ್ದಾರೆ.
ಜಮ್ಮು, ಕಾಶ್ಮೀರ ಮತ್ತು ಲಡಾಕ್ನಲ್ಲಿ ಶಾಂತಿ, ಸಮೃದ್ಧಿ ಮತ್ತು ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ. 370 ನೇ ವಿಧಿಯನ್ನು ರದ್ದುಪಡಿಸುವುದು ಜನ ಸಂಘದ ದಿನಗಳಿಂದಲೂ ಬಿಜೆಪಿಯ ಪ್ರಮುಖ ಸಿದ್ಧಾಂತದ ಒಂದು ಭಾಗವಾಗಿದೆ ಎಂದು ಅಡ್ವಾಣಿ ಹೇಳಿದ್ದಾರೆ.
ಭಯೋತ್ಪಾದನೆ ಬೆದರಿಕೆಯ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಸತ್ತಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.
ಭಾರತ ಹವಾಮಾನ ಇಲಾಖೆ (ಐಎಂಡಿ) ಮುಂದಿನ ಕೆಲವು ದಿನಗಳವರೆಗೆ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಇದು ಜಮ್ಮು ಮತ್ತು ಶ್ರೀನಗರ ನಡುವಿನ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಕಾರಣವಾಗಬಹುದು ಎಂದು ಊಹಿಸಲಾಗಿದೆ. ವಿಶೇಷವಾಗಿ ರಾಂಬನ್ ಮತ್ತು ಬನಿಹಾಲ್ ನಡುವಿನ ಪ್ರದೇಶದ ಭೂಕುಸಿತಕ್ಕೆ ಹೆಚ್ಚು ಗುರಿಯಾಗಬಹುದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.