ಈಗಾಗಲೇ 'ಲವ್ ಮಾಕ್ಟೇಲ್ 2' (Love Mocktail 2) ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಜನರಿಗೆ ಸಖತ್ ಇಷ್ಟವಾಗಿದೆ. ಪ್ರೇಕ್ಷಕ ಪ್ರಭು 'ಲವ್ ಮಾಕ್ಟೇಲ್ 2' ಟ್ರೇಲರ್ಗೆ ಥಂಬ್ಸ್ ಅಪ್ ಹೇಳಿದ್ದಾರೆ. ಹೀಗಾಗಿ ಬಿಡುಗಡೆ ದಿನಾಂಕವನ್ನು ತಡಮಾಡದೆ 'ಲವ್ ಮಾಕ್ಟೇಲ್ 2' ಚಿತ್ರತಂಡ ಘೋಷಣೆ ಮಾಡಿದೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳಲ್ಲಿ ನಿರಂತರ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ, ಅಸಂಘಟಿತ ತಂಡಗಳು/ಏಕವ್ಯಕ್ತಿ ಕಲಾವಿದರಿಗೆ ವಾದ್ಯಪರಿಕರ/ವೇಷಭೂಷಣ ಖರೀದಿಗೆ ಹಾಗೂ ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ/ತಂಡ ಕಲಾವಿದರುಗಳಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯ ನೀಡಲಾಗುತ್ತಿದ್ದು, ಆರ್ಹ ಆಸಕ್ತರಿಂದ ಸೇವಾಸಿಂಧು ಮುಖಾಂತರ ಅರ್ಜಿ ಆಹ್ವಾನಿಸಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರ ನೇತೃತ್ವದ ನಿಯೋಗವು ನವದೆಹಲಿಯಲ್ಲಿ ಬುಧವಾರ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕರ್ನಾಟಕ ವಿರೋಧಿ ಮತ್ತು ಕನ್ನಡ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ತೊಡಗಿಸಿಕೊಂಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕರ್ನಾಟಕದಲ್ಲಿ ಸಂಪೂರ್ಣ ನಿಷೇಧಿಸಬೇಕೆಂದು ಒತ್ತಾಯಿಸಿ ಹಲವಾರು ಕನ್ನಡ ಪರ ಸಂಘಟನೆಗಳು ಮತ್ತು ಸಾರಿಗೆ ಒಕ್ಕೂಟಗಳು ಡಿಸೆಂಬರ್ 31 ರಂದು ಒಂದು ದಿನದ ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡದ ಉತ್ತರ ಕರ್ನಾಟಕ ಲೇಖಕಿಯರ ಸಂಘದಿಂದ ಕನ್ನಡ ನಾಡು-ನುಡಿ ಕುರಿತು ಡಿ. 17ರಂದು ಬೆಳಿಗ್ಗೆ 10-30 ಕ್ಕೆ ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರವಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ವಿಚಾರ ಸಂಕಿರಣ ಮತ್ತು ಕವಿಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕನ್ನಡ ರಾಜ್ಯೋತ್ಸವ: ಇಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಹತ್ವಾಕಾಂಕ್ಷೆಯ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳ `ಜನಸೇವಕ' ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಕರ್ನಾಟಕದ ನಾಗರಿಕರ ಜೀವನವನ್ನು ಸುಲಭಗೊಳಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.
ಕರ್ನಾಟಕದ ಕಲೆ, ಸಂಸ್ಕೃತಿ ನಶಿಸಿ ಹೋಗಬಾರದೆಂದು ಸರ್ಕಾರವು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇವುಗಳ ಸದುಪಯೋಗವನ್ನು ಗ್ರಾಮೀಣ ಸೇರಿದಂತೆ ಎಲ್ಲ ಕಲಾವಿದರು ಸದುಪಯೋಗ ಪಡೆದುಕೊಂಡು ಕನ್ನಡವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಸಾಮಾಜಿಕ ಹೋರಾಟಗಾರರಾದ ಲಕ್ಷ್ಮಣ ಬಕ್ಕಾಯಿ ಹೇಳಿದರು.
ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ
ಕೇಂದ್ರ ಸರ್ಕಾರದಿಂದ ಶಾಸ್ತ್ರಿಯ ಭಾಷೆಯ ಸ್ಥಾನಮಾನ ಪಡೆದ ಕೆಲವೇ ಭಾಷೆಗಳಲ್ಲಿ ಕನ್ನಡ ಭಾಷೆಯೂ ಕೂಡ ಒಂದು, ಆದರೆ ಇಂತಹ ಸುದೀರ್ಘ ಇತಿಹಾಸ ಇರುವ ಭಾಷೆಯನ್ನು ಈಗ ಲೋಕಸಭಾ ಸಚಿವಾಲಯ ಕಡೆಗಣಿಸಿದೆ.
ಭಾರತವು ಭಾನುವಾರ ಕರೋನವೈರಸ್ ಸೋಂಕಿನ 43,846 ಹೊಸ ಪ್ರಕರಣಗಳನ್ನು ದಾಖಲಿಸಿದೆ, ಇದು ಸುಮಾರು ನಾಲ್ಕು ತಿಂಗಳಲ್ಲಿ ಅತಿ ಹೆಚ್ಚು ಏಕದಿನ ಉಲ್ಬಣವಾಗಿದೆ, ಇದು ದೇಶವನ್ನು ಸಾಂಕ್ರಾಮಿಕ ರೋಗದ 'ಎರಡನೇ ತರಂಗ'ದ ಅಂಚಿಗೆ ತಳ್ಳಿದೆ.
ನಿರ್ದೇಶಕ ಪ್ರಶಾಂತ್ ನೀಲ್ ಪ್ರಭಾಸ್ ಅವರಿಗಾಗಿ ಸಲಾರ್ ಸಿನಿಮಾವನ್ನು ನಿರ್ದೇಶಿಸುತ್ತಿರುವುದು ಈಗ ನಿಮಗೆಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಈಗ ಬಂದಿರುವ ಹೊಸ ಮಾಹಿತಿ ಪ್ರಕಾರ ಈ ಚಿತ್ರದ ನಾಯಕಿ ಪಾತ್ರವನ್ನು ಶ್ರುತಿ ಹಾಸನ್ ಅವರು ನಿರ್ವಹಿಸಲಿದ್ದಾರೆ ಎನ್ನುವ ಮಾಹಿತಿಯನ್ನು ಪ್ರಭಾಸ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.