ಭಾರತದ ಸರ್ವೋಚ್ಛ ನ್ಯಾಯಾಲಯ ಸೇರಿದಂತೆ ರಾಜ್ಯ ಉಚ್ಛನ್ಯಾಯಾಲಯ, ವಿಭಾಗೀಯ ಪೀಠ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಜರುಗುವ ಕಾರ್ಯಕಲಾಪಗಳ ಕುರಿತು ಮಾಹಿತಿ ಪಡೆಯುವ ಹಾಗೂ ಅಗತ್ಯವಿದ್ದಲ್ಲಿ ಟೆಲಿಗ್ರಾಂ ಚಾನೆಲ್ ಮೂಲಕ ಕಲಾಪಗಳಲ್ಲಿ ಭಾಗವಹಿಸುವ ಅವಕಾಶವನ್ನು ನ್ಯಾಯವಾದಿಗಳಿಗೆ ಕಲ್ಪಿಸಲಾಗುತ್ತಿದೆ ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಹೇಳಿದರು.
HC Notice To BSY: ಬಿ.ಎಸ್ ಯಡಿಯೂರಪ್ಪ (BS Yadiyurappa) ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಿದ್ದಂತೆ ಮತ್ತೆ ಅವರಿಗೆ ಸಂಕಷ್ಟಗಳು ಎದುರಾಗಿವೆ. ಕರ್ನಾಟಕ ಹೈಕೋರ್ಟ್ (Karnataka High Court) ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ (Corruption Case) ಬಿಎಸ್ ಯಡಿಯೂರಪ್ಪ ಅವರಿಗೆ ನೋಟಿಸ್ ಕಳುಹಿಸಿದೆ.
Karnataka High Court - ಮಕ್ಕಳ ಕಾನೂನು ಬದ್ಧತೆಗೆ (Legality Of Child) ಸಂಬಂಧಿಸಿದಂತೆ ಇರುವ ಕಾನೂನಿನಲ್ಲಿ ಏಕರೂಪತೆ ತರುವ ಕೆಲಸ ಸಂಸತ್ತಿನದ್ದಾಗಿದೆ ಎಂದು ರಾಜ್ಯ ಹೈಕೋರ್ಟ್ ಇಂದು ಹೇಳಿದೆ. ಮಾನ್ಯತೆ ಇಲ್ಲದ ಮದುವೆಯಿಂದ ಹುಟ್ಟಿದ ಮಕ್ಕಳಿಗೆ ಹೇಗೆ ರಕ್ಷಣೆ ಒದಗಿಸಬಹುದು ಎಂಬುದನ್ನು ಸಂಸತ್ತು ನಿರ್ಧರಿಸಬೇಕು ಎಂದು ನ್ಯಾಯಪೀಠ ಹೇಳಿದೆ.
ಮಗ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಲು ತೆರಳಿದ ಮಹಿಳೆಯಿಂದ ದೂರು ಸ್ವೀಕರಿಸಲು ಮತ್ತು ತನಿಖೆ ನಡೆಸಲು ವಿಫಲವಾದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಹೈಕೋರ್ಟ್ ಈ ಅಪರೂಪದ ಶಿಕ್ಷೆ ಪ್ರಕಟಿಸಿದೆ. ಮುಂದಿನ ಒಂದು ವಾರಗಳ ತನಕ ಠಾಣೆಯ ಮುಂದಿನ ಮುಖ್ಯ ರಸ್ತೆಯನ್ನು ಸ್ವಚ್ಛಗೊಳಿಸಲು ಹೇಳಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಅತ್ಯಾಚಾರ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಬಿಡದಿಯ ನಿತ್ಯಾನಂದ ಸ್ವಾಮೀಜಿ ಸದ್ಯ ತಲೆಮರೆಸಿಕೊಂಡಿದ್ದು, ಆತನ ಬಗ್ಗೆ ಸಿಐಡಿ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಟಿಪ್ಪು ಜಯಂತಿಯನ್ನು ರದ್ದುಪಡಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ಇಂದು ರಾಜ್ಯದ ಬಿಜೆಪಿ ಸರ್ಕಾರಕ್ಕೆ ನಿರ್ದೇಶಿಸಿದೆ. ಇತ್ತೀಚಿಗೆ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ತೆಗೆದುಕೊಂಡ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಹೈಕೋರ್ಟ್ ತೀರ್ಪು ಬಂದಿದೆ.
ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದ ಪ್ರಕರಣ ವಿಚಾರವಾಗಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಸಮನ್ಸ್ಗೆ ತಡೆಯಾಜ್ಞೆ ಕೋರಿ ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಐವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಾಂಗ ಕಛೇರಿಯನ್ನು ಸಾಮಾನ್ಯ ಸರ್ಕಾರಿ ಸೇವೆಗಳಿಗೆ ಹೋಲಿಸಲಾಗದು ಆದ್ದರಿಂದ ಜಾಹಿರಾತು ಮೂಲಕ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್ ಜಡ್ಜ್ ಗಳ ನೇಮಕ ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.