ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದ ಒಂದು ವರ್ಷದ ನಂತರ, ಎಂಎಸ್ ಧೋನಿ ಮತ್ತೊಮ್ಮೆ ಟೀಮ್ ಇಂಡಿಯಾದ ಡ್ರೆಸ್ಸಿಂಗ್ ರೂಂನೊಳಗೆ ಇರುತ್ತಾರೆ.ಆದರೆ ಈ ಬಾರಿ ಅವರು ಹೊಚ್ಚ ಹೊಸ ಪಾತ್ರವನ್ನು ತಂಡದಲ್ಲಿ ನಿರ್ವಹಿಸಲಿದ್ದಾರೆ.ಭಾರತದ ಅತ್ಯಂತ ಯಶಸ್ವಿ ವೈಟ್-ಬಾಲ್ ನಾಯಕನೆಂದು ಪರಿಗಣಿಸಲ್ಪಡುವ ಧೋನಿ ಮುಂಬರುವ ಟಿ 20 ವಿಶ್ವಕಪ್ಗೆ ತಂಡದ ನೂತನ ಮಾರ್ಗದರ್ಶಕರಾಗಿ ನೇಮಕಗೊಂಡಿದ್ದಾರೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಎರಡನೇ ಟೆಸ್ಟ್ ಸಮಯದಲ್ಲಿ ಕ್ಯಾಪ್ಟನ್ ಜೊತೆ ಔಪಚಾರಿಕ ಸಭೆ ನಡೆಸಿದರು. ಇದರಲ್ಲಿ ಟಿ 20 ವಿಶ್ವಕಪ್ ಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಚರ್ಚಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 73 ನೇ ಮನ್ ಕಿ ಬಾತ್ ಕಾರ್ಯಕ್ರಮದ ಸಂದರ್ಭದಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತದ ಟೆಸ್ಟ್ ಸರಣಿ ಗೆಲುವನ್ನು ಶ್ಲಾಘಿಸಿದ ನಂತರ, ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜೇ ಶಾ ಭಾನುವಾರ ಅವರ ಪ್ರೋತ್ಸಾಹದಾಯಕ ಮಾತುಗಳು ಸ್ಥೈರ್ಯ ಮತ್ತು ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಮುಂಬೈನಲ್ಲಿ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು. ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ವಾರ್ಷಿಕ ಮಹಾಸಭೆಯಲ್ಲಿ (ಎಜಿಎಂ) ಸೌರವ್ ಗಂಗೂಲಿ ಅಧ್ಯಕ್ಷರಾಗಿ ಆಯ್ಕೆಯಾದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.