ನೈಋತ್ಯ ಮುಂಗಾರು ಶನಿವಾರ ಮಧ್ಯ ಅರೇಬಿಯನ್ ಸಮುದ್ರ, ದಕ್ಷಿಣ ಮಹಾರಾಷ್ಟ್ರ, ತೆಲಂಗಾಣ ಮತ್ತು ದಕ್ಷಿಣ ಛತ್ತೀಸ್ಗಢದ ಕೆಲವು ಭಾಗಗಳು, ದಕ್ಷಿಣ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಿಗೆ ಮುನ್ನಡೆದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ಹಿನ್ನೆಲೆ ಬೋರೆದೊಡ್ಡಿ ಗ್ರಾಮದ ಸಮೀಪದ ಜಡೆತಡಿ ಹಳ್ಳ, ಲೊಕ್ಕನಹಳ್ಳಿ ಸಮೀಪದ ಹಳ್ಳಗಳು ತುಂಬಿ ಹರಿಯುತ್ತಿದೆ. ಇದರಿಂದ ಲೊಕ್ಕನಹಳ್ಳಿ ಗ್ರಾಮದಿಂದ ಒಡೆಯರಪಾಳ್ಯ ಪಿ ಜಿ ಪಾಳ್ಯ ತಮಿಳುನಾಡಿಗೆ ಹೋಗುತ್ತಿದ್ದ ವಾಹನಗಳು ಹಾಗೂ ಒಡೆಯರಪಾಳ್ಯ ಮಾರ್ಗವಾಗಿ ಲೊಕ್ಕನಹಳ್ಳಿ ಕೊಳ್ಳೇಗಾಲ, ಹನೂರು ಪಟ್ಟಣ ವ್ಯಾಪ್ತಿಗೆ ಬರುತ್ತಿದ್ದ ಹಲವಾರು ದ್ವಿಚಕ್ರ ವಾಹನ, ಬಸ್, ಸರಕು ಸಾಗಣೆ ವಾಹನಗಳು ನಿಂತಲ್ಲಿ ನಿಂತಿದ್ದು ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.