Kannada Madhyama: ನಿರ್ದೇಶಕ ಅಖಿಲ್ ಪುತ್ತೂರು ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಎರಡು ಹಾಡುಗಳಿವೆ. ಜನಗಳಿಗೆ ಗೊತ್ತಿಲ್ಲದ ಒಂದಷ್ಟು ವಿಷಯಗಳನ್ನು ಕನ್ನಡ ಮಾಧ್ಯಮ ಚಿತ್ರದಲ್ಲಿ ತಿಳಿಸುತ್ತೇವೆ. ಪ್ರಸ್ತುತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತೇನೆ. ನಾನು ಯೋಧನಾಗಿ ಪಾತ್ರ ಮಾಡುತ್ತಿದ್ದೇನೆ ಎಂದರು.
Koti : ಕನ್ನಡದ ಪ್ರತಿಭಾವಂತ ನಟರಲ್ಲಿ ಒಬ್ಬರಾದ ಡಾಲಿ ಧನಂಜಯ ಅವರ ಹೊಸ ಕನ್ನಡ ಸಿನಿಮಾ ಯಾವುದು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಕನ್ನಡ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಪರಮ್ ನಿರ್ದೇಶನದ ಈ ಸಿನಿಮಾ ಹೆಸರು ಕೋಟಿ.
Panchendriyam : ರಾಜ್ ಪ್ರಿಯ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್ ಸೋಮಶೇಖರ್ ನಿರ್ಮಿಸಿರುವ ಹಾಗೂ ಆರನ್ ಕಾರ್ತಿಕ್ ವೆಂಕಟೇಶ್ ನಿರ್ದೇಶನದ "ಪಂಚೇಂದ್ರಿಯಂ" ಚಿತ್ರದ ಹಾಡುಗಳು ಹಾಗೂ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು.
Priyamani : ಭಾರತೀಯ ನಟಿ, ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಟಿಸುತ್ತಾರೆ. 2003 ರಲ್ಲಿ ತೆರೆಕಂಡ ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು . 2007 ರಲ್ಲಿ ತಮಿಳಿನ ಪ್ರಣಯ ನಾಟಕ ಪರುತ್ತಿವೀರನ್ನಲ್ಲಿ ಹಳ್ಳಿ ಹುಡುಗಿಯ ಪಾತ್ರಕ್ಕಾಗಿ ಅವರು ವ್ಯಾಪಕವಾದ ಮನ್ನಣೆಯನ್ನು ಪಡೆದರು. ಇತ್ತೀಚಿಗೆ ತೆರೆ ಕಂಡ ಜವಾನ್ ಸಿನಿಮಾದಲ್ಲಿಯೂ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ.
Darling krishna : ಡಾರ್ಲಿಂಗ್ ಕೃಷ್ಣ ಅವರು ಮೊದಲ ಬಾರಿ ನಾಯಕನಾಗಿ ಒಂದು ಐತಿಹಾಸಿಕ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದೊಂದು ಅತಿ ದೊಡ್ಡ ಮೊತ್ತದ ಸಿನಿಮಾ ಆಗಿದ್ದು, ಬರೋಬ್ಬರಿ 80 ಕೋಟಿ ಬಜೆಟ್ ಸಿನಿಮಾ ಆಗಿದೆ ತಿಳಿದು ಬಂದಿದೆ ಈ ಕುರಿತು ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ..
'Kannamuchche Kaedegude : ನಟರಾಜ್ ಕೃಷ್ಣ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ 'ಕಣ್ಣಾಮುಚ್ಚೆ ಕಾಡೆಗೂಡೆ' ಸಿನಿಮಾದಲ್ಲಿ ನಟ ರಾಘವೇಂದ್ರ ರಾಜ್ಕುಮಾರ್ ನಿವೃತ್ತ ವೈದ್ಯರಾಗಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಉತ್ತರ ಕರ್ನಾಟಕ ಕನ್ನಡ ಗಂಡು ಮೆಟ್ಟಿನ ನಾಡು ಕನ್ನಡ ನಾಡು ನುಡಿ ಭಾಷೆ, ಪ್ರಾದೇಶಿಕತೆಗೆ ಕನ್ನಡಿಗರಿಗೆ ಅನ್ಯಾಯ ಆದಾಗ ಮೊದಲು ಪ್ರಶ್ನೆ ಮಾಡುವವರು ಹುಬ್ಬಳ್ಳಿ ಧಾರವಾಡದವರು. ಗೋಕಾಕ ಚಳುವಳಿ, ಕರ್ನಾಟಕ ಏಕೀಕರಣ ಮೂಲಕ ಕನ್ನಡ ಭಾಷೆಗೆ ನಾಡಿಗೆ ಅಧಮ್ಯ ಚೇತನ ತುಂಬಿದ ನಾಡಿನಲ್ಲೀಗ ಕನ್ನಡ ಧ್ವಜ ಹರಿದಿದೆ.
ಕನ್ನಡ ಭಾಷೆಯ ಬಳಕೆ ಕುರಿತು ಯಾವುದೇ ವ್ಯಕ್ತಿ ದೂರು ನೀಡಲು ಕನ್ನಡ ಕಣ್ಗಾವಲು ಎಂಬ ಆಪ್ ಅನ್ನು ರೂಪಿಸಲಾಗುತ್ತಿದೆ. ಇಲ್ಲಿಗೆ ಬರುವ ದೂರುಗಳನ್ನು ಸಂಬಂಧಪಟ್ಟ ಸಮಿತಿಗಳಿಗೆ ಕಳುಹಿಸಿ, ಅವರು ಆ ದೂರುಗಳ ಬಗ್ಗೆ ಕ್ರಮವಹಿಸುವಂತೆ ವ್ಯವಸ್ಥೆ ರೂಪಿಸಲಾಗುತ್ತಿದೆ.
Tanvi rao : ಕನ್ನಡ ಕಿರುತೆರೆಯ ನಟಿ ತನ್ವಿ ರಾವ್ ಸದ್ಯಕ್ಕೆ ಭಾಗ್ಯಲಕ್ಷ್ಮೀ ಧಾರಾವಾಹಿಯ ಮೂಲಕ ವೀಕ್ಷಕರಿಗೆ ಪರಿಚಿತರಾಗಿದ್ದಾರೆ. ಸಣ್ಣ ವಯಸ್ಸಿನಲ್ಲೇ ಸಾಮಾನ್ಯ ಜನರಿಗೆ ಪರಿಚಿತರಾಗಿದ್ದ ಇವರು ದೆಹಲಿ ದೂರದರ್ಶನದ 'ಧಿನಕ್ ಧಿನ್ ಧಾ' ಹಾಗೂ ಮುಂಬೈ ದೂರದರ್ಶನದ 'ಧಮ್ ಧಮಾ ಧಮ್' ಕಾರ್ಯಕ್ರಮಗಳಲ್ಲಿ ಬಾಲ ಕಲಾವಿದೆಯಾಗಿ ಭಾಗವಹಿಸಿದ್ದರು. 10 ವರ್ಷದವರಾಗಿದ್ದಾಗಲೇ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಕರ್ನಾಟಕ ರಾಜ್ಯ ಪಾಲರಿಂದ ಕರ್ನಾಟಕ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದರು.ಇತ್ತೀಚೆಗೆ ನಟಿ ತನ್ವಿ ರಾವ್ ಭಾಗ್ಯಲಕ್ಷ್ಮಿ ಧಾರಾವಾಹಿಯ ಕೀರ್ತಿ ಪಾತ್ರಕ್ಕೆ ಬಣ್ಣ ಹಚ್ಚಿರುವುದರಿಂದ ಆಗಾಗ ಸುದ್ದಿ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ.
Ondu sarala prema kathe : ಸಿಂಪಲ್ ಸುನಿ ನಿರ್ದೇಶನದಲ್ಲಿ ಮೂಡಿಬಂದಿರುವ ಒಂದು ಸರಳ ಪ್ರೇಮ ಕಥೆ ಸಿನಿಮಾ ೮ಕ್ಕೆ ತೆರೆ ಕಂಡಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಸಿನಿಮಾ ಹೆಸರೇ ಸೂಚಿಸುವ ಹಾಗೆ ಸರಳವಾಗಿಯೇ ಟ್ವಿಸ್ಟ್ , ಎಮೋಷನ್ಸ್ ಮೂಲಕ ಸಿನಿಮಾವನ್ನು ತೋರಿಸಿಕೊಂಡು ಹೋಗಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಅಳವಡಿಸಬೇಕಿದ್ದು, ಎಲ್ಲರೂ ಅದನ್ನು ಅನುಷ್ಠಾನಗೊಳಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಕೈಗಾರಿಕಾ ಮತ್ತು ವಾಣಿಜ್ಯ ಸಂಘ-ಸಂಸ್ಥೆಯ ಪ್ರತಿನಿಧಿಗಳಿಗೆ ತಿಳಿಸಿದರು.
ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ಸಾಬ್ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.