'ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್ಡಿಐ) ಕಳೆದ ಎರಡು - ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ.
ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲಿ ಈ ಗ್ಯಾರಂಟಿಗಳಿಗೆ ತನ್ನ ಅನುಮೋದನೆ ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಗ್ಯಾರನ್ತಿಗಲ್ ಈಡೇರಿಕೆಗೆ ಸಾರ್ವಜನಿಕರು ಪಟ್ಟು ಹಿಡಿಯುವುದನ್ನು ಗಮನಿಸಬಹುದು.
Karnataka Elections 2023: ಯಾರಿಗೆ ಶಾಸಕರ ಬೆಂಬಲ ಇದೆಯೆಂಬುದು ಮುಖ್ಯವಲ್ಲ. ಸಿಎಂ ಆಯ್ಕೆಯನ್ನು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇವೆಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Karnataka election result 2023: ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Karnataka Assembly Election Result 2023: ರಾಜ್ಯದ ಮತದಾರರು ಬಿಜೆಪಿಯ ಹಿಂದುತ್ವದ ರಾಜಕೀಯವನ್ನು ತಿರಸ್ಕರಿಸಿ, ಕಾಂಗ್ರೆಸ್ ಪಕ್ಷದ ಬಂಧುತ್ವದ ರಾಜಕೀಯವನ್ನು ಪುರಸ್ಕರಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Karnataka Election Result 2023: ಸ್ಪಷ್ಟಬಹುಮತ ಪಡೆದ ಬಳಿಕ ಖುಷಿ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ರಾಜ್ಯದ ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಆಶೀರ್ವಾದ ಮಾಡಿದ್ದಾರೆ, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ಹೇಳಿದ್ದಾರೆ.
Jayanagar Assembly Election Result: ಸಂಜೆ 7 ಗಂಟೆ ಸುಮಾರಿಗೆ ಮತ ಎಣಿಕೆ ಕೇಂದ್ರದ ಹೊರಗೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿಜಯಿ ಎಂದು ಘೋಷಿಸಲಾಯಿತಾದರೂ ಅಂತಿಮ ನಿರ್ಧಾರ ನೀಡಿರಲಿಲ್ಲ. ಸೌಮ್ಯಾ ಕೇವಲ 180 ಮತಗಳಿಂದ ಗೆದ್ದಿದ್ದಾರೆ ಎಂದು ಸಿಕೆ ರಾಮಮೂರ್ತಿ ಹೇಳಿಕೊಂಡಿದ್ದಾರೆ. ಇದಾದ ಬಳಿಕ ಮತ ಎಣಿಕೆಯಲ್ಲಿ ಆಗಿರುವ ವ್ಯತ್ಯಯ ಕುರಿತು ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತರು, ಮತ್ತೆ ಮತ ಎಣಿಕೆ ನಡೆಯುತ್ತಿದೆ ಎಂದು ತಿಳಿಸಿದರು.
Karnataka Assembly Election Result 2023: ಕೆ.ಆರ್.ನಗರ ಸೇರಿದಂತೆ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಗೆದ್ದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಮಂಡ್ಯದ ಅಭಿವೃದ್ಧಿಗಾಗಿ ತಾವೆಲ್ಲರೂ ಧನಾತ್ಮಕವಾಗಿ ಕೆಲಸ ಮಾಡಲಿದ್ದೀರಿ ಎನ್ನುವ ನಂಬಿಕೆ ಮತ್ತು ಹಾರೈಕೆ ನನ್ನದು ಎಂದು ಸುಮಲತಾ ಹೇಳಿದ್ದಾರೆ.
Karnataka Assembly Election Result 2023: ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಬದ್ಧವಾಗಿದ್ದು, ಪಾರದರ್ಶಕ ಆಡಳಿತದ ಮೂಲಕ ಪ್ರತಿ ಕನ್ನಡಿಗರ ಸೇವೆಗೆ ಸಿದ್ಧವಾಗಿದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
Karnataka Assembly Election Result 2023: ರಾಜ್ಯದ ಜನರ ಹಿತದೃಷ್ಟಿ ಮತ್ತು ಅಭಿವೃದ್ಧಿ ದೃಷ್ಟಿಯಿಂದ ನಾವು ಆಡಳಿತ ನಡೆಸುತ್ತೇವೆ. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಮತ ನೀಡಿದ ರಾಜ್ಯದ ಎಲ್ಲಾ ಮತದಾರರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆಂದು ಸಿದ್ದರಾಮಯ್ಯ ಹೇಳಿದರು.
Gundlupet Vidhanasabha Chunavane Results 2023: ಮಹಾದೇವಪ್ರಸಾದ್ ಅವರು ಮಾಡಿದ್ದ ಅಭಿವೃದ್ಧಿ ನೆನಪಿಗೆ ಜನರು ಮತ ಹಾಕಿದ್ದು ಜನರ ಅಪೇಕ್ಷೆಯಂತೆ ಗೆದ್ದಿದ್ದೇನೆ- ಗಣೇಶ್ ಪ್ರಸಾದ್
Koppal Assembly Election Result 2023: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗಾಲಿ ಜನಾರ್ದನರೆಡ್ಡಿ ಭರ್ಜರಿ ಗೆಲುವು ಸಾಧಿಸಿದ್ದು, ಹಾಲಿ ಶಾಸಕ ಬಿಜೆಪಿಯ ಪರಣ್ಣ ಮುನವಳ್ಳಿಗೆ ಸೋಲಿನ ರುಚಿ ತೋರಿಸಿದ್ದಾರೆ.
Kalaburagi Assembly Election Result 2023: ಕಳೆದ ಚುನಾವಣೆಯಲ್ಲಿ ಕಲಬುರಗಿಯ 9 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯು 4 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 5ರಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ 7ರಲ್ಲಿ ಜಯ ಸಾಧಿಸಿದ್ದರೆ, ಬಿಜೆಪಿ ಕೇವಲ 2 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದೆ.
Yadgir Assembly Election Result 2023: ಯಾದಗಿರಿಯ 4 ವಿಧಾನಭಾ ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, 1 ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
Chitradurga District Assembly Election Result 2023: ಒಟ್ಟು ಆರು ವಿಧಾನಸಭಾ ಕ್ಷೇತ್ರಗಳಿರುವ ಚಿತ್ರದುರ್ಗದಲ್ಲಿ ಈ ಬಾರಿ ಭಾರೀ ಜಿದ್ದಾಜಿದ್ದಿ ನಿರ್ಮಾಣಗೊಂಡಿತ್ತು. ಜಿಲ್ಲೆಯಲ್ಲಿ ಹಿರಿಯೂರು, ಮೊಳಕಾಲ್ಮೂರು, ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಹೊಳಲ್ಕೆರೆ ವಿಧಾನಸಭೆ ಕ್ಷೇತ್ರಗಳಿದ್ದು, ಕೆಲವೊಂದು ಕ್ಷೇತ್ರಗಳಲ್ಲಿ ಬಂಡಾಯದ ಕೂಗು ಕೇಳಿಬರುತ್ತಿತ್ತು. ಇವೆಲ್ಲದರ ಮಧ್ಯೆ ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ 5 ಕ್ಷೇತ್ರಗಳನ್ನು ಗೆದ್ದಿದ್ದು, ಒಂದರಲ್ಲಿ ಗೆಲುವು ಕಂಡಿದೆ.
Haveri Assembly Election Result 2023: ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಭಾರೀ ಮುಖಭಂಗ ಉಂಟಾಗಿದೆ. 2018ರ ಚುನಾವಣೆಯಲ್ಲಿ ಒಟ್ಟು 6 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.
Chamarajanagar Assembly Election Result 2023: ಸೋಮಣ್ಣ ಬಂದ ಬಳಿಕ ಚಾಮರಾಜನಗರ ಹೈವೋಲ್ಟೆಜ್ ಕ್ಷೇತ್ರವಾಗಿ ಬದಲಾಗಿತ್ತು, ಸೋಮಣ್ಣ ಚಾಮರಾಜನಗರ ಮತದಾರರಾಗಿ ಬದಲಾಗಿದ್ದರು. ಆದರೆ, ಎಲ್ಲದಕ್ಕೂ ಮತದಾರ ಮತಯಂತ್ರದ ಮೂಲಕವೇ ಉತ್ತರ ಕೊಟ್ಟಿದ್ದಾನೆ.
Kollegala Assembly Election Result 2023: ಚಾಮರಾಜನಗರದ ಮತ ಎಣಿಕೆ ಕೇಂದ್ರದಲ್ಲಿ ಮಾತನಾಡಿದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಎ.ಆರ್.ಕೃಷ್ಣಮೂರ್ತಿ, 1 ಮತದ ಅಂತರದಿಂದ ಸೋತಿದ್ದೆ. ಆದರೀಗ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದೇನೆ, ನನಗೆ ಅಂತರ ಮುಖ್ಯವಲ್ಲ, ಗೆಲುವು ಮುಖ್ಯ ಎಂದು ಹೇಳಿದರು.
Shivamogga Karnataka Election Result 2023: ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಬಿಜೆಪಿ, ಮೂರು ಕಾಂಗ್ರೆಸ್ ಹಾಗು ಒಂದು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಸೊರಬ, ಶಿಕಾರಿಪುರ, ತೀರ್ಥಹಳ್ಳಿ ಮತ್ತು ಸಾಗರದಲ್ಲಿ ತೀವ್ರ ಪೈಪೋಟಿ ನಡೆದಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.