Laxman Savadi joined Congress: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ರಾಜಕೀಯ ಚಟುವಟಿಕೆಗಳು ಕೂಡ ಗರಿಗದರಿವೆ. ಚುನಾವಣಾ ರಣರಂಗದ ಕಾವು ಹೆಚ್ಚಾಗಿದೆ. ಶತಾಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕು ಎಂದು ಪಣತೊಟ್ಟ ಕಾಂಗ್ರೆಸ್ಗೆ ಈಗ ಮತ್ತೊಬ್ಬ ಪ್ರಭಾವಿ ನಾಯಕ ಬಿಜೆಪಿ ತೊರೆದು ʻಕೈʼ ಹಿಡಿದಿದ್ದಾರೆ.
Karnataka Election 2023 : ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಬೇಸರ ತರಿಸಿದೆ ಎಂದಿದ್ದಾರೆ.
ಲಕ್ಷ್ಮಣ್ ಸವದಿ ಪಕ್ಷಾಂತರ ಕುರಿತು ಎಂ. ಪಿ. ರೇಣುಕಾಚಾರ್ಯ ಗುಡುಗಿದ್ದಾರೆ. ಪಕ್ಷ ತೊರೆದಿರುವ ಲಕ್ಷ್ಮಣ್ ಸವದಿ ಒಬ್ಬ ವಿಶ್ವಾಸಘಾತುಕ, ಬೆನ್ನಿಗೆ ಚೂರಿ ಹಾಕುವವನು, ಅಥಣಿಯಲ್ಲಿ ಲಕ್ಷ್ಮಣ ಸವದಿ ಗೆಲ್ಲಲಿಲ್ಲ, ಸೋತು ಸುಣ್ಣವಾದರು ಸಹ ಪಕ್ಷ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿತ್ತು ಎಂದು ಹೇಳಿದರು.
ಟಿಕೆಟ್ ಆಕಾಂಕ್ಷಿಗಳಲ್ಲೇ ರುದ್ರೇಶ್ ಹೆಚ್ಚು ಪ್ರಬಲವಾಗಿ ಗುರುತಿಸಿಕೊಂಡಿದ್ದರು, ಬಳಿಕ ಬಂಡಾಯ ಬಾವುಟ ಹಾರಿಸಿದ್ದರು. ಸೋಮಣ್ಣ ವಿರುದ್ದ ಸಾಲುಸಾಲು ಆರೋಪ ಮಾಡಿದ್ದರಿಂದ ಗರಂಗೊಂಡ ಅರುಣ್ ಸೋಮಣ್ಣ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರಿದ್ದರು. ರುದ್ರೇಶ್ಗೆ ಬಿಎಸ್ವೈ ಫೋನಾಯಿಸಿ ಪಕ್ಷ ಸಂಘಟನೆಗೆ ಒಡಕು ಮೂಡಿಸಬಾರದು, ಅಭ್ಯರ್ಥಿ ವಿರುದ್ಧ ಮಾತನಾಡಬಾರದು ಎಂದು ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ.
ರಾಜ್ಯ ಬಿಜೆಪಿ ಇಂದು ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಮಾಜಿ ಸಿಎಂ ಮತ್ತು ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ತಮ್ಮ ಹಾಲಿ ಕ್ಷೇತ್ರವಾದ ಹುಬ್ಬಳ್ಳಿ-ಧಾರವಾಡ (ಕೇಂದ್ರ) ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
Karnataka Election 2023: ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದೆ. ಇದರಿಂದ ಬೇಸರಗೊಂಡಿದ್ದ ಸವದಿ ಅವರನ್ನು ಕಾಂಗ್ರೆಸ್ ನಾಯಕ ರಾಜು ಕಾಗೆ ಭೇಟಿ ಮಾಡಿದ್ದರು. ಈ ಬೆಳವಣಿಗೆ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ.
Karnataka Election 2023 : ಮಂಡ್ಯದಲ್ಲಿ ಮೂಲ ಹೊಸಬರಿಗೆ ಅವಕಾಶ ನೀಡಲಾಗಿದ್ದು, ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿಸಲಾಗಿದೆ. ಇದರಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದವರಿಗೆ ಆಘಾತ ಉಂಟಾಗಿದೆ.
BJP ticket aspirant Jagdish Shettar : ಭಾರೀ ಕುತೂಹಲದ ಬಳಿಕ ಕೊನೆಗೂ ನಿನ್ನೆ ರಾತ್ರಿ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿತು. ಆದರೆ ಈ ಬಾರಿ ಕೆಲವು ಘಟಾನುಘಟಿ ನಾಯರಿಗೆ ಟಿಕೆಟ್ ಕಜೈ ತಪ್ಪಿದೆ. ಅಲ್ಲದೇ ಮಾಜಿ ಸಿಎಂ ಹಾಗೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಅವರ ಬೇಸರಕ್ಕೆ ಕಾರಣವಾಗಿದೆ.
Karnataka Assembly election 2023: ಚಿಕ್ಕೋಡಿಯಲ್ಲಿ ದಾಖಲೆ ಇಲ್ಲದೆ ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 2.31 ಲಕ್ಷ ಮೌಲ್ಯದ 10 ಟನ್ ಪಡಿತರ ಅಕ್ಕಿಯನ್ನು ಎಫ್ಎಸ್ಟಿ ಹಾಗೂ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆಸಿಕೊಂಡಿದ್ದಾರೆ.
Karnataka Assembly Election 2023: ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡೆಲ್ಲಿ ಯಲ್ಲಿ ಟಿಕೆಟ್ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಇನ್ನು ಸ್ವಕ್ಷೇತ್ರ ಶಿಗ್ಗಾವಿ ಟಿಕೆಟ್ ಪಡೆಯಲು ಹರಸಾಹಾಸ ಪಡುತ್ತಿದ್ದಾರೆ ಎನ್ನಲಾಗುತ್ತಿದೆ.
BJP Candidates List 2023 Karnataka : ನಾಮಿನೇಷನ್ಗೆ ಕ್ಷಣಗಣನೆ ಆರಂಭವಾಗಿದೆ. ಎಲೆಕ್ಷನ್ಗೆ ಕೌಂಟ್ಡೌನ್ ಶುರುವಾಗಿದೆ. ಕಾಂಗ್ರೆಸ್ನಿಂದ ಎರಡು ಲಿಸ್ಟ್ ಹೊರಬಿದ್ದಿವೆ, ದೆಹಲಿಯಲ್ಲಿ ಕಮಲ ನಾಯಕರ ಸಭೆ ಮೇಲೆ ಸಭೆಗಳು ನಡೆಯುತ್ತಿವೆ ಆದರೂ ಬಿಜೆಪಿಯ ಮೊದಲ ಪಟ್ಟಿ ಮಾತ್ರ ಇನ್ನೂ ರಿಲೀಸ್ ಆಗಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.