ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 10ರಂದು ಮತದಾನವು ನಡೆಯಲಿದ್ದು, ಮತದಾನ ಮಾಡಲು ಚುನಾವಣಾ ಗುರುತಿನ ಚೀಟಿ ಜೊತೆಗೆ ಪರ್ಯಾಯ ದಾಖಲೆಗಳನ್ನು ಬಳಸಬಹುದಾಗಿದೆ.ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.
ನಿಮ್ಮ ಸರ್ಕಾರವನ್ನು ಕಳ್ಳತನ ಮಾಡಿ ಮೂರು ವರ್ಷಗಳಾಗಿವೆ. ನೀವು ಆರಿಸಿದ್ದು, ಬೇರೆ ಸರ್ಕಾರ, ಆದರೆ ಆಡಳಿತ ಮಾಡಿದ್ದು, ಬೇರೆ ಸರ್ಕಾರ. ಶಾಸಕರನ್ನು ಹಣದಿಂದ ಖರೀದಿ ಮಾಡಿ ಸರ್ಕಾರವನ್ನು ಕದಿಯಲಾಗಿದೆ. ಕಳ್ಳತನದಿಂದ ರಚನೆಯಾದ ಸರ್ಕಾರ ಅದು ಕಳ್ಳತನ ಹೊರ್ತಾಗಿ ಬೇರೇನು ಮಾಡುವುದಿಲ್ಲ. ಅವರಿಗೆ ಬೇರೆ ಏನೂ ಗೊತ್ತಿರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
Karnataka election Opinion Poll On Zee : ಸಮೀಕ್ಷೆಯಲ್ಲಿ ಜನರಿಗೆ ಯಾವ ಪಕ್ಷ ಅಧಿಕಾರದಲ್ಲಿದ್ದಾಗ ಅತಿ ಹೆಚ್ಚಿನ ಪ್ರಗತಿಯಾಗಿದೆ ಎನ್ನುವ ಪ್ರಶ್ನೆಯನ್ನು ಜನರ ಮುಂದಿಟ್ಟಾಗ ಶೇ 31 ರಷ್ಟು ಜನರು ಕಾಂಗ್ರೆಸ್ ಎಂದು ಹೇಳಿದರೆ, ಶೇ 36ರಷ್ಟು ಜನರು ಬಿಜೆಪಿ ಎನ್ನುವ ಅಭಿಪ್ರಾಯಕ್ಕೆ ಬಂದಿದ್ದಾರೆ. ಇನ್ನೂ ಜೆಡಿಎಸ್ ಶೇ 11 ರಷ್ಟು ಎಂದು ಹೇಳಿದ್ದಾರೆ. ಶೇ 22 ರಷ್ಟು ಜನರ ಅಂತಹ ಯಾವುದೇ ವ್ಯತ್ಯಾಸವಿಲ್ಲ ಮೂರು ಪಕ್ಷಗಳು ಒಂದೇ ಎಂದು ಹೇಳಿದ್ದಾರೆ.
ಮೇ 10 ರ ಚುನಾವಣೆಗೆ ಕೇವಲ ಮೂರು ದಿನ ಬಾಕಿ ಇದೆ. ಇನ್ನೂ ಅಂತಿಮ ಫಲಿತಾಂಶ ಮೇ 13 ಕ್ಕೆ ಪ್ರಕಟಗೊಳ್ಳಲಿದೆ. ಅದಕ್ಕೂ ಮೊದಲು ಜೀ ಕನ್ನಡ ನ್ಯೂಸ್ ಮತ್ತು MATRIZE ಸಂಸ್ಥೆಯ ಸಹಯೋಗದೊಂದಿಗೆ ಜನರ ನಾಡಿ ಮಿಡಿತವನ್ನು ಹಿಡಿಯುವ ಪ್ರಯತ್ನ ಮಾಡಿದೆ.ಇದಕ್ಕಾಗಿ ರಾಜ್ಯ ವಿಧಾನಸಭೆಯ ಎಲ್ಲಾ 224 ಕ್ಷೇತ್ರಗಳ ಬಗ್ಗೆ 3 ಲಕ್ಷದ 36 ಸಾವಿರ ಜನರ ಮೂಲಕ ಅಭಿಪ್ರಾಯವನ್ನು ಸಂಗ್ರಹಿಸಿದೆ.
Karnataka Assembly Elections 2023: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ದೇಶ ಮತ್ತು ಸಮಾಜದಲ್ಲಿ ದ್ವೇಷ ಬಿತ್ತುವಗುಂಪುಗಳನ್ನು ನಿಷೇಧಿಸಬೇಕೆಂದು ಕರೆ ನೀಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಜರಂಗದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದ ಬೆನ್ನಲ್ಲೇ ಅಖಿಲೇಶ್ ಯಾದವ್ ಅವರ ಈ ಹೇಳಿಕೆ ಮುನ್ನೆಲೆಗೆ ಬಂದಿದೆ.
ಬಿಜೆಪಿಗೆ ಮಲ್ಲಿಕಾರ್ಜುನ್ ಖರ್ಗೆಯವರನ್ನು ಕೊಲ್ಲುವಷ್ಟು ದ್ವೇಷ ಏಕೆ? ಕಲ್ಯಾಣ ಕರ್ನಾಟಕದ ಕಲ್ಯಾಣಕ್ಕೆ ಮುನ್ನುಡಿ ಬರೆದಿದ್ದಕ್ಕಾ? ಆರ್ಟಿಕಲ್ 371ಜೆ ಜಾರಿಗೋಸ್ಕರ ಹೋರಾಡಿ ಯಶಸ್ವಿಯಾಗಿದ್ದಕ್ಕಾ? ಲಕ್ಷಾಂತರ ಯುವಕರಿಗೆ ಉದ್ಯೋಗ ದೊರಕಿಸಿಕೊಟ್ಟಿದ್ದಕ್ಕಾ? ಕಾರ್ಮಿಕರ ಹಕ್ಕಿಗಾಗಿ ಹೋರಾಡಿದ್ದಕ್ಕಾ? ದುರಾಡಳಿತವನ್ನು ಪ್ರಶ್ನಿಸಿದ್ದಕ್ಕಾ? ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನಿಸಿದೆ.
MOdi Road Show: ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಈ ನಿಟ್ಟಿನಲ್ಲಿ ಹಾವೇರಿಯಲ್ಲಿ ವಿಶೇಷ ಉಡುಗೊರೆ ನೀಡಲು ಬಿಜೆಪಿ ನಾಯಕರು ಸಿದ್ದರಾಗಿದ್ದಾರೆ.
ಹಾಸನ ಕುರುಕ್ಷೇತ್ರ
ಹಾಸನ ಜಿಲ್ಲೆಯ ಒಟ್ಟು ಮತದಾರರು: 14,83,594
7,42,279 ಪುರುಷ, 7,41,275 ಮಹಿಳೆಯರು
ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಈ ಭಾರಿಯೂ ಜೆಡಿಎಸ್ ಗೆ ಹೆಚ್ಚಿನ ಸ್ಥಾನಗಳು ಬರುವ ನಿರೀಕ್ಷೆಯಿದ್ದು, ಎರಡನೇ ಸ್ಥಾನಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿ ನಡೆಯುತ್ತಿವೆ. ಅರಸೀಕೆರೆ ಹಾಗೂ ಅರಕಲಗೂಡು ಕ್ಷೇತ್ರದಲ್ಲಿ ಪ್ರಬಲ ನಾಯಕರು ಪಕ್ಷಾಂತರ ಮಾಡಿದ್ದು, ಈ ಕ್ಷೇತ್ರಗಳಲ್ಲಿಯೂ ಕದನ ಕುತೂಹಲ ಹೆಚ್ಚಿಸಿದೆ.
ಹಾಸನ ಜಿಲ್ಲಾ ಕುರುಕ್ಷೇತ್ರ
Karnataka Assembly Election 2023: ಮೂರುವರೆ ವರ್ಷಗಳಲ್ಲಿ ಡಬಲ್ ಎಂಜಿನ್ ಸರ್ಕಾರದ ಸಾಧನೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಕೋಮುದ್ವೇಷವನ್ನಷ್ಟೇ ಡಬಲ್ ಮಾಡಿದೆ. ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು ಕಾವೇರಿ ಮತ್ತು ಕೃಷ್ಣಾ ನದಿಗಳ ನೀರು ಸಾಲದು ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
Karnataka Assembly Election 2023: ಮೇ7ರಂದು ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಹೀಗಾಗಿ ಇಂದು ಸಾಯಂಕಾಲ 5.30ರಿಂದ ರಾತ್ರಿ 7 ಗಂಟೆವರೆಗೆ ಕೆಲ ರಸ್ತೆಗಳು ಬಂದ್ ಮಾಡಲಾಗಿದೆ.
Karnataka Assembly Election 2023: ‘ರಾಷ್ಟ್ರಕವಿ ಕುವೆಂಪು ಅವರು "ಓ ಲಂಕಾ ಭಯಂಕರ ಸಮೀರಕುಮಾರ ಹೇ ಆಂಜನೇಯ" ಎಂದು ತಮ್ಮ ಕವನವೊಂದರಲ್ಲಿ ಆಂಜನೇಯನನ್ನು ಕುರಿತ ಹಾಡಿ ಹೊಗಳಿದ್ದಾರೆ. ಆದರೆ ಕಾಂಗ್ರೆಸ್ಸಿಗೆ "ಜೈ ಬಜರಂಗಬಲಿ" ಎಂದು ಹೇಳಿದರೆ ಸಂಕಟವಾಗುತ್ತದೆ.
ಬಿಜೆಪಿ ಅವರ ಭ್ರಷ್ಟಾಚಾರದ ಲೂಟಿ ಸುಮಾರು 150,000 ಲಕ್ಷ ಕೋಟಿ ಆಗಿದೆ. ಪ್ರತಿಯೊಂದರಲ್ಲೂ 40%, 50%, 60% ಕಮಿಷನ್ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿದೆ. ಹಾಗಾಗಿ ಇದರಲ್ಲಿ ಶೇ. 50% ರಷ್ಟು ಇಳಿಸಿದರೂ ನಮ್ಮ ಕಾಂಗ್ರೆಸ್ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯವಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಹೇಳಿದ್ದಾರೆ.
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚಂದ. ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ ಎಂದು ರಾಣೇಬೆನ್ನೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ರು.
ಮೇ 6ಕ್ಕೆ ಮತ್ತೆ ರಾಜ್ಯಕ್ಕೆ ಯೋಗಿ ಎಂಟ್ರಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಕ್ಕೆ ಆಗಮನ. ಬಂಟ್ವಾಳದಲ್ಲಿ ಆದಿತ್ಯನಾಥ್ ಬೃಹತ್ ರೋಡ್ ಶೋ. ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಭಾರೀ ರಣತಂತ್ರ.
Karnataka Assembly Election: ಮಾದರಿ ನೀತಿ ಸಂಹಿತೆಯನ್ನು ಜಾರಿ ಮಾಡಿ, ಚುನಾವಣಾ ಗಲಭೆಗಳನ್ನು ಗುರುತಿಸಿ, ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕೂಡ ಚುನಾವಣಾ ಅಕ್ರಮವೇಸಗುವವರು,ನೀತಿ ಸಂಹಿತೆ ಉಲ್ಲಂಘನೆ ಮಾಡುವವರ ಮೇಲೆ ಸಮರ ಸಾರಿದೆ.
ಕೋಲಾರ ಕುರುಕ್ಷೇತ್ರ
ಚಿನ್ನದ ನಾಡು ಕೋಲಾರಿನಲ್ಲಿ ಆರು ಕ್ಷೇತ್ರಗಳಿದ್ದು, ಅದರಲ್ಲಿ ಶ್ರೀನಿವಾಸಪುರ,ಮುಳಬಾಗಿಲು ಮತ್ತು ಕೋಲಾರ ಹೈವೋಲ್ಟ್ ಕ್ಷೇತ್ರಗಳಾಗಿದ್ದರೆ, ಕೆಜಿಎಫ್ ಮಾಲೂರು ಮತ್ತು ಬಂಗಾರ ಪೇಟೆ ಕ್ಷೇತ್ರಗಳೂ ಕೂಡ ಸಾಕಷ್ಟು ಕುತೂಹಲ ಕೆರಳಿಸಿವೆ. ಅದರಲ್ಲಿ ಬಂಗಾರಪೇಟೆಯ SC ಮೀಸಲು ಕ್ಷೇತ್ರದಲ್ಲಿ ಸ್ಪೃಶ್ಯರದ್ದೇ ಮೇಲುಗೈ ಇದ್ದರೆ, ಮುಸ್ಲಿಂ ಬಾಹುಳ್ಯದ ಕೋಲಾರ ಕ್ಷೇತ್ರದಲ್ಲಿ ಯಾವುದೇ ಮುಸ್ಲಿಂ ಪ್ರಾತಿನಿಧ್ಯ ಇಲ್ಲ,ಇನ್ನೂ ಮಾಲೂರು ಕ್ಷೇತ್ರದಲ್ಲಿ ನಾಲ್ವರಲ್ಲಿ ಯಾರು ಗೆಲ್ಲಬಹುದು ಎಂದು ಹೇಳುವುದು ಈಗಲೇ ಕಷ್ಟ ಸಾಧ್ಯ ಇನ್ನೂ ಶ್ರೀನಿವಾಸಪುರದಲ್ಲಿ ರೆಡ್ಡಿ v/s ಸ್ವಾಮಿ ಕದನವಂತೂ ಚುನಾವಣೆಯನ್ನು ಕಾವೇರುವಂತೆ ಮಾಡಿದೆ.
ಕೋಲಾರ ಜಿಲ್ಲಾ ಕುರುಕ್ಷೇತ್ರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.