Karnataka Assembly Election 2023: ಬೆಂಗಳೂರಿನಲ್ಲಿ ಸಿದ್ದರಾಮಯ್ಯ 8 ಸಾವಿರ ಕೋಟಿ ರೂ. ಅಕ್ರಮ ಆಸ್ತಿ ಮಾಡಿದ್ದಾರೆಂಬ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
Karnataka Election 2023 : ಸಿಪಿಐ ಜೊತೆ ನಮ್ಮ ಸಿದ್ದಾಂತದಲ್ಲಿ ಬಿನ್ನತೆ ಇರಬಹುದು ಆದರೆ, ನಮ್ಮ ಇಬ್ಬರ ಹೋರಾಟ ಬೆಲೆ ಏರಿಕೆ, ಭ್ರಷ್ಟಾಚಾರ ವಿರುದ್ಧ. ಹೀಗಾಗಿ ಸಿಪಿಐ 7 ಕಡೆ ಅಭ್ಯರ್ಥಿ ಸ್ಪರ್ಧೆ ಮಾಡುತ್ತಿದ್ದಾರೆ. ಇದನ್ನ ಹೊರತು ಪಡಿಸಿ 215 ಕಡೆ ನಮಗೆ ಬೆಂಬಲ ಸೂಚಿಸಿದ್ದಾರೆ.
Karnataka Assembly Election 2023: ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Karnataka Assembly Election 2023: ಬಿಜೆಪಿಯ ಐಟಿ ಸೆಲ್ ಜಗತ್ತಿನ ಏಕೈಕ "ಫೇಕ್ ಫ್ಯಾಕ್ಟರಿ"! ಇನ್ನೆಲ್ಲಿಯದ್ದೋ ಫೋಟೋ ತಂದು ಸಿದ್ದರಾಮನಹುಂಡಿಯ ಹೆಸರಿಗೆ ಜೋಡಿಸುವ ಕಲೆ ಬಿಜೆಪಿಗೆ ಮಾತ್ರ ಸಾಧ್ಯವಾಗುವಂತದ್ದು! ಎಂದು ಕಾಂಗ್ರೆಸ್ ಟೀಕಿಸಿದೆ.
Karnataka Assembly Election 2023: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ದಿಸಲಾಗದ ವ್ಯಕ್ತಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ. ತಾಕತ್ತಿದ್ದರೆ ಚುನಾವಣೆಗೆ ಸ್ಪರ್ಧಿಸಿ ಜನಬೆಂಬಲ ಪಡೆದು ಬರಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.
Karnataka Assembly Election 2023: ಮೇ 10ರಂದು ಯಾರ ಡ್ಯಾಂ ಲೇವಲ್ ಎಷ್ಟಿದೆ ಅಂತಾ ಗೊತ್ತಾಗುತ್ತೆ. ಪ್ರತಿದಿನ ಡ್ಯಾಂ ಲೇವಲ್ ಗೇಜ್ ಮಾಡ್ತಿರ್ತೇವೆ. ಅದೇ ರೀತಿ ಮೇ 10ರಂದು ಲಿಂಗಾಯತ ಮತಗಳು ಹರಿದುಬಂದು ಬಿಜೆಪಿ ತುಂಬಿ ತುಳಕುತ್ತದೆ ಎಂದು ಸಿಸಿ ಪಾಟೀಲ್ ಹೇಳಿದ್ದಾರೆ.
ಶಿಡ್ಲಘಟ್ಟ ಸ್ವಾಭಿಮಾನಿ ಪರ್ವ ಶುರುವಾಗಿದೆ.. ಶಿಡ್ಲಘಟ್ಟ ನಗರ ಮತ್ತು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಒಂದು ಸಾವಿರಕ್ಕೂ ಅಧಿಕ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಬಿಜೆಪಿ ಪಕ್ಷ ತ್ಯಜಿಸಿ ಸ್ಥಳೀಯ ಜೆಡಿಎಸ್ ಅಭ್ಯರ್ಥಿ ಬಿ ಎನ್ ರವಿಕುಮಾರ್ ನೇತೃತ್ವದಲ್ಲಿ JDS ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮಾಜಿ ಸಚಿವರು ಹಾಗೂ ಕಲಘಟಗಿ - ಅಳ್ನಾವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ ಅವರು ಹುಲಗಿನಕೊಪ್ಪ, ಸಂಗಟಿಕೊಪ್ಪ ಹಾಗೂ ಜುಂಜನಬೈಲ್ನಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂತೋಷ್ ಲಾಡ್, ನನ್ನ ಅಧಿಕಾರಾವಧಿಯಲ್ಲಿ ಪ್ರತಿಯೊಂದು ತಾಂಡಾ ಹಾಗೂ ಗ್ರಾಮಗಳ ಅಭಿವೃದ್ಧಿಯಾಗಿದೆ. ಅಧಿಕಾರ ಇಲ್ಲದೇ ಇದ್ದಾಗಲೂ ಕ್ಷೇತ್ರದ ಜನರಿಗಾಗಿ ಹಲವಾರು ಸಾಮಾಜಿಕ ಸೇವಾ ಕಾರ್ಯ ಕೈಗೊಂಡಿದ್ದೆ ಅಂತಾ ಹೇಳಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ ಹಣಿಯಲು ಬಿಜೆಪಿ ರಣತಂತ್ರ ಹೆಣೆದಿದೆ. ಬಿಜೆಪಿ ಪ್ರಮುಖರ ಜೊತೆ ಅಮಿತ್ ಶಾ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ನನ್ನ ನಾಮಪತ್ರ ಕ್ರಮಬದ್ಧವಾಗಿದೆ. ಯಾವುದೇ ತೊಂದರೆ ಇಲ್ಲ. ಎಲ್ಲವನ್ನೂ ಚುನಾವಣಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಇಲ್ಲಸಲ್ಲದವರ ಆರೋಪಕ್ಕೆ ಉತ್ತರ ಕೊಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ್ ಹೇಳಿದ್ದಾರೆ
ಕಾಂಗ್ರೆಸ್ ಜನರಲ್ಲಿ ಆಶೀರ್ವಾದವನ್ನು ಕೇಳುತ್ತದೆ. ಬಿಜೆಪಿ ಜನತೆಗೆ "ಮೋದಿ ಆಶೀರ್ವಾದ"ದ ಬೆದರಿಕೆ ಹಾಕುತ್ತದೆ. ಇದು ಪ್ರಜೆಗಳೇ ಪ್ರಭುಗಳು ಎಂದು ನಂಬಿರುವ ಕಾಂಗ್ರೆಸ್ಸಿಗೂ ಪ್ರಜೆಗಳನ್ನು ಗುಲಾಮರು ಎಂದು ತಿಳಿದ ಬಿಜೆಪಿಗೂ ಇರುವ ವ್ಯತ್ಯಾಸ. ಬಿಜೆಪಿಯವರೇ ಹೇಳಿದಂತೆ ಬಿಜೆಪಿ "ಬ್ಲಾಕ್ಮೇಲ್ ಜನತಾ ಪಾರ್ಟಿ" ಆಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
Karnataka Assembly Election 2023: ಡಿ.ಕೆ.ಶಿವಕುಮಾರ್ ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.