ಬೆಂಗಳೂರು: ಬಿಬಿಎಂಪಿಯ ಕಂದಾಯ ಅಧಿಕಾರಿ ಹೆಬ್ಬಾಳ ವಿಭಾಗ, ಸಂಜಯ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಕಡ್ಡಾಯ ಮತದಾನಕ್ಕಾಗಿ ಜಾಗೃತಿ ಮೂಡಿಸಲು ಮೇಣದ ಬತ್ತಿ ಬೆಳಗಿಸುವ ಮೂಲಕ ಜಾಥಾ ಕಾರ್ಯಕ್ರಮಕ್ಕೆ ವಲಯ ಆಯುಕ್ತರಾದ ರವೀಂದ್ರ ಪಿ.ಎನ್, ಅಪರ ಜಿಲ್ಲಾ ಚುನಾವಣಾಧಿಕಾರಿ(ಉತ್ತರ) ಮತ್ತು ಜಂಟಿ ಆಯುಕ್ತರು(ಮಹದೇವಪುರ) ಲಿಂಗಮೂರ್ತಿ, ಪೂರ್ವ ಜಂಟಿ ಆಯುಕ್ತರಾದ ಪಲ್ಲವಿ ಕೆ.ಆರ್, ಚುನಾವಣೆ ಅಧಿಕಾರಿಗಳಾದ ಪ್ರಸನ್ನ ಕುಮಾರ್ ರವರು ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆಗಿರುವ ಎ.ಎ. ಅಳವಂಡಿ ಅವರು ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯಲೋಪ ಮಾಡುವುದಲ್ಲದೇ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದರಿಂದ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ರಾಜ್ಯ ಹಾಗೂ ದೇಶವನ್ನು ಒಡೆಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯವನ್ನು ಯಾವ ಸ್ಥಿತಿಗೆ ತಂದಿದ್ದಾರೆ ಎಂದು ಎಲ್ಲರೂ ನೋಡಿದ್ದಾರೆ. ಇಂತಹ ಸರ್ಕಾರವನ್ನು ತೊಲಗಿಸುವ ಶಪತವನ್ನು ನೀವೆಲ್ಲರೂ ಕೈಗೊಳ್ಳಬೇಕು ಎಂದು ಸೋನಿಯಾ ಗಾಂಧಿ ಮನವಿ ಮಾಡಿದರು.
Karnataka Assembly Election 2023: ಬಿಜೆಪಿಯವರಿಗೆ ಸೈದ್ಧಾಂತಿಕವಾಗಿ ನಮ್ಮನ್ನು ಎದುರಿಸಲು ಬರಲ್ಲ. ಅದಕ್ಕೆ ಈ ರೀತಿಯ ದಾರಿಯನ್ನು ತುಳಿಯುತ್ತಾರೆ. ಮರ್ಲಿಕಾರ್ಜುನ್ ಖರ್ಗೆ ಕುಟುಂಬಕ್ಕೆ ಹತ್ಯೆಯ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Karnataka Assembly Election 2023: ಗ್ರಾಮೀಣ ಬ್ಯಾಂಕಿಂಗ್, IPBS, ಕೇಂದ್ರ ಸ್ವಾಮ್ಯದ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ನಿರಾಕರಿಸಿ ಹುಟ್ಟಿದ ನೆಲದಲ್ಲಿಯೇ ಕನ್ನಡಿಗ ಯುವಜನರಿಗೆ ಉದ್ಯೋಗ ವಂಚನೆ ಮಾಡಲಾಗಿದೆ. ಇವರು ಪ್ರತಿಭಟನೆ ನಡೆಸುವಾಗ ನ್ಯಾಯ ಕೊಡಿಸಲು ನೀವು ಯಾಕೆ ಬಂದಿರಲಿಲ್ಲ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕುಂದಾನಗರಿಯಲ್ಲಿ ರಾಹುಲ್ ಗಾಂಧಿ ಅಬ್ಬರದ ಪ್ರಚಾರ ನಡೆಸಿದ್ದಾರೆ.. ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಬೇಟೆ ನಡೆಸಿದ ರಾಹುಲ್ ಗಾಂಧಿ ಮತದಾರರಿಗೆ 5 ಭರವಸೆ ನೀಡಿದ್ದಾರೆ. ನಾವು ಕ್ರಾಂತಿಕಾರಿ ಕೆಲಸಕ್ಕೆ ಕೈಹಾಕಿದ್ದೇವೆ ಎಂದಿದ್ದಾರೆ..
ಬೆಂಗಳೂರು ಮತ್ತು ಮೈಸೂರಿನ ಹಲವು ಸ್ಥಳಗಳಲ್ಲಿ ಐಟಿ ದಾಳಿ ನಡೆದಿದೆ.. ಫೈನಾನ್ಸಿಯರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರು ಹಾಗೂ ಮೈಸೂರು ಭಾಗದಲ್ಲಿ ಸುಮಾರು 20 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ.. 5 ಕೋಟಿ ಬೆಲೆಬಾಳುವ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಮಲ್ಲಿಕಾರ್ಜುನ್ ಖರ್ಗೆ, ಕುಟುಂಬಸ್ಥರ ಹತ್ಯೆ ಆಡಿಯೋ ವಿಚಾರ ಪ್ರತಿಕ್ರಿಯೆ ನೀಡಿದ ಸಿಎಂ ಆ ಆಡಿಯೋ ತಿರುಚಲಾಗಿದೆಯೋ ಏನೋ ನೋಡಬೇಕಿದೆ. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಹಿನ್ನೆಲೆ ಸಚಿವೆ ಶಶಿಕಲಾ ಜೋಲ್ಲೆ ನೇತೃತ್ವದಲ್ಲಿ ಹುನುಮಾನ್ ಚಾಲೀಸ ಪಠಣ ಮಾಡಲಾಗಿದೆ. ನಿಪ್ಪಾಣಿ ಪಟ್ಟಣದ ಸಾಕರವಾಡಿ ಹನುಮಾನ ಮಂದಿರದಲ್ಲಿ 300ಕ್ಕೂ ಹೆಚ್ಚು ಬಜರಂಗದಳ ಕಾರ್ಯಕರ್ತರು ಹನುಮಾನ್ ಚಾಲೀಸ ಪಠಣ ಮಾಡಿದ್ದಾರೆ..
ಖರ್ಗೆ ಅವರ ಬೆಳವಣಿಗೆ ಸಹಿಸದೇ ಮಲ್ಲಿಕಾರ್ಜುನ್ ಖರ್ಗೆ, ಪತ್ನಿ ಹತ್ಯೆಗೆ ಸಂಚು ನಡೆಸಿದ್ದಾರೆ ಎಂದು ಕೈ ನಾಯಕ ಸುರ್ಜೇವಾಲಾ ಗಂಭೀರ ಆರೋಪ ಮಾಡಿದ್ದಾರೆ.. ಈ ಬಗ್ಗೆ ಸುರ್ಜೇವಾಲಾ ಆಡಿಯೋ ಬಿಡುಗಡೆ ಮಾಡಿದ್ದಾರೆ.
ಬಿಜೆಪಿಯ ರಾಜ್ಯ ನಾಯಕರು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ, ಇದರಿಂದ ಮೋದಿ ಅವರನ್ನು ಹೆಚ್ಚು ಬಾರಿ ಕರೆದುಕೊಂಡು ಬಂದರೆ ನಮಗೆ ಲಾಭವಾಗಬಹುದು ಎಂಬ ಭ್ರಮೆಯಲ್ಲಿದ್ದಾರೆ. ಇದು ರಾಜ್ಯಕ್ಕೆ ನಡೆಯುತ್ತಿರುವ ಚುನಾವಣೆ, ದೇಶಕ್ಕೆ ನಡೆಯುತ್ತಿರುವ ಚುನಾವಣೆಯಲ್ಲ. ಈಗ ಜನ ಚರ್ಚೆ ಮಾಡುತ್ತಿರುವುದು ರಾಜ್ಯದ ಮತ್ತು ಸ್ಥಳೀಯ ಸಮಸ್ಯೆಗಳನ್ನು ಮಾತ್ರ. ಜನರಿಗೆ ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಪಕ್ಷ ಅಧಿಕಾರಕ್ಕೆ ಬರಬೇಕಾಗಿದೆ, ಇದರಿಂದ ಮೋದಿ ಅವರು ಎಷ್ಟು ಬಾರಿ ಬಂದರೂ ಮತದಾರರ ಮೇಲೆ ಪರಿಣಾಮ ಬೀರಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
Karnataka Assembly Election 2023: ರೋಡ್ ಶೋದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿದ್ದರೆ ಅವರು ಮುಂಚಿತವಾಗಿ ಹೋಗಿ ಉಳಿದುಕೊಳ್ಳಲ್ಲಿ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಅತ್ಯಂತ ಹೊಣೆಗೇಡಿತನ ಮತ್ತು ದುರಹಂಕಾರದ್ದು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಿಜೆಪಿ ಪ್ರಜಾತಂತ್ರದ ಹತ್ಯೆ ಮಾತ್ರವಲ್ಲ ವಿರೋಧ ಪಕ್ಷಗಳ ನಾಯಕರ ಹತ್ಯೆಯ ಸಂಚು ಈಗ ಬಯಲಾಗುತ್ತಿದೆ. ಇದೆಲ್ಲದರ ಜವಾಬ್ದಾರಿ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳಾಗಿದ್ದು, ಇವರು ಈ ವಿಚಾರವಾಗಿ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಆಗ್ರಹಿಸಿದ್ದಾರೆ.
Karnataka Election 2023: ಆಡಿಯೋ ಒಂದರಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಖರ್ಗೆ ಹಾಗು ಅವರ ಹೆಂಡತಿ ಮಕ್ಕಳನ್ನು ಸಾಫ್ ಮಾಡುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಈ ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ ಇಂತಹ ಹತ್ತು ಮಣಿಕಂಠನನ್ನು ನೋಡಿದ್ದೇನೆ ಎಂದು ಹೇಳುವ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಇಂದು ದಯಾನಂದ ನಗರ ವಾರ್ಡ್ನಲ್ಲಿ ನಡೆದ ಕರುಮಾರಿಯಮ್ಮನ ಜಾತ್ರೆ ಮಹೋತ್ಸವದಲ್ಲಿ ಪುಟ್ಟಣ್ಣ ಭಾಗಿಯಾಗಿದ್ದರು. ದೇವಿಯ ದರ್ಶನ ಪಡೆದು ಮತ ಮತಯಾಚಿಸಿದರು. ಈ ವೇಳೆ ನೂರಾರು ಕಾರ್ಯಕರ್ತರು, ಸ್ಥಳೀಯರು ಪುಟ್ಟಣ್ಣನಿಗೆ ಸಾಥ್ ನೀಡಿದರು.
ಬಳ್ಳಾರಿಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಮಳೆ ಆತಂಕ. ಇಂದು ಮಧ್ಯಾಹ್ನ 2 ಗಂಟೆಗೆ ಬಳ್ಳಾರಿಯಲ್ಲಿ ಮೋದಿ ಕಾರ್ಯಕ್ರಮ. ರಾತ್ರಿ ಸುರಿದ ಮಳೆಯಿಂದಾಗಿ ವೇದಿಕೆ ಸಂಪೂರ್ಣ ಕೆಸರುಮಯ. ಇನ್ನೂ ಮೋಡ ಕವಿದ ವಾತಾವರಣ ಹಿನ್ನೆಲೆ ಮತ್ತೆ ಮಳೆ ಆತಂಕ. ರಾತ್ರಿ ಸುರಿದ ಮಳೆಗೆ ವೇದಿಕೆ ಸರಿಪಡಿಸುತ್ತಿರುವ ಸಿಬ್ಬಂದಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.