Cauvery Water Dispute: ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್.ಹಾಗೂ ಕಬಿನಿಯಿಂದ 5000 ಕ್ಯೂಸೆಕ್ಸ್ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿಗಳು
ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ. ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು!! ಹೀಗಿದೆ ನಮ್ಮ ಸ್ಥಿತಿ. ಆ ರಾಜ್ಯವು ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಅಂಕಿ-ಅಂಶದ ಬಗ್ಗೆ ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ- ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ
ಬೊಮ್ಮಸಂದ್ರ ಟು ಹೊಸರು ಮೆಟ್ರೋ ಅಧ್ಯಯನಕ್ಕೆ ವಿರೋಧ
ಕನ್ನಡಿಗರ ವಿರೋಧದ ನಡುವೆಯೂ ಅಧ್ಯಯನಕ್ಕೆ ಟೆಂಡರ್.!
ಚೆನ್ನೈ ಮೆಟ್ರೋ ನಿಗಮದಿಂದ ಅಧ್ಯಯನಕ್ಕೆ ಹೊಸ ಟೆಂಡರ್
ಬೊಮ್ಮಸಂದ್ರ - ಹೊಸರು ಮಾರ್ಗದ ಮೆಟ್ರೋಗೆ ಮತ್ತೆ ಜೀವ
ಆಗಸ್ಟ್ 1ರಿಂದ 31ರವರೆಗೆ ಟೆಂಡರ್ಗೆ ಅರ್ಜಿ ಸಲ್ಲಿಸಲು ಅವಕಾಶ
Amarnath Yatra 2023: ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಐವರು ಸೇಫ್ ಆಗಿದ್ದಾರೆ. ಸದ್ಯ ಕಾಫಿನಾಡಿಗರು ಮರನಾಥ ಬಳಿಯ ಶೇಷನಾಗ್ ಪ್ರದೇಶದಲ್ಲಿದ್ದಾರೆ. ಚಿಕ್ಕಮಗಳೂರಿನಿಂದ ಕಳೆದ ವಾರ ಯಾತ್ರೆಗೆ ತೆರಳಿದ್ದ ಯಾತ್ರಿಕರು.
ಮನೆ ಬಾಗಿಲಿಗೆ ಹಾಲು ಮೊಸರು ಪೂರೈಕೆಗೆ ಅಮೂಲ್ ಮುಂದಾಗಿರುವ ಬೆನ್ನಲ್ಲೇ ಈಗ ಅಮೂಲ್ ವಿರುದ್ಧ ಕನ್ನಡಿಗರ ಕಿಡಿಕಾರಿದ್ದು, ಅಷ್ಟೇ ಅಲ್ಲದೆ ನಂದಿನಿ ಉಳಿಸಿ ಎನ್ನುವ ಅಭಿಯಾನಕ್ಕೆ ಮುಂದಾಗಿದ್ದಾರೆ.ಸೇವ್ ನಂದಿನಿ ಕೆಎಂಎಫ್'ಹ್ಯಾಷ್ಟ್ಯಾಗ್ನೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕನ್ನಡಿಗರು ಅಭಿಯಾನವನ್ನು ಆರಂಭಿಸಿದ್ದಾರೆ.
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಕನ್ನಡಿಗರು ಕರ್ನಾಟಕದ ಹೊಸ ನಕ್ಷೆ ತಯಾರಿಸೋ ಮೂಲಕ ತಿರುಗೇಟು ಕೊಟ್ಟಿದ್ದಾರೆ.. ಕರ್ನಾಟಕಕ್ಕೆ ಸೇರಲು ಉತ್ಸುಕರಾಗಿರುವ ಮಹಾ ಕನ್ನಡಿಗರು ಹೊಸ ನಕ್ಷೆ ತಯಾರಿಸಿದ್ದಾರೆ. ಆ ನಕ್ಷೆಯಲ್ಲಿ ಮಹಾರಾಷ್ಟ್ರದ ಕೆಲ ಜಿಲ್ಲೆಗಳನ್ನ ಕರ್ನಾಟಕಕ್ಕೆ ಸೇರ್ಪಡೆ ಮಾಡಿದ್ದಾರೆ.
ಸಗಣಿಗೆ ಕೃಷಿ ಚಟುವಟಿಕೆಯಲ್ಲಿ ವಿಶೇಷ ಮಹತ್ವ, ಧಾರ್ಮಿಕವಾಗಿಯೂ ಪವಿತ್ರ ಸ್ಥಾನವಿದೆ. ಅದೇ ಸಗಣಿಯನ್ನು ಕೈಯಲ್ಲಿ ಹಿಡಿಯುವುದೆಂದರೆ ಕೆಲವರಿಗೆ ಇರಿಸುಮುರಿಸು. ಆದರೆ, ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ನಡೆದ 'ಗೊರೆ ಹಬ್ಬ'ದಲ್ಲಿ ಸಗಣಿಯ ಗುಡ್ಡದಲ್ಲೇ ಹೊರಲಾಡಿ, ಸಗಣಿ ಉಂಡೆಗಳನ್ನು ಎರಚಾಡಿಕೊಳ್ಳುತ್ತಾ ವಿಶಿಷ್ಟವಾಗಿ ಆಚರಿಸಲಾಗುತ್ತದೆ.
ಕನ್ನಡಿಗರ ಹವಾ ಏನು ಅನ್ನೋದು ಈಗ ಇಡೀ ಇಂಡಿಯನ್ ಸಿನಿಮಾ ಲೋಕಕ್ಕೆ ಗೊತ್ತಿದೆ. ನಮ್ ಇಂಡಸ್ಟ್ರೀ ಮಂದಿಯನ್ನು ಪರಭಾಷೆಯವರು ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸ್ತಿದ್ದಾರೆ. ಇಂತಹ ಟೈಮ್ ನಲ್ಲಿ ಕನ್ನಡದ ಯುವ ನಟ ಯುವನ್ ಹರಿಹರನ್ ನಾಯಕನಾಗಿ ಅಭಿನಯಿಸಿರುವ ಚೊಚ್ಚಲ ಹಿಂದಿ ಸಿನಿಮಾ ವೈ ಅಂಗಳದ ಬೆಪನ್ಹಾ ಹಾಡು ರಿಲೀಸ್ ಆಗಿದ್ದು, ಯೂಟ್ಯೂಬ್ ಪ್ರಪಂಚದಲ್ಲಿ ಭಾರೀ ಸದ್ದು ಮಾಡ್ತಿದೆ.
ಇಂದು ನಮ್ಮೆಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ಪುತ್ಥಳಿ ಅನಾವರಣ ಮಾಡಿದ್ದೇವೆ. ಅಪ್ಪು ಈಗ ಕೇವಲ ಹೆಸರಲ್ಲ ಪ್ರತಿಯೊಬ್ಬ ಕನ್ನಡಿಗರ ಉಸಿರಾಗಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಉಕ್ರೇನ್ʼನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಏರ್ʼಲಿಫ್ಟ್ ಮಾಡಿ ರಾಜ್ಯಕ್ಕೆ ಕರೆತೆರಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳನ್ನು ಒತ್ತಾಯಿಸಿದ್ದಾರೆ.
ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜವನ್ನು ಡಿಸೆಂಬರ್ 31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. - ಕುಮಾರಸ್ವಾಮಿ
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮರಾಠ ಅಭಿವೃದ್ಧಿ ನಿಗಮ (Marathi development authority) ಮಾಡಿರುವುದನ್ನು ಬಲವಾಗಿ ಸಮರ್ಥಿಸಿಕೊಂಡರಲ್ಲದೆ ಯಾರಾದರೂ ಬಲವಂತದಿಂದ ಬಂದ್ ಮಾಡಲು ಪ್ರಯತ್ನಿಸಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮರಾಠ ಅಭಿವೃದ್ಧಿ ನಿಗಮ ಹಾಗೂ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ರಾಜ್ಯ ಸರ್ಕಾರದ ನಡೆಗೆ ವ್ಯಾಪಾಕ ಖಂಡನೆಯಾಗುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ಖಡಕ್ ಆಗಿ ಪ್ರಶ್ನಿಸಿದ್ದಾರೆ.
ಸದ್ಯ ಕರ್ನಾಟಕದ ಮೂಲದ 1904 ಮಂದಿ ಯುಎಇಯಲ್ಲಿದ್ದು, ಈ ಪೈಕಿ 121 ಗರ್ಭಿಣಿಯರಿದ್ದಾರೆ. ವೀಸಾ ಅವಧಿ ಮುಗಿದ 522 ನಿರೋದ್ಯೋಗಿಗಳು, 157 ರೋಗಿಗಳು ಇತರ 95 ಮಂದಿ ಇತರೆ ಕಾರಣಗಳಿಂದ ವಾಪಸ್ ಬರಲಾರದೆ ಸಂಕಷ್ಟಕ್ಕೆ ಸಿಲುಕಿ ತಾಯ್ನಾಡಿಗೆ ವಾಪಸಾಗಲು ಸರ್ಕಾರದ ನೆರವನ್ನು ಕೋರಿರುತ್ತಾರೆ.
ಅನೇಕ ರಾಜ್ಯ ಸರ್ಕಾರಗಳು ಬೇರೆ ರಾಜ್ಯಗಳಲ್ಲಿ ಸಿಲುಕಿರುವ ತಮ್ಮ ಜನರನ್ನು ವಾಪಸ್ ಕರೆತರಲು ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿದೆ. ಅದೇರೀತಿ ಬೇರೆ ರಾಜ್ಯಗಳಲ್ಲಿ ಉದ್ಯೋಗ, ಕೆಲಸ ಮಾಡುತ್ತಿರುವ ಅನೇಕ ಕನ್ನಡಿಗರು ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಅದರಲ್ಲಿ ಅನೇಕರು ಕುಟುಂಬದಿಂದ ದೂರ ಉಳಿದು ತಾವೇ ಬದುಕುತ್ತಿದ್ದಾರೆ. ಅವರು ಈ ಸಮಯದಲ್ಲಿ ಭವಿಷ್ಯದ ಬಗ್ಗೆ ಯೋಚಿಸುವ ಮುನ್ನ ಅವರು ತಮ್ಮ ಊರಿಗೆ ಮರಳಲು ಇಚ್ಛಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.