Karnataka Assembly Election :ಚುನಾವಣಾ ಏಜೆಂಟರುಗಳು ಮತಗಟ್ಟೆ ಒಳಗೆ ರೆಡ್ಡಿ ಹೆಸರಿನ ನಾಮಫಲಕ ಬಳಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ ಗಟ್ಟೆಗೆ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka Assembly Election : ಮೊದಲ ಬಾರಿಗೆ ಮತದಾನದ ಹಕ್ಕನ್ನು ಪಡೆದವರು ಹುರುಪಿನಿಂದ ಬಂದು ಮತದಾನ ಮಾಡುತ್ತಿದ್ದರೆ, ಹಣ್ಣು ಹಣ್ಣು ಮುದುಕಿಯರು ಕೂಡಾ ಅಷ್ಟೇ ಸಂಭ್ರಮದಿಂದ ಹಕ್ಕು ಚಲಾಯಿಸುತ್ತಿದ್ದಾರೆ.
ಕರ್ನಾಟಕ ಚುನಾವಣೆ 2023: ರಾಜ್ಯ ವಿಧಾನಸಭೆಗೆ ಅಬ್ಬರದ ಮತದಾನ ನಡೆಯುತ್ತಿದೆ. ಮೊದಲ ಬಾರಿಗೆ ಮತದಾನ ಮಾಡುವವರ ಹುಮ್ಮಸ್ಸು, ಮದುವೆಗೆ ತೆರಳುವ ಮುನ್ನ ಹಕ್ಕು ಚಲಾಯಿಸಿದ ವಧು, ನಡೆದಾಡಲು ಆಗದಿದ್ದರೂ ವ್ಹೀಲ್ ಚೇರ್ ನಲ್ಲಿ ಬಂದು ಮತ ಹಾಕಿದ ವೃದ್ದೆ ಹೀಗೆ ಅನೇಕ ದೃಶ್ಯಗಳು ಕಣ್ಣಿಗೆ ಬಿದ್ದಿವೆ.
Karnataka Assembly Elections 2023: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಹುನಿರೀಕ್ಷಿತ ಮತದಾನ ಪ್ರಕ್ರಿಯೆಗೆ ಆರಂಭವಾಗಿದೆ. ರಾಜ್ಯದ ವಿವಿಧ ಮತಗಟ್ಟೆಯಲ್ಲಿ ಮತದಾನ ಆರಂಭವಾಗಿದ್ದು, ಜನ ಮತದಾನಕ್ಕಾಗಿ ಆಗಮಿಸುತ್ತಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು ಮೇ 13ರಂದು ಶನಿವಾರ ಫಲಿತಾಂಶ ಪ್ರಕಟವಾಗಲಿದೆ.
Karnataka Assembly Election 2023: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ಜಿಲ್ಲೆಯಲ್ಲಿ 13 ಲಕ್ಷದ 75 ಸಾವಿರದ 169 ಮತದಾರರು ಮತಚಲಾಯಿಸಲಿದ್ದಾರೆ. ಜಿಲ್ಲೆಯಾದ್ಯಂತ 42 ತೃತೀಯ ಲಿಂಗಿಗಳು, 7 ಲಕ್ಷದ 10 ಸಾವಿರದ 403 ಪುರುಷ ಮತದಾರರು, 6 ಲಕ್ಷದ 64 ಸಾವಿರದ 724 ಮಹಿಳಾ ಮತದಾರರು ಮತ ಚಲಾಯಿಸಲಿದ್ದಾರೆ.
Karnataka Assembly Election 2023: ಕರ್ನಾಟಕ ಚುನಾವಣೆಗೆ ಮತದಾನ ಆರಂಭವಾಗಿದ್ದು, ಸುಮಾರು 5 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈಗಾಗಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತಗಟ್ಟೆ ಕೇಂದ್ರದತ್ತ ಮತದಾರ ಮುಖ ಮಾಡಿದ್ದಾನೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಬಳ್ಳಾರಿ ನಗರ, ಬಳ್ಳಾರಿ ಗ್ರಾಮೀಣ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಬಳ್ಳಾರಿ ನಗರದ ವಿವಿಧೆಡೆ ಮಂಗಳವಾರದಂದು ಅಚ್ಚುಕಟ್ಟಾಗಿ ನೆರವೇರಿದ್ದು, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು.
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಹದಿನೆಂಟು ಮತಕ್ಷೇತ್ರಗಳ ಮತಗಟ್ಟೆಗಳಿಗೆ ನಿಯೋಜನೆಗೊಂಡಿರುವ ಇಪ್ಪತ್ತು ಸಾವಿರಕ್ಕೂ ಅಧಿಕ ಚುನಾವಣಾ ಸಿಬ್ಬಂದಿಯು ವಿದ್ಯುನ್ಮಾನ ಮತಯಂತ್ರಗಳು ಹಾಗೂ ಇತರೆ ಸಾಮಗ್ರಿಗಳ ಜತೆಗೆ ಮತಗಟ್ಟೆಗಳಿಗೆ ತೆರಳಿದರು.
ಕರ್ನಾಟಕ ವಿಧಾನಸಭೆಗೆ ಮೇ 10 (ಬುಧವಾರ) ನಡೆಯುವ ಚುನಾವಣೆಗೆ ಜಿಲ್ಲೆಯಾದ್ಯಂತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತದಾನ ಕಾರ್ಯಕ್ಕೆ ಪಿ.ಆರ್.ಓ-3,098, ಎ.ಪಿ.ಆರ್.ಓ-3,098 ಹಾಗೂ ಪೋಲಿಂಗ್ ಆಫೀಸರ್-6,196 ಸೇರಿದಂತೆ ಒಟ್ಟು 12,392 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.
ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮೇ 10ರಂದು ನಡೆಯುವ ಮತದಾನಕ್ಕೆ ಮಹಿಳೆಯರು, ವಿಶೇಷಚೇತನರು ಹಾಗೂ ಯುವ ಸಮೂಹವನ್ನು ಮತಗಟ್ಟೆಯತ್ತ ಆಕರ್ಷಿಸಲು ವಿವಿಧ ಬಣ್ಣ, ಚಿತ್ರಕಲೆಗಳಿಂದ ಸಿಂಗಾರಗೊಳಿಸಿರುವ ಜಿಲ್ಲೆಯಾದ್ಯಂತ 72 ವೈವಿಧ್ಯಮಯ ಮತಗಟ್ಟೆಗಳು ಸ್ಥಾಪಿಸಲಾಗಿದ್ದು, ಮತದಾರರನ್ನು ಮತದಾನಕ್ಕೆ ಕೈಬೀಸಿ ಕರೆಯುತ್ತಿವೆ.
ಧಾರವಾಡ ಗ್ರಾಮೀಣ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಮತ್ತು ಕಾನೂನು, ಸುವ್ಯವಸ್ಥೆ ಕಾಪಾಡಲು ವಿವಿಧ ಹಂತದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಸೇರಿ ಒಟ್ಟು 2,785 ಭದ್ರತಾ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ತಿಳಿಸಿದ್ದಾರೆ.
ದಿನಾಂಕ: 10.05.2023 ರಂದು ಮತದಾನ ಹಾಗೂ ದಿನಾಂಕ: 13.05.2023 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತವು 2023ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ.
Karnataka Assembly Election 2023: ಬಿಜೆಪಿ ತಮ್ಮ ಸಾಧನೆಯನ್ನೂ ಹೇಳುತ್ತಿಲ್ಲ, ಸಿಎಂ ಮುಖವನ್ನೂ ತೋರಿಸುತ್ತಿಲ್ಲ. ಕರ್ನಾಟಕದಲ್ಲಿ ಸುಭದ್ರ ಸರ್ಕಾರ, ಸಮರ್ಥ ನಾಯಕತ್ವದ ಅಗತ್ಯವಿದೆ. ರಾಜ್ಯದ ಪ್ರಗತಿಗೆ ಬೆಂಬಲಿಸಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
Muslims OBC Reservation: ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಆ ಪಾಲನ್ನು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೊಟ್ಟಿರುವುದು ಪರಸ್ಪರ ವೈರತ್ವ-ದ್ವೇಷ ಬೆಳೆಸುವ ದುರುದ್ದೇಶದಿಂದ ಹೊರತು ಇದಕ್ಕೆ ಯಾವ ಸದುದ್ದೇಶವೂ ಇಲ್ಲವೆಂದು ಸಿದ್ದರಾಮಯ್ಯ ಕುಟುಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.