ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪುತ್ ಅವರ ನಿಧನದ ಬಳಿಕ ಖ್ಯಾತ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ತಮ್ಮ ಹೇಳಿಕೆಗಳ ಮೂಲಕ ಮಾಧ್ಯಮಗಳಲ್ಲಿ ಹೆಡ್ಲೈನ್ ಸೃಷ್ಟಿಸುತ್ತಲೇ ಇದ್ದಾರೆ.
2020 ರ ಜೂನ್ 14 ರಂದು ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ ರನೌತ್ ಮುಂಬೈ ಪೊಲೀಸರಿಗೆ ತಮ್ಮ ವಕೀಲ ಇಷ್ಕಾರನ್ ಸಿಂಗ್ ಭಂಡಾರಿ ಮೂಲಕ ಪ್ರತಿಕ್ರಿಯಿಸಿದ್ದಾರೆ. ಕಂಗನಾ ಅವರು ಪೊಲೀಸರಿಗೆ ನೀಡಿದ ಉತ್ತರದಲ್ಲಿ ಮಾರ್ಚ್ 17 ರಿಂದ ತನ್ನ ಮನಾಲಿ ನಿವಾಸದಲ್ಲಿದ್ದಾರೆ ಎಂದು ಬರೆದಿದ್ದಾರೆ.
ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮುಂಬೈ ಪೊಲೀಸರು ನಿರಂತರವಾಗಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಮುಂಬೈ ಪೊಲೀಸರು ಇದುವರೆಗೆ 35 ಜನರನ್ನು ಪ್ರಶ್ನಿಸಿದ್ದಾರೆ.
ಸುಶಾಂತ್ ಸಿಂಗ್ ರಾಜಪೂತ್ ಅವರ ಆತ್ಮಹತ್ಯೆಯ ಬಳಿಕ ನಿರಂತರವಾಗಿ ಹೇಳಿಕೆಗಳನ್ನು ನೀಡುತ್ತಿರುವ ಖ್ಯಾತ ಬಾಲಿವುಡ್ ನಟಿ ಕಂಗನಾ ರಣಾವತ್ ಹೆಡ್ಲೈನ್ ಸೃಷ್ಟಿಸುತ್ತಲೇ ಇದ್ದಾಳೆ. ಸುಶಾಂತ್ ಸಾವಿನ ಬಳಿಕ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಕಂಗನಾ ರಣಾವತ್ ಚಿತ್ರರಂಗದ ಖ್ಯಾತ ಮುಖಗಳನ್ನು ಗುರಿಯಾಗಿಸಿದ್ದರು.
ಬಾಲಿವುಡ್ ಖ್ಯಾತ ಸಿಂಗರ್ ಸೋನಾ ಮಹಾಪಾತ್ರಾ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸೋನಾ ಮಹಾಪಾತ್ರ, ಒಂದು ಕಾಲದಲ್ಲಿ ಸಲ್ಮಾನ್ ಖಾನ್ ಅವರ ವಿರುದ್ಧ ಮಾತನಾಡಿದ್ದಕ್ಕೆ ನನಗೆ ಗ್ಯಾಂಗ್ ರೇಪ್ ಹಾಗೂ ಆಸಿಡ್ ದಾಳಿ ನಡೆಸುವ ಕುರಿತು ಬೆದರಿಕೆಯ ಪತ್ರಗಳು ಬಂದಿದ್ದವು ಎಂದು ಬಹಿರಂಗಗೊಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 5 ರಂದು 9 ನಿಮಿಷಗಳ ಕಾಲ ತಮ್ಮ ತಮ್ಮ ಮನೆ ದೀಪಗಳನ್ನು ಆರಿಸಿ, ಮೇಣದ ದೀಪ ಬೆಳಗಲು ದೇಶದ ನಾಗರಿಕರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಖ್ಯಾತ ಬಾಲಿವುಡ್ ನಟಿ ತಾಪಸಿ ಪನ್ನು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದರಿಂದ ಅವರು ಸಾಮಾಜಿಕ ಮಾಧ್ಯಮಗಳ ಮೇಲೆ ನೆಟ್ಟಿಗರ ಟ್ರೋಲ್ ಗೆ ಗುರಿಯಾಗಿದ್ದಾರೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರ 72ನೇ ಜಯಂತಿಯ ಅಂಗವಾಗಿ ತಮ್ಮ ಮುಂಬರುವ ಚಿತ್ರ 'ಥಲೈವಿ'ಯ ಲುಕ್ ಅನ್ನು ಕಂಗನಾ ರಣಾವತ್ ಹಂಚಿಕೊಂಡಿದ್ದಾರೆ. ಅವರ ಈ ಅವತಾರಕ್ಕೆ ಅಭಿಮಾನಿಗಳು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಒಂದು ಕಾಲದಲ್ಲಿ ಒಕ್ಕೂಟವಾಗಿದ್ದ ಯುರೋಪ್ ನಲ್ಲಿಯೂ ಕೂಡ ಹಲವು ವಿಭಜನೆಗಳನ್ನು ಮಾಡಲಾಗಿದೆ. ಇದರಿಂದ ಸಿಕ್ಕಿದ್ದಾದರೂ ಏನು? ಇದೀಗ ಕೆಲ ಜನರು ಭಾರತವೇ ಇರಲಿಲ್ಲ. ಭಾರತ ಹಲವು ಭಾಗಗಳಲ್ಲಿ ವಿಭಜನೆಯಾಗಬೇಕು ಎಂದು ಹೇಳುತ್ತಿದ್ದಾರೆ. ಆದರೆ, ಈಗಾಗಲೇ 3 ಭಾಗಗಳಾಗಿ ಭಾರತ ವಿಭಜನೆಗೊಂಡಿದ್ದು, ಅದನ್ನು ಜನರು ಇಂದಿಗೂ ಮರೆಯುತ್ತಿಲ್ಲ ಮತ್ತು ಅದರ ಪರಿಣಾಮಗಳನ್ನು ಎದುರಿಸುತ್ತಲೇ ಇದ್ದಾರೆ ಎಂದು ಕಂಗನಾ ಹೇಳಿದ್ದಾರೆ.
ರಂಗೋಲಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಓರ್ವ ಟ್ವಿಟ್ಟರ್ ಬಳಕೆದಾರರು ನಿಮ್ಮ ಮೇಲೂ ಕೂಡ ಆಸಿಡ್ ದಾಳಿ ನಡೆದಿದೆ ಎಂಬುದು ನಮ್ಮೆಲ್ಲರಿಗೂ ಗೊತ್ತು ಆದರೆ ಯಾರು ಆ ದಾಳಿ ನಡೆಸಿದ್ದರು ಅವರ ಹೆಸರು ನಮಗೆ ಇದುವರೆಗೆ ತಿಳಿದಿಲ್ಲ ಎಂದಿದು ಪರೋಕ್ಷವಾಗಿ ಪ್ರಶ್ನಿಸಿದ್ದಾನೆ.
ದೀಪಿಕಾ ಪಡುಕೋಣೆ ಹೆಸರನ್ನು ಉಲ್ಲೇಖಿಸದೆ ಅವರನ್ನು ಪ್ರಶ್ನಿಸಿರುವ ಕಂಗನಾ ಸಹೋದರಿ ರಂಗೋಲಿ ಚಂದೆಲ್, ಉರಿ ಉಗ್ರ ದಾಳಿ, ಆರ್ಟಿಕಲ್ 370, CAA ಅಥವಾ ದೇಶದ ಇತರೆ ಯಾವುದೇ ವಿಷಯಗಳ ಬಗ್ಗೆ ಯಾವುದೇ ಐಡಿಯಾಲಾಜಿಗೆ ಸಾಥ್ ನೀಡಿದ್ದಾರೆಯೇ? ಎಂದು ಪ್ರಸ್ನಿಸಿದ್ದಾರೆ. ನಾನು ಈಗಲೂ ಸಹ ಹೇಳುತ್ತೇನೆ ಅವರಿಗೆ JNU ವಿದ್ಯಾರ್ಥಿಗಳ ಬಗ್ಗೆ ಯಾವುದೇ ಆಸಕ್ತಿ ಇಲ್ಲ, ಅವರಿಗೆ ಹಣದಲ್ಲಿ ಮಾತ್ರ ಆಸಕ್ತಿ ಇದೆ ಎಂದಿದ್ದಾರೆ.
ಬಾಲಿವುಡ್ ನ ವ್ಯಕ್ತಿಯೊಬ್ಬರು ತಮ್ಮನ್ನು ಜೀವನದಲ್ಲಿ ಮದುವೆಯಾಗಿ ಸೆಟ್ಲ್ ಆಗಲು ತಮ್ಮನ್ನು ಒಲಿಸಿದ್ದಾರೆ ಎಂದು ಕಂಗನಾ ಹೇಳಿದ್ದಾರೆ. ಅಷ್ಟೇ ಅಲ್ಲ, ಆ ವ್ಯಕ್ತಿ ಈಗಾಗಲೇ ವಿವಾಹಿತರಾಗಿದ್ದಾರೆ ಎಂದೂ ಕೂಡ ಹೇಳಿದ್ದಾರೆ.
ವಿಶ್ವ ಸಂಸ್ಥೆಯಲ್ಲಿ ತನ್ನ ಹವಾಮಾನ ಕುರಿತು ನಡೆದ ಸಭೆಯಲ್ಲಿ ತನ್ನ ಭಾಷಣದ ಮೂಲಕ ವಿಶ್ವದ ಗಮನ ಸೆಳೆದ 16 ವರ್ಷದ ಗ್ರೇಟಾ ಥನ್ಬರ್ಗ್ ಅವರಿಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಈಗ ಟ್ವೀಟ್ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.
ಬಾಲಿವುಡ್ ನಟಿ ಕಂಗನಾ ರಾವತ್ ಯಾವಾಗಲೂ ಪರಿಸರ ಮತ್ತು ಸಾಮಾಜಿಕ ಸಮಸ್ಯೆ ಕುರಿತ ವಿಚಾರಗಳನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಅದು ಸ್ಥಳೀಯ ನೇಕಾರರು ಮತ್ತು ಕುಶಲಕರ್ಮಿಗಳನ್ನು ಪ್ರೋತ್ಸಾಹಿಸುವುದರಿಂದ ಹಿಡಿದು ಏಕ-ಬಳಕೆಯ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸುವವರೆಗೆ ಅವರು ಮುಕ್ತವಾಗಿ ಬೆಂಬಲಿಸಿದ್ದಾರೆ.
ಇತ್ತೀಚಿಗೆ ಕಂಗನಾ ರಾವತ್ ಬಾಲಿವುಡ್ ನಲ್ಲಿ ವಿವಾದಾತ್ಮ ಹೇಳಿಕೆ ನೀಡುವುದರಲ್ಲೇ ಬ್ಯುಸಿಯಾಗಿದ್ದಾರೆ.ಅಂತಹ ವಿವಾದಕ್ಕೆ ಮತ್ತೊಂದು ಹೇಳಿಕೆ ಈಗ ಸೇರ್ಪಡೆಯಾಗಿದೆ. ಹೌದು,ಈಗ ಅವರು ರಣಬೀರ್ ಕಪೂರ್ ಹಾಗೂ ಅಲಿಯಾ ಭಟ್ ವಿಚಾರವಾಗಿ ನೀಡಿರುವ ಹೇಳಿಕೆ ನಿಜಕ್ಕೂ ಹೊಸ ವಿವಾದಕ್ಕೆ ಕಾರಣವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.