Karnataka assembly Election: ಸಚಿವ ವಿ. ಸೋಮಣ್ಣ ಇಂದು ಮಾರ್ನಿಂಗ್ ವಾಕ್ ನಿಂದಲೇ ಚಾಮರಾಜನಗರದಲ್ಲಿ ಮತಬೇಟೆ ಆರಂಭಿಸಿದರು. ಚಾಮರಾಜನಗರದ ವಿವಿಧ ಬಡಾವಣೆಗಳು, ಟೀ ಅಂಗಡಿಗಳಿಗೂ ಎಡತಾಕಿದ ಸೋಮಣ್ಣ ತನಗೊಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.
ಬಿಜೆಪಿ ವರಿಷ್ಠರು ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿಕೊಂಡಿದ್ದಾರೆ.. ಲಿಂಗಾಯತ ಮತ ಸೆಳೆಯಲು ಕೇಸರಿ ಹೈಕಮಾಂಡ್ ಸ್ಕೆಚ್ ಹಾಕಿದೆ.. ಹಳೇ ಮೈಸೂರು ಭಾಗಕ್ಕೆ ಇಂದು ʻಮರಿಹುಲಿʼ ವಿಜಯೇಂದ್ರ ಎಂಟ್ರಿಯಾಗಲಿದೆ.
ದಿನದಿಂದ ದಿನಕ್ಕೆ ಕರುನಾಡ ಕುರುಕ್ಷೇತ್ರ ಅಖಾಡ ರಂಗೇರುತ್ತಿದೆ.. ರಾಜ್ಯ ಚುನಾವಣಾ ಕಣಕ್ಕೆ ಇಂದು ಅಮಿತ್ ಶಾ ಎಂಟ್ರಿ ಕೊಡಲಿದ್ದಾರೆ. ವಿಜಯಪುರ.. ದೇವನಹಳ್ಳಿಯಲ್ಲಿಂದು ʻಚಾಣಕ್ಯʼ ಮತಬೇಟೆ ನಡೆಸಲಿದ್ದಾರೆ..
Vinay Kulkarni : ಧಾರವಾಡ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಧಾರವಾಡ ಭೇಟಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿಲ್ಲ. ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಧಾರವಾಡ ಭೇಟಿಗೆ ನಿರ್ಭಂದಿಸಿದೆ.
Karnataka Assembly Election 2023: ಪ್ರಧಾನಿ ಮೋದಿಯವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ? ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Karnataka Assembly Election 2023: ಮತ ಹಾಕದಿದ್ದರೆ ಮೋದಿಯ ಆಶೀರ್ವಾದ ತಪ್ಪಿಸಿಕೊಳ್ಳುವಿರಿ ಎಂದು ಬೆದರಿಕೆ ಹಾಕಿರುವ ಜೆಪಿ ನಡ್ಡಾ ಅವರೇ, ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Karnataka Assembly Election 2023: 2006ರ ಚಾಮುಂಡೇಶ್ವರಿ ಚುನಾವಣೆಯಲ್ಲಿ ಸಿದ್ದರಾಮಯ್ಯಗೋಸ್ಕರ ಒದೆ ತಿಂದಿದ್ದೇನೆ. ಬರಿಮೈಯಲ್ಲಿ ದೇವಾಲಪುರದಿಂದ ಮೈಸೂರಿಗೆ ಹೋಗಿದ್ದೇನೆ. ನನ್ನ ಕಾರಿನ ಗ್ಲಾಸ್ ಒಡೆದಿದ್ದರು ಪ್ಯಾಂಟ್ ಹರಿದು ಹಾಕಿದ್ದರು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
Karnataka Assembly Election 2023: ನೀನು ಏನು ಮಾಡ್ಬೇಡ ಹೋಗಪ್ಪಾ ತಂದೆ, ಚೆನ್ನಾಗಿ ಓದು. ಸಿಎಂ, ಗಿಎಂ ಎಲ್ಲಾ ಲೆಕ್ಕ ಇಲ್ಲ ನೀನೆ ದೊಡ್ಡ ಸಿಎಂ, ಚೆನ್ನಾಗಿ ಓದು, ಸ್ಪೋರ್ಟ್ಸ್ ಆಕ್ಟಿವಿಟಿಯಲ್ಲಿರು ಬಾಕಿದೆಲ್ಲಾ ಬಿಟ್ಬಿಡು, ನಿನ್ನ ಹಣೆಯಲ್ಲಿದ್ರೆ ಬರ್ತೀಯಾ ಹೋಗು ಎಂದು ಸೋಮಣ್ಣ ಹೇಳಿದ್ದಾರೆ.
Karnataka Assembly Election 2023: ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ ನನಗೆ ದೂರವಾಣಿ ಕರೆ ಮಾಡುತ್ತಾರೆಂದು ಕನಸು ಮನಸ್ಸಿನಲ್ಲಿಯೂ ಊಹಿಸಿರಲಿಲ್ಲ. ಅವರ ಕರೆ ನನಗೆ ಮತ್ತಷ್ಟು ಪ್ರೇರಣೆಯನ್ನು ನೀಡಿದೆ. ಶಿವಮೊಗ್ಗ ನಗರವನ್ನ ಅಲ್ಲದೆ ಇಡೀ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ.
ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಬಳಿಕ ಅವರು ಬಿಜೆಪಿಯಿಂದ ಟಿಕೆಟ್ ಪಡೆದುಕೊಳ್ಳುವ ಅಂತಿಮ ಹಂತದ ಪ್ರಯತ್ನಕ್ಕೆ ಮುಂದಾದರು. ಒಂದು ವೇಳೆ ಅವಕಾಶ ಆದರೂ ಆಗಬಹುದೆಂಬ ನಂಬಿಕೆಯೊಂದಿಗೆ ಬಿಜೆಪಿಯ ಅಭ್ಯರ್ಥಿ ಎಂಬುದಾಗಿ ನಮೂದು ಮಾಡಿದ ಮತ್ತೊಂದು ನಾಮಪತ್ರವನ್ನು ಕೊನೆ ಘಳಿಗೆಯಲ್ಲಿ ಸಲ್ಲಿಸಿದರು. ಈ ಬೆಳವಣಿಗೆಯ ನಂತರ ಕೃಷ್ಣೇಗೌಡ ಅವರಿಗೆ ಬಿಜೆಪಿ ಬಿ ಫಾರಂ ನೀಡಿದೆ ಎಂಬ ಸುದ್ದಿಯು ಹರಿದಾಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.