ಇಂದು ಧಾರವಾಡ ಜಿಲ್ಲೆಗೂ ಆಗಮಿಸಲಿರುವ ಬಿಜೆಪಿ ಚಾಣಕ್ಯ. ಧಾರವಾಡಕ್ಕೆ ಭೇಟಿ ನೀಡಲಿರೋ ಕೇಂದ್ರ ಗೃಹ ಸಚಿವ ಅಮಿತ್ ಶಾ. ಅಣ್ಣಿಗೇರಿ ಹಾಗೂ ನವಲಗುಂದ ತಾಲೂಕುಗಳಿಗೆ ಅಮಿತ್ ಶಾ ಭೇಟಿ. ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಅಮಿತ್ ಶಾ ಭರ್ಜರಿ ಪ್ರಚಾರ. ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ್ ಮುನೇನಕೊಪ್ಪ ಪರ ಮತಯಾಚನೆ.
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಿಜೆಪಿ ಪರ ರೋಡ್ ಶೋ ನಡೆಸುತ್ತಿರುವ ವೇಳೆ ಯುವಕನೊಬ್ಬ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಫೋಟೋ ಪ್ರದರ್ಶನ ಮಾಡುತ್ತಿದ್ದ. ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರು ಯುವಕನಿಂದ ಫೋಟೋಕಿತ್ತುಕೊಂಡ ಘಟನೆ ನಡೆಯಿತು. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಪರ ನಗರದ ಟೆಂಡರ್ ಶೋರ್ ರಸ್ತೆಯಲ್ಲಿ ಸ್ಮೃತಿ ಇರಾನಿ ರೋಡ್ ಶೋ ನಡೆಸುದ್ದ ವೇಳೆ ಈ ಘಟನೆ ನಡೆದಿದೆ.
Kichha Sudeep Fans : ಚುನಾವಣಾ ಪ್ರಚಾರ ಎಲ್ಲೆಡೆಯೂ ಅಬ್ಬರದಿಂದ ಸಾಗುತ್ತಿದೆ. ರಾಜಕೀಯ ಕಲಿಗಳ ಬೆಂಬಲಕ್ಕೆ ಸಿನಿಮಾ ನಟರು ನಿಂತಿದ್ದಾರೆ. ಸ್ಯಾಂಡಲ್ವುಡ್ನ ಸ್ಟಾರ್ ನಟ ಕಿಚ್ಚ ಸುದೀಪ್ ತಾನು ಬಿಜೆಪಿ ಪಕ್ಷದ ಪರ ನಿಲ್ಲುವುದಾಗಿ ಹೇಳಿದ್ದರು. ಅದೇ ರೀತಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.
Karnataka Assembly Election 2023: ವಿ.ಸೋಮಣ್ಣ ಪತ್ನಿ ಶೈಲಜಾ ಸೋಮಣ್ಣ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸುತ್ತುತ್ತಿದ್ದು, ಮಹಿಳಾ ಸಂಘಗಳು, ಮುಖಂಡರ ಮನೆಗೆ ಭೇಟಿ ಕೊಟ್ಟು ಟ್ರಬಲ್ ಶೂಟರ್ ಆಗಿ ಕೆಲಸ ಮಾಡುತ್ತಿದ್ದಾರೆ.
Kichha Sudeep : ಸ್ಯಾಂಡಲ್ವುಡ್ ಬಾದ್ ಷಾ ಕಿಚ್ಚ ಸುದೀಪ್ ಇಂದು ಅವಳಿ ನಗರದ ಸೆಂಟ್ರಲ್ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಬೇಕಾದ ಸಿದ್ಧತೆಗಳು ಭರ್ಜರಿಯಾಗಿಯೇ ನಡೆದಿವೆ. ಬಿಜೆಪಿ ಪಕ್ಷದ ಪರ ಪ್ರಚಾರದಲ್ಲಿ ಇಳಿದಿರುವ ಸುದೀಪ್ಗೆ ಜನರಿಂದ ಉತ್ತಮ ರೆಸ್ಫಾನ್ಸ್ ದೊರಕುತ್ತಿದೆ. ಇಂದು ಹುಬ್ಬಳ್ಳಿ ಧಾರವಾಡದಲ್ಲಿ ನಡೆಯುವ ಪ್ರಚಾರಕ್ಕೆ ಒಳ್ಳೆಯ ರೆಸ್ಫಾನ್ಸ್ ಸಿಗುವ ಸಾದ್ಯತೆ ಇದೆ.
Karnataka assembly Election: ಜೆಡಿಎಸ್ ಭದ್ರಕೋಟೆ ಎಂದು ಬಿಂಬಿತವಾಗಿರುವ ಜಿಲ್ಲೆಯಲ್ಲಿ ಹಿಡಿತ ಕಾಯ್ದುಕೊಳ್ಳಲು ವರಿಷ್ಠರು ರಾಜಕೀಯ ತಂತ್ರ ಪ್ರಯೋಗಿಸುತ್ತಿದ್ದು, ಅರಸೀಕೆರೆ, ಅರಕಲಗೂಡು ಕ್ಷೇತ್ರಕ್ಕೆ ಬೇರೆ ಪಕ್ಷದ ಪ್ರಬಲ ಅಭ್ಯರ್ಥಿಗಳನ್ನು ಪಕ್ಷಕ್ಕೆ ಕರೆ ತಂದು ಟಿಕೆಟ್ ನೀಡಿದೆ. ಉಳಿದ ಕ್ಷೇತ್ರದಲ್ಲೂ ಪ್ರಚಾರ ಕಾರ್ಯ ಬಿರುಸುಗೊಳಿಸಿದ್ದಾರೆ.
Karnataka assembly Election 2023: ಕುಂದಗೋಳ ಪಟ್ಟಣದಲ್ಲಿ ಹೆಲಿಕ್ಯಾಪ್ಟರ್ ನಲ್ಲಿ ಬಂದಿಳಿದು ರಸ್ತೆ ಮೂಲಕ ಸಂಶಿ ತಲುಪಿ ಬಳಿಕ ಬಸ್ ನಿಲ್ದಾಣದ ಮೂಲಕ ಮೆರವಣಿಗೆಯಲ್ಲಿ ಸಾಗಿದ ಸುದೀಪ್ ನಂತರ ಬಹಿರಂಗ ಸಭೆಯಲ್ಲಿ ಪಾಲ್ಗೊಂಡರು. ಅಭಿಮಾನಿಗಳ ಉತ್ಸಾಸ ಕಂಡು ಸಂತಸಗೊಂಡ ಸುದೀಪ್, ಆಕಾಶದತ್ತ ಕೇಸರಿ ಬಲೂನ್ ಹಾರಿಸಿ ವಿಜಯದ ಸಂಕೇತ ತೋರಿಸಿದರು.
ಪಕ್ಷದ ಪದಾಧಿಕಾರಿಗಳಿಗೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತ ಗಟ್ಟೆಗಳ ವಿವರ ನೀಡುವಂತೆ ಕೋರಿ ಸಂಸದೆ ಶೋಭಾ ಕರಂದ್ಲಾಜೆ ಪತ್ರ ಬರೆದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯದಲ್ಲಿ ಚುನಾವಣಾ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಎಂದು ಅವರು ಪ್ರಶ್ನಿಸಿದ್ದಾರೆ.
Karnataka Assembly Election: ಸಮಾಜವಾದದ ತಾಯಿಬೇರಾಗಿರುವ ಜಿಲ್ಲೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ನಾಂದಿ ಹಾಡಿದ ಸಮಾಜವಾದದ ಹರಿಕಾರ ಶಾಂತವೇರಿಗೋಪಾಲಗೌಡರು ಜನಿಸಿದ್ದು ಹೆಮ್ಮೆಯ ಸಂಗತಿ. ಸಾಹಿತ್ಯ,ಕಲೆ, ರಂಗಭೂಮಿ, ಸುಗಮ ಸಂಗೀತ, ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಇಲ್ಲಿನ ಪ್ರಕೃತಿ ಸೌಂದರ್ಯ ಸ್ಪೂರ್ತಿಯಾದರೆ, ಹೊರಾಟದ ಕಿಚ್ಚನ್ನು ಬೆಳೆಸಿದ ಇಲ್ಲಿನ ಮಣ್ಣು, ರಾಜಕೀಯವಾಗಿ ಹಲವರನ್ನು ಉತ್ತುಂಗಕ್ಕೇರಿಸಿದೆ.
ಇದೊಂದು ದೊಡ್ಡ ಪಿತೂರಿಯಾಗಿದ್ದು, ಚುನಾವಣಾ ಆಯೋಗ ರಾಜ್ಯ ಚುನಾವಣಾ ಪ್ರಕ್ರಿಯೆಯಲ್ಲಿ ಅಮಿತ್ ಶಾ ಭಾಗವಹಿಸದಂತೆ ನಿಷೇಧ ಹೇರಬೇಕು. ಈ ವಿಚಾರವಾಗಿ ಎಐಸಿಸಿ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದು,ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.
Karnataka Assembly Elections: ರಾಜ್ಯದೆಲ್ಲೆಡೆ ಎಲೆಕ್ಷನ್ ಅಬ್ಬರ ಜೋರಾಗಿದೆ. ಮೊದಲಿನಿಂದಲೂ ಕರಾವಳಿಯಲ್ಲಿ ಗೆದ್ದ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಮಾತಿದೆ. ಕರಾವಳಿಯಲ್ಲಿ ಪ್ರಸ್ತುತ ಏಳು ಮಂದಿ ಬಿಜೆಪಿ ಶಾಸಕರಿದ್ದು, ಒಬ್ಬರು ಕಾಂಗ್ರೆಸ್ ಶಾಸಕರಿದ್ದಾರೆ.
Karnataka Election 2023 : ಬಿಜೆಪಿ ಪ್ರಚಾರ ಸಮಯದಲ್ಲಿ ಕಾಂಗ್ರೆಸ್ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ. ಅಮಿತ್ ಶಾ ಅವರ ಬಂಧನವಾಗಬೇಕು ಎಂದು ಆಗ್ರಹಿಸಿದ್ದಾರೆ.
ಮತದಾರರ ಜವಾಬ್ದಾರಿಯಾದ ಮತದಾನ ಪ್ರಜಾಪ್ರಭುತ್ವದ ಭದ್ರ ಅಡಿಪಾಯವಾಗಿದೆ. ಆದರೆ ಭಾರತ ಸರ್ಕಾರ ಮತದಾನವನ್ನು ಕಡ್ಡಾಯಗೊಳಿಸಿಲ್ಲದಿರುವುದರಿಂದ, ಅದು ಪ್ರತಿಯೊಬ್ಬ ಭಾರತೀಯ ನಾಗರಿಕನ ನೈತಿಕ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತದಲ್ಲಿ ಮತದಾನ ಯಾಕೆ ಅಷ್ಟೊಂದು ಅಮೂಲ್ಯ?
ಬದಲಾವಣೆಯ ಮೂಲ
ಗೃಹಸಚಿವ ಅಮಿತ್ ಶಾ ಅವರೇ, ಇದು ಕರ್ನಾಟಕ, ಇಲ್ಲಿ ಹೊಡೆಯುವ, ಬಡಿಯುವ, ಮುರಿಯುವ, ಸುಡುವ ‘ಗುಜರಾತ್ ಮಾದರಿ’ ನಡೆಯುವುದಿಲ್ಲ. ಇಲ್ಲಿ ಏನಿದ್ದರೂ ಪ್ರೀತಿಸುವ, ಪೊರೆಯುವ ಮತ್ತು ಕಟ್ಟುವ ‘ಕರ್ನಾಟಕ ಮಾದರಿ’ಯೇ ನಡೆಯುವುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.