Kiccha Sudeep: ನಟ ಕಿಚ್ಚ ಸುದೀಪ್ ಬೆಡ್ ಮೇಲೆ ಮಲಗಿರುವ ವ್ಯಕ್ತಿಯನ್ನು ಎಬ್ಬಿಸಿ ಕೈಹಿಡಿದು " ಪ್ರಪಂಚದಲ್ಲಿರೋ ಎಲ್ಲ ಜಾತಿ ಧರ್ಮದಲ್ಲೂ ಪ್ರೀತಿ ಇದೆ. ಆದರೆ ಅದೇ ಪ್ರೀತಿಗೆ ಯಾವುದೇ ಜಾತಿ ಇಲ್ಲ" ಅಂತಾ ಹೇಳುತ್ತಾರೆ. ಹಾಗಾದ್ರೆ ಸುದೀಪ್ ಈ ರೀತಿ ಹೇಳಿದ್ದು ಯಾಕೆ? ಇದರ ಕುರಿತು ಮಾಹಿತಿ ಇಲ್ಲಿದೆ.
Vamana Film Song Release : ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಇತ್ತೀಚೆಗೆಷ್ಟೇ ರಿಲೀಸ್ ಆಗಿದ್ದ ವಾ..ವಾ..ವಾ..ವಾಮನ ಮಾಸ್ ನಂಬರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ವಾಮನ ಅಂಗಳದಿಂದ ಮುದ್ದು ರಾಕ್ಷಸಿ ಎಂಬ ರೋಮ್ಯಾಂಟಿಕ್ ಹಾಡು ಬಿಡುಗಡೆಯಾಗಿದೆ.
D boss Viral Photos : ಇತ್ತೀಚೆಗೆ ಯುಕೆ ಫ್ಲೈಟ್ ಏರಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫ್ರೆಂಡ್ಸ್ ಜೊತೆ ಕಳೆದ 5 ದಿನಗಳಿಂದ ಬ್ರಿಟನ್ನಲ್ಲಿ ಜಾಲಿಯಾಗಿ ಸುತ್ತಾಡುತ್ತಿದ್ದಾರೆ. ಅಲ್ಲಿ ಸಿಕ್ಕ ಕನ್ನಡ ಅಭಿಮಾನಿಗಳ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಆ ಪೋಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.
Double Ismart Poster : ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್. ಕಳೆದ ತಿಂಗಳಷ್ಟೇ ಅದ್ಧೂರಿಯಾಗಿ ಹೈದ್ರಾಬಾದ್ ನಲ್ಲಿ ಸೆಟ್ಟೇರಿದ್ದ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.
Raju James Bond : ರಾಜು ಜೇಮ್ಸ್ ಬಾಂಡ್ ಚಿತ್ರದ ಬೇಕಿತ್ತಾ..ಬೇಕಿತ್ತಾ.. ಹಾಡಿನ ಬಗ್ಗೆ ಹೇಳ್ತಾ, ತಮ್ಮ ಮೊದಲ ಮದುವೆ ಡಿವೋರ್ಸ್, ಎರಡನೇ ಮದುವೆ ಮತ್ತು ಮಗು ಬಗ್ಗೆ ಬಾಯಿ ಬಿಟ್ಟಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗ್ತಿದೆ.
Abhishek Aviva Wedding : ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿಡಪ ಅವರ ಮದುವೆಗೆ ಕೇವಲ ಇನ್ನು ಎರಡು ದಿನಗಳು ಮಾತ್ರ. ಜೂನ್ 5ರಂದು ನೆರವೇರಲಿರುವ ಈ ಜೋಡಿಯ ವಿವಾಹಕ್ಕೆ ತಯಾರಿ ಭರ್ಜರಿಯಾಗಿದೆ. ಈ ನಡುವೆ ಈ ಸಂಭ್ರಮದಲ್ಲಿ ಅನೇಕ ಸಿನಿತಾರೆಯರು ಭಾಗಿಯಾಗಿದ್ದಾರೆ.
Actor Anirudh Vishnuvardhan: ನಟ ಅನಿರುದ್ದ್ ವಿಷ್ಣುವರ್ಧನ್ ಇತ್ತೀಚಿಗೆ ಜೀ ಕನ್ನಡ ನ್ಯೂಸ್ ಸಂದರ್ಶನದಲ್ಲಿ ಹಲವು ವಿಚಾರಗಳನ್ನ ಹಂಚಿಕೊಂಡರು. ಆ ಸಂದರ್ಭದಲ್ಲಿ ಜೊತೆಜೊತೆಯಲಿ ಸೀರಿಯಲ್ ನಿಂದ ಹೊರಬಂದ ಸಂದರ್ಭದಲ್ಲಿ ನಾನು ತುಂಬಾ ಅಂದ್ರೆ ತುಂಬಾ ನೋವು ಅನುಭವಿಸಿದೆ. ನಾನು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸಿದ ಹಾಗೇ ಅಗೋಯ್ತು. ಆ ಟೈಮ್ ನಲ್ಲಿ ನನ್ನ ಕುಟುಂಬ ನಂಗೆ ತುಂಬಾ ಬೆಂಬಲವಾಗಿ ನಿಂತಿತ್ತು.
Yuva Rajkumar : ದೊಡ್ಮನೆ ಕುಡಿ, ರಾಘವೇಂದ್ರ ರಾಜ್ ಕುಮಾರ್ ಸುಪುತ್ರ ವಿನಯ್ ರಾಜ್ ಕುಮಾರ್ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಟ್ಟಿಗೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ರಾಯಲ್ ಸ್ಟಾರ್ ಗೆ ಪೆಪೆ ಸಿನಿಮಾ ಬಳಗದ ಕಡೆಯಿಂದ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ವಿನಯ್ ಜನ್ಮದಿನದ ವಿಶೇಷವಾಗಿ ಪೆಪೆ ಟೀಸರ್ ರಿಲೀಸ್ ಮಾಡಲಾಗಿದೆ.
Archana Jois : ಅತ್ಯಂತ ಚಿಕ್ಕ ವಯಸ್ಸಿನಲ್ಲಿ ತಾಯಿ ಪಾತ್ರ ಮಾಡಿ ಸದ್ದು ಮಾಡಿದ ನಟಿ ಅಂದ್ರೆ ಅದು ಹೆಮ್ಮೆಯ ಕನ್ನಡತಿ ಅರ್ಚನಾ ಜೋಯಿಸ್. ಯೆಸ್ ಅರ್ಚನಾ ಜೋಯಿಸ್ KGF ಪಾರ್ಟ್ ಒಂದು ಮತ್ತು ಪಾರ್ಟ್ ಎರಡರಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಬಾಲ್ಯದ ತಾಯಿ ಪಾತ್ರದಲ್ಲಿ ನಟಿಸಿ ಇಡೀ ಜಗತ್ತಿನ ಮಂದಿಗೆ ಖುಷಿ ಕೊಟ್ಟ ಸುಂದರ ನಟಿ.
Bad Manners : ಬ್ಯಾಡ್ ಮ್ಯಾನರ್ಸ್..ಈ ಟೈಟಲ್ ಹೊಂದಿರೋ ಸಿನಿಮಾದ ಸದ್ದು ಜೋರಾಗಿದೆ ಅಂದ್ರೆ ತಪ್ಪಿಲ್ಲ ನೋಡಿ. ಇದು ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ನಟನೆಯ ಸಿನಿಮಾ.ಇನ್ನೇನು ಕೆಲವೇ ದಿನಗಲ್ಲಿ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ.ಹಲವು ವಿಶೇಷತೆಗಳಿಗೆ ಬ್ಯಾಡ್ ಮ್ಯಾನರ್ಸ್ ಸಾಕ್ಷಿಯಾಗುತ್ತಿದೆ.
Sandalwood : ಬಾಲಿವುಡ್ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಎರಡು ದಶಕಗಳ ಬಳಿಕ ಸ್ಯಾಂಡಲ್ವುಡ್ನತ್ತ ಹೆಜ್ಜೆ ಹಾಕುವ ಮನಸ್ಸು ಮಾಡಿದ್ದಾರೆ. ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಶನ್ನಲ್ಲಿ ಮೂಡಿ ಬರುತ್ತಿರುವ ʼಕೆಡಿʼ ಚಿತ್ರದಲ್ಲಿ ಶಿಲ್ಪಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Ragini Dwivedi : ರಾಗಿಣಿ ದ್ವಿವೇದಿ - ಆರ್ ಕೆ ಚಂದನ್ ಅಭಿನಯದ ಈ ಚಿತ್ರಕ್ಕೆ ಶಂಕರ್ ಕೋನಮಾನಹಳ್ಳಿ ನಿರ್ದೇಶನ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟಿ ರಾಗಿಣಿ ದ್ವಿವೇದಿ ಅಭಿನಯಿಸುತ್ತಿದ್ದಾರೆ. ನಾಯಕನಾಗಿ ಆರ್ ಕೆ ಚಂದನ್ ನಟಿಸುತ್ತಿದ್ದಾರೆ. ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಗಿಸಿರುವ " ಬಿಂಗೋ" ಚಿತ್ರಕ್ಕೆ ಮೂರನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.
Sapthami Gowda : ಹೊಂಬಾಳೆ ಸಂಸ್ಥೆ 'ಯುವ' ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ ಎಂದು ಘೋಷಿಸಿದೆ. 'ಕಾಂತಾರ' ಚಿತ್ರದಲ್ಲಿ ಲೀಲಾ ಪಾತ್ರದಲ್ಲಿ ನಟಿಸಿ ಸಪ್ತಮಿ ಮೋಡಿ ಮಾಡಿದ್ದರು. ಅದರ ಬೆನ್ನಲ್ಲೇ ಅಭಿಷೇಕ್ ಅಂಬರೀಷ್ ನಟನೆಯ 'ಕಾಳಿ' ಚಿತ್ರಕ್ಕೂ ಆಯ್ಕೆ ಆಗಿದ್ದರು. ಬಾಲಿವುಡ್ ಸಿನಿಮಾದಲ್ಲಿ ನಟಿಸೋ ಅವಕಾಶ ಗಿಟ್ಟಿಸಿಕೊಂಡಿದ್ದರು. ಇದೀಗ ಬಹುನಿರೀಕ್ಷಿತ 'ಯುವ' ಚಿತ್ರಕ್ಕೆ ನಾಯಕಿಯಾಗುವ ಅವಕಾಶ ಸಿಕ್ಕಿದೆ.
ಕಬ್ಜ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್ ಚಂದ್ರು ಕಾಂಬಿನೇಶನ್ನಲ್ಲಿ ಮೂಡಿ ಬರುತ್ತಿರುವ ಮೂರನೇ ಚಿತ್ರ. ಈ ಹಿಂದೆ ಕೇವಲ ಕನ್ನಡದಲ್ಲಿ ಮಾತ್ರ ಚಿತ್ರಗಳನ್ನು ಮಾಡಿದ್ದ ಈ ಜೋಡಿ ಈ ಬಾರಿ ದೊಡ್ಡ ಮಟ್ಟದ ಯೋಜನೆಯೊಂದಿಗೆ ಅಖಾಡಕ್ಕೆ ಇಳಿದಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರವನ್ನು ತಯಾರಿಸಲಾಗಿದ್ದು, ರಿಚ್ ಆಗಿಯೇ ಚಿತ್ರವನ್ನು ನಿರ್ಮಿಸಲಾಗಿದೆ.
ಯುವರಾಜ್ಕುಮಾರ್ ಚೊಚ್ಚಲ ಸಿನಿಮಾದ ಟೈಟಲ್ ರಿವೀಲ್ ಮಾಡುವುದಕ್ಕೆ ಟೀಸರ್ ರಿಲೀಸ್ ಮಾಡಲಾಗಿದೆ. ಅಭಿಮಾನಿಗಳಿಗೆ ಅಂತಾನೇ ಥಿಯೇಟರ್ನಲ್ಲಿ ಟೈಟಲ್ ಬಿಡುಗಡೆ ಮಾಡಿ ಸಂಭ್ರಮಿಸಲಾಗಿದೆ. ಅಂದ್ಹಾಗೆ ಯುವರಾಜ್ಕುಮಾರ್ ಚೊಚ್ಚಲ ಸಿನಿಮಾದ ಟೈಟಲ್ 'ಯುವ'. ಈ ಸಿನಿಮಾದ ಟೈಟಲ್ ಅನೌನ್ಸ್ ಆದಲ್ಲಿಂದ ಅಪ್ಪು ಅಭಿಮಾನಿಗಳು ಮತ್ತಷ್ಟು ಭಾವುಕರಾಗಿದ್ದಾರೆ.
ತಮ್ಮ ಕಥೆಯನ್ನು ತೆರೆ ಮೇಲೆ ತರಲು ಇರಬೇಕಾದ ಧೈರ್ಯ ಮತ್ತು ಅದನ್ನು ಪ್ರಸ್ತುತಪಡಿಸುವ ಕಲೆ ಈ ಸಿನೆಮಾದ ಯುವ ನಿರ್ದೇಶಕರಿಗಿದೆ. ಒಟ್ಟಿನಲ್ಲಿ ಈ ಪಾತ್ರ ಸಂತಸ ತಂದಿದೆ ಅಂತ ಬಾಲಾಜಿ ಮನೋಹರ್ ಅವರು ಹೇಳಿಕೊಂಡಿದ್ದಾರೆ.ಇತ್ತೀಚೆಗಷ್ಟೇ ಮೇಘನರಾಜ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದ, ಚಿತ್ರತಂಡ ಈಗ ಬಾಲಾಜಿ ಮನೋಹರ್ ಅವರ ಪಾತ್ರ ಪರಿಚಯದ ಪೋಸ್ಟರ್ ಬಿಡುಗಡೆ ಮಾಡಿದೆ.
ಮೊದಲೆಲ್ಲಾ ಥಿಯೇಟರ್ನಲ್ಲಿ ಬಿಡುಗಡೆಯಾದ ಸಿನಿಮಾ ಟಿವಿಗೆ ಬರೋಕೆ ತಿಂಗಳುಗಟ್ಟಲೆ ಕಾಯಬೇಕಿತ್ತು. ಆದರೆ ಈಗ ದೊಡ್ಡ ದೊಡ್ಡ ಸಿನಿಮಾಗಳೇ ತಿಂಗಳು ಕಳೆಯುವಷ್ಟರಲ್ಲಿ ನಿಮ್ಮ ಮೊಬೈಲ್ ಸ್ಟ್ರೀನ್ನಲ್ಲಿ ಕಾಣಿಸಿಕೊಳ್ಳುತ್ತವೆ. ಓಟಿಟಿ ಫ್ಲಾಟ್ಫಾರ್ಮ್ ಚಂದಾದಾರರು ಹಿಟ್ ಸಿನಿಮಾಗಳನ್ನು ನೋಡಿ ಎಂಜಾಯ್ ಮಾಡುವ ಅವಕಾಶ ಸಿಗುತ್ತಿದೆ. ಕೆಲ ಸಿನಿಮಾಗಳು ನೇರವಾಗಿ ಓಟಿಟಿಗೆ ಬರುತ್ತಿವೆ.
ಇತ್ತೀಚೆಗೆ ಸ್ಯಾಂಡಲ್ವುಡ್ನಲ್ಲಿ ಮಹಿಳಾ ಪ್ರಧಾನ ಸಿನಿಮಾಗಳು ಕಮ್ಮಿಯಾಗುತ್ತಿವೆ. ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರದಲ್ಲಿ ಮಾಸ್ ಸಿನಿಮಾಗಳನ್ನೇ ಹೆಚ್ಚಾಗಿ ನಿರ್ಮಾಣ ಮಾಡಲಾಗುತ್ತಿದೆ. ಅಬ್ಬರದಲ್ಲಿ ಮಹಿಳಾ ಪ್ರಧಾನ ಸಿನಿಮಾಗಳು ಕಾಣಿಸುತ್ತಿಲ್ಲ.
ಬಿಗ್ ಬಜೆಟ್ ಸಿನಿಮಾದ ಅದ್ದೂರಿ ಸಾಂಗ್ ಮೇಕಿಂಗ್ ಝಲಕ್ ನೋಡಿದ್ರೆ ನೀವು ಕೂಡ ಥ್ರಿಲ್ ಆಗಬೋದು. ಉಪೇಂದ್ರ ಸ್ಟೆಪ್ಸ್ ಹಾಕಿರೋ ಹಾಡಿನ ಮೇಕಿಂಗ್ ನೋಡಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ಆರ್ ಚಂದ್ರು ಆಕ್ಷನ್ ಕಟ್ ಹೇಳಿರೋ ಅದ್ದೂರಿ ಸಿನಿಮಾ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಮಾರ್ಚ್ 17ರಂದು ರಿಲೀಸ್ ಆಗುತ್ತಿದೆ.
ಸ್ಯಾಂಡಲ್ವುಡ್ನಲ್ಲಿ ಒಳ್ಳೊಳ್ಳೆ ಸ್ಟೋರಿಗಳನ್ನ ಹೊತ್ತ ಸಿನಿಮಾಗಳು ರಿಲೀಸ್ ಆಗುತ್ತಲೇ ಇವೆ.ಆಲ್ಮೋಸ್ಟ್ ಇತ್ತೀಚಿಗೆ ತೆರೆ ಕಾಣುತ್ತಿರೋ ಸಿನಿಮಾಗಲ್ಲಿ ಒಳ್ಳೆ ಸಂದೇಶ ಮತ್ತು ಪಕ್ಕಾ ಮನರಂಜನೆ ಇದ್ದೇ ಇರುತ್ತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.