Career Updates: ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ ತರಬೇತಿ, ಕುಷ್ಟಗಿಯಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್ ಬಗ್ಗೆ ತರಬೇತಿ, ಯಲಬುರ್ಗಾದಲ್ಲಿ ಫ್ಯಾಷನ್ ಡಿಸೈನಿಂಗ್ ಬಗ್ಗೆ ತರಬೇತಿ, ಗಂಗಾವತಿಯಲ್ಲಿ ಎಲೆಕ್ಟ್ರಿಕಲ್ ಹೋಮ್ ಅಪ್ಲೆಂ ಯನ್ಸ್ಸ್ ಬಗ್ಗೆ ತರಬೇತಿ ಹಾಗೂ ಕುಕನೂರಿನಲ್ಲಿ ಮೋಬೈಲ್ ಫೋನ್ಸ್ ರಿಪರ್ಸ್ & ಸರ್ವೀಸಿಂಗ್ ಬಗ್ಗೆ ತರಬೇತಿಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.
Latest Career News: ಅಂದು ಬೆಳಿಗ್ಗೆ 10 ರಿಂದ 1:30 ಗಂಟೆಯವರೆಗೆ ವಾಕ್ ಇನ್ ಇಂಟರ್ವ್ಯೂವ್ ನಡೆಯಲಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. 18 ರಿಂದ 30 ವರ್ಷ ವಯೋಮಾನದ ಪಿಯುಸಿ/ತತ್ಸಮಾನ, ಐಟಿಐ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕಿನಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.
Job Updates: ಅರ್ಜಿ ನಮೂನೆಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ, ಜಿಲ್ಲಾ ಪಂಚಾಯತ್, ಕೊಪ್ಪಳ ಹಾಗೂ ಎಲ್ಲಾ ತಾಲೂಕ ಪಂಚಾಯತಿ ಮತ್ತು ಸಂಬಂಧಿಸಿದ 21 ಗ್ರಾಮ ಪಂಚಾಯತಿಗಳಲ್ಲಿ ಮತ್ತು ಜಿಲ್ಲಾ ವೆಬ್ಸೈಟ್ www.koppal.nic.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ( ಕೆಪಿಎಸ್ಸಿ) ಅಧಿಸೂಚನೆ ಹೊರಡಿಸಿದ್ದು, ವಿಶೇಷವಾಗಿ ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 77 ಹುದ್ದೆಗಳನ್ನು ಮೀಸಲಿರಿಸಿದೆ. ಜೊತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 40 AE ಹುದ್ದೆಗಳ ನೇಮಕಾತಿಗೂ ಕೂಡ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ದಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆಯಿಂದ ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬ್ರಹತ್ ಉದ್ಯೋಗ ಮೇಳವನ್ನು ಫೆ,26 ರಿಂದ 27 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಆಹಾರ ಸಂಸ್ಕರಣಾ ತಂತ್ರಜ್ಞಾನ ವಿಭಾಗ, ಬಿ.ಟೆಕ್. (ಫುಡ್ ಟೆಕ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಒಂದು ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜೈವಿಕ ಇಂಧನ ಉದ್ಯಾನವನ ಯೋಜನೆಯಡಿ ಕೃಷಿ ಅರಣ್ಯ ವಿಭಾಗದಲ್ಲಿ ವೈಜ್ಞಾನಿಕ ಸಹಾಯಕ (ಸೈಂಟಿಫಿಕ್ ಅಸಿಸ್ಟಂಟ್) ತಾತ್ಕಾಲಿಕ ಹುದ್ದೆಗಾಗಿ ಫೆಬ್ರವರಿ 15 ರಂದು ಬೆಳಿಗ್ಗೆ 10:30 ಘಂಟೆಗೆ ಸಂದರ್ಶನ ಏರ್ಪಡಿಸಲಾಗಿದೆ.
ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದಲ್ಲಿರುವ, ಸಮುದಾಯ ವಿಜ್ಞಾನ ಮಹಾವಿದ್ಯಾಲಯದ, ಕುಟುಂಬ ವಿಭಾಗದಲ್ಲಿ ಖಾಲಿ ಇರುವ ಪ್ರಯೋಗಾಲಯ ಸಹಾಯಕ, ಕಾರ್ಯಕ್ರಮ ಅಧಿಕಾರಿ, ಕಾರ್ಯಕ್ರಮ ನಿರ್ವಾಹಕರು ಮತ್ತು ಹಿರಿಯ ಕಾರ್ಯಕ್ರಮ ಅಧಿಕಾರಿ ಸೇರಿ ತಾತ್ಕಾಲಿಕ 4 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾನೂನು ನೆರವು ರಕ್ಷಣಾ ಸಲಹೆಗಾರ (LADC) ಕಚೇರಿಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್ಯುಹೆಚ್ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಕಲಬುರಗಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಂದಾಯ ಇಲಾಖೆಯಲ್ಲಿನ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ನಿರ್ವಹಿಸಲು ಮತ್ತು ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ಗುತ್ತಿಗೆ ಆಧಾರದ ಮೇಲೆ "ಕಾನೂನು ಸಲಹೆಗಾರರ" ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಚುನಾವಣೆ ಪೂರ್ವ ನಮ್ಮ ಪಕ್ಷ ಪ್ರಾಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಹಂತ ಹಂತವಾಗಿ ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ರಾಜ್ಯದಲ್ಲಿ ಖಾಲಿ ಇರುವ 2.50 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇನ್ನು ಶಿಕ್ಷಕರ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ, ನ್ಯಾಯಾಲಯದ ತೀರ್ಪಿನಂತೆ ಕ್ರಮ ವಹಿಸಲಾಗುತ್ತದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಭಾರತ ಸರ್ಕಾರ ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದಿಂದ 2022-23 ನೇ ಸಾಲಿಗಾಗಿ ರಾಷ್ಟ್ರೀಯ ಯುವ ಸ್ವಯಂ ಕಾರ್ಯಕರ್ತರ ತಾತ್ಕಾಲಿಕ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಸೇನೆಯು ಜೆಸಿಒ/ಒಆರ್ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ಪ್ರಕಟಿಸಿದೆ. ಮೊದಲ ಹಂತದಲ್ಲಿ, joinindianarmy.nic.in ವೆಬ್ಸೈಟ್ ನಲ್ಲಿ ಆನ್ಲೈನ್ನಲ್ಲಿ ನೋಂದಾಯಿಸಿದ ಮತ್ತು ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಳಗಾಗುತ್ತಾರೆ. ಎರಡನೇ ಹಂತದಲ್ಲಿ, ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಆಯಾ ಸೇನಾ ನೇಮಕಾತಿ ಕಛೇರಿಗಳು ನಿರ್ಧರಿಸಿದ ಸ್ಥಳಗಳಲ್ಲಿ ನೇಮಕಾತಿ ಸಮಾವೇಶಗಳಿಗೆ ಕರೆಯಲಾಗುವುದು, ಅಲ್ಲಿ ಅವರು ದೈಹಿಕ ಸದೃಢತೆಯ ಪರೀಕ್ಷೆಗಳು ಮತ್ತು ದೈಹಿಕ ಮಾಪನ ಪರೀಕ್ಷೆಗಳಿಗೆ ಒಳಗಾಗುತ್ತಾರೆ. ಅಂತಿಮವಾಗಿ ಮೂರನೇ ಹಂತದಲ್ಲಿ, ಆಯ್ಕೆಯಾದ ಅಭ್ಯರ್ಥಿಗಳು ರ್ಯಾಲಿ ಸ್ಥಳದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.