CM Siddaramaiah: ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ವಾಲ್ಮೀಕಿ ನಿಗಮದ ಹೊರತುಪಡಿಸಿ ವಿಪಕ್ಷಗಳು ಚಕಾರ ಎತ್ತಿಲ್ಲ.. ಪ್ರವಾಹ, ಅತಿವೃಷ್ಠಿ, ಹಾನಿ ಸೇರಿದಂತೆ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು.
ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ. ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ.ಸಂಸತ್ತಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿದ್ದಾರೆ, ಆದರೆ ಅವರು ಹೇಳಿರುವುದು ಒನ್ ಸೈಡ್ ಸ್ಟೋರಿ. ನಮ್ಮ ಹಿರಿಯ ನಾಯಕರೊಂದಿಗೆ ಮಾತನಾಡಿದ್ದು ಇ.ಡಿ ಸಂಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ನಮ್ಮ ಸಂಸದರು ಕೂಡ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತಾರೆ ಎಂದು ಹೇಳಿದರು.
ರಾಜ್ಯದಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದವರು ನಾವು, ಬಡ್ತಿಯಲ್ಲಿ ಮೀಸಲಾತಿ ಜಾರಿ ಮಾಡಿದವರು ನಾವು, ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲು ಅಳವಡಿಕೆ ಮಾಡಿದವರು ನಾವು. ಸಂವಿಧಾನ ಮತ್ತು ಬಾಬಾ ಸಾಹೇಬರ ಆಶಯಗಳನ್ನೇ ಮಾದರಿಯಾಗಿಟ್ಟುಕೊಂಡು ನಡೆಯುತ್ತಿರುವ ನನಗೆ ಸಂವಿಧಾನ ವಿರೋಧಿಯಾದ ಬಿಜೆಪಿ ಸಾಮಾಜಿಕ ನ್ಯಾಯದ ಪಾಠ ಮಾಡಲು ಬರುತ್ತಿದೆ ಎಂದು ಕಿಡಿ ಕಾರಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಪ್ರಕರಣದಲ್ಲಿ ಯಾವುದೇ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಇದು ಬಿ.ಎಸ್ ಯಡಿಯೂರಪ್ಪ ಅವರ ಅಥವಾ ಬಸವರಾಜ ಬೊಮ್ಮಾಯಿಯವರ ಸರ್ಕಾರ ಅಲ್ಲ. ಭ್ರಷ್ಟಾಚಾರ, ಅಕ್ರಮಗಳ ಬಗ್ಗೆ ನಾನು ಶೂನ್ಯ ಸಹಿಷ್ಣುತೆ ಹೊಂದಿದ್ದೇನೆ. ಇಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಂಚಾಯತ್ ರಾಜ್ ಇಲಾಖೆಯಲ್ಲಿ ಪಿಡಿಒಗಳ ವರ್ಗಾವಣೆ, ಕಂದಾಯ ಇಲಾಖೆಯಲ್ಲಿ ಸಬ್ ರಿಜಿಸ್ಟ್ರಾರ್ ವರ್ಗಾವಣೆ, ಆರೋಗ್ಯ ಇಲಾಖೆಯಲ್ಲಿ ವೈದ್ಯರ ವರ್ಗಾವಣೆಯಲ್ಲಿ ಪಾರದರ್ಶಕತೆ ಇರಬೇಕು ಎಂದು ಕೌನ್ಸೆಲಿಂಗ್ ಜಾರಿಗೆ ತಂದಿದೆ.
ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧರು. ವಿಪಕ್ಷಗಳಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಪರಿಶಿಷ್ಟ ಜಾತಿ, ಪಂಗಡಗಳ ಹಣಕ್ಕೆ ಕನ್ನ ಹಾಕಿದ್ದು ಗೊತ್ತಾದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ಬೆಂಗಳೂರಿನ ಘನತ್ಯಾಜ್ಯ ವಿಲೇವಾರಿ ಕೇಂದ್ರಗಳನ್ನು ನಗರದ ಹೊರಭಾಗದಲ್ಲಿ ಸ್ಥಳಾಂತರ ಮಾಡಲು ಇನ್ನು ಜಾಗವೇ ನಿಗದಿಯಾಗಿಲ್ಲ. ಹೀಗಿರುವಾಗ 30 ವರ್ಷಗಳಿಗೆ ಬ್ಲಾಕ್ ಲಿಸ್ಟ್ ಆಗಿರುವ ಕಂಪನಿಗೆ ಗುತ್ತಿಗೆ ನೀಡಲು ಹೇಗೆ ಸಾಧ್ಯ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಕಿಂಗ್ ಆಫ್ ಕರಪ್ಶನ್ ಎಂದು ಜನ ನನ್ನನ್ನಾಗಲಿ,ನನ್ನ ಕುಟುಂಬದವರನ್ನು ಕರೆದಿಲ್ಲ. ಆ ರೀತಿ ಯಾರನ್ನು ಕರೆದಿದ್ದಾರೆ ಎಂದು ಚರ್ಚೆಗೆ ಬರಲಿ ತಿಳಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಲೋಕಸಭೆಯ ಸ್ಪೀಕರ್ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್ಗಳನ್ನು ನೇಮಿಸುವ ಕುರಿತು ಮಾಹಿತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.
Bus Ticket Fare: ಕಳೆದ ತ್ರೈಮಾಸಿಕದಲ್ಲಿ KSRTCಗೆ 295 ಕೋಟಿ ರೂ. ನಷ್ಟವಾಗಿದೆ. 40 ಹೊಸ ವೋಲ್ವೋ ಬಸ್ಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈಗಾಗಲೇ 600 ಸಾಮಾನ್ಯ ಬಸ್ಗಳನ್ನು ಖರೀದಿ ಮಾಡಲಾಗಿದೆ. KSRTC ಸಂಸ್ಥೆ ಉಳಿಯಬೇಕಾದರೆ ಟಿಕೆಟ್ ದರ ಹೆಚ್ಚಳ ಅನಿವಾರ್ಯವೆಂದು ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಮತ್ತು ಡಾII ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾII ಬಾಬು ಜಗಜೀವನ ರಾಮ್ ಭವನವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಬಯಲು ಮಾಡುವುದು ಅನಿವಾರ್ಯವಾಗಿದೆ ಕಾಂಗ್ರೆಸ್ ಪಕ್ಷದ ವಕ್ತಾರ ರಮೇಶ ಬಾಬು ಹೇಳಿದ್ದಾರೆ.
ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರಿಗೆ ಭರವಸೆ ನೀಡಿದರು.
"ಚನ್ನಪಟ್ಟಣದಲ್ಲಿ ಶಾಸಕರು ಇದ್ದಿದ್ದರೆ ನಾನೇಕೆ ಬರುತ್ತಿದ್ದೆ? ಕುರ್ಚಿ ಖಾಲಿ ಇರುವುದಕ್ಕೆ ಬಂದು ಕುಳಿತಿದ್ದೇನೆ. ಬೇರೆಯವರು ಕುರ್ಚಿಯಲ್ಲಿ ಕುಳಿತಿದ್ದರೆ ಬರುತ್ತಿದ್ದೇನೆಯೇ?" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.