ಪಾಕಿಸ್ತಾನ ಕಬಡ್ಡಿ ಫೆಡರೇಷನ್ (PKF) ಕಾರ್ಯದರ್ಶಿ ರಾಣಾ ಮೊಹಮ್ಮದ್ ಸರ್ವರ್ ಈ ಕುರಿತು ಶನಿವಾರ ಮಾಹಿತಿ ನೀಡಿದ್ದು. ಮಾರ್ಚ್ನಲ್ಲಿ ಕರ್ತಾರ್ಪುರ ಕಾರಿಡಾರ್ನಲ್ಲಿ ಅಂತರರಾಷ್ಟ್ರೀಯ ಪಂದ್ಯದಲ್ಲಿ ಆಡಲು ಎರಡೂ ದೇಶಗಳು ಸಿದ್ಧವಾಗಿವೆ ಎಂದು ಅವರು ಹೇಳಿದರು.
ನವಜೋತ್ ಸಿಂಗ್ ಸಿಧು ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕರ್ತಾರ್ಪುರ ಕಾರಿಡಾರ್ ಯೋಜನೆಯನ್ನು ಮುಕ್ತಗೊಳಿಸಿದ್ದಕ್ಕೆ ವಿಭಿನ್ನ ಶೈಲಿಯ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಇದೇ ವೇಳೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಕರ್ತಾರ್ಪುರ ಕಾರಿಡಾರ್ ಉದ್ಘಾಟನೆ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಮತಿ ಕೋರಿ ಪಂಜಾಬ್ ಕಾಂಗ್ರೆಸ್ ಶಾಸಕ ನವಜೋತ್ ಸಿಂಗ್ ಸಿಧು ಮೂರನೇ ಪತ್ರವನ್ನು ಕಳುಹಿಸಿದ ಕೆಲವೇ ಗಂಟೆಗಳ ನಂತರ, ವಿದೇಶಾಂಗ ಸಚಿವಾಲಯ ಇಂದು ಅವರಿಗೆ ಸಾಮಾನ್ಯ ಭಕ್ತನಾಗಿ ಡೇರಾ ಬಾಬಾ ನಾನಕ್ ದೇಗುಲಕ್ಕೆ ಭೇಟಿ ನೀಡಲು ಅವಕಾಶ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಅಧಿಕೃತ ಪಾಸ್ಪೋರ್ಟ್ ಹೊಂದಿರುವ ಭಾರತೀಯರಿಗೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಕರ್ತಾರ್ಪುರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟವಾಗಿ ತಿಳಿಸಿದೆ.
ನವೆಂಬರ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ತಾರ್ಪುರ್ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದು, ನವೆಂಬರ್ 12 ರಂದು ಗುರು ದೇವ್ ಅವರ 550 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಕರ್ತಾರ್ಪುರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುವ ಸಿಖ್ ಯಾತ್ರಿಕರ ಮೊದಲ ಬ್ಯಾಚ್ ಅನ್ನು ಕಳುಹಿಸಲಿದ್ದಾರೆ.
ಕರ್ತಾರ್ಪುರ ಕಾರಿಡಾರ್ನ ಆರಂಭವನ್ನು ಗುರುತಿಸಲು ಪಾಕಿಸ್ತಾನ ಬಿಡುಗಡೆ ಮಾಡಿದ ವಿಡಿಯೋವು ಮೂರು ಖಲಿಸ್ತಾನಿ ಪ್ರತ್ಯೇಕತಾವಾದಿಗಳ ಪೋಸ್ಟರ್ ನ್ನು ಒಳಗೊಂಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಅದರಲ್ಲಿ ಖಲಿಸ್ತಾನ್ 2020 ಎಂದು ಬರೆಯಲಾಗಿದೆ.
ಗುರುನಾನಕ್ ದೇವ್ ಜಿ ಅವರ 550 ನೇ ಜನ್ಮ ದಿನಾಚರಣೆಯ ಆಚರಣೆಗೆ ಸಮಯಕ್ಕೆ ಸರಿಯಾಗಿ ತಯಾರಿ ಮಾಡಿದ್ದಕ್ಕಾಗಿ ನನ್ನ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.
ಕರ್ತಾರ್ಪುರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ನಾಯಕರ ಹೆಸರುಗಳಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕೇಂದ್ರ ಸಚಿವರಾದ ಹರ್ದೀಪ್ ಪುರಿ, ಹರ್ಸಿಮ್ರತ್ ಕೌರ್ ಬಾದಲ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಮತ್ತು ಇತರ ಪಂಜಾಬ್ ಸಂಸದರು-ಶಾಸಕರು ಭಾಗವಹಿಸಲಿದ್ದಾರೆ.
ಪಾಕಿಸ್ತಾನದ ವಿದೇಶಾಂಗ ಕಚೇರಿ ವಕ್ತಾರ ಮುಹಮ್ಮದ್ ಫೈಸಲ್, "ಪಾಕಿಸ್ತಾನ ಮತ್ತು ಭಾರತ ಗುರುವಾರ ಕರ್ತಾರ್ಪುರ್ ಸಾಹಿಬ್ ಕಾರಿಡಾರ್ಗೆ ಸಹಿ ಹಾಕಲಿವೆ" ಎಂದು ಹೇಳಿದರು. ಕರ್ತಾರ್ಪುರ್ ಸಾಹಿಬ್ ಕಾರಿಡಾರ್ ಕುರಿತ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧ ಎಂದು ಭಾರತದ ವಿದೇಶಾಂಗ ಸಚಿವಾಲಯ ಸೋಮವಾರ ಘೋಷಿಸಿದ ನಂತರ ಫೈಸಲ್ ಈ ಹೇಳಿಕೆ ನೀಡಿದ್ದಾರೆ.
ಗುರುನಾನಕ್ ದೇವ್ ಅವರ 550ನೇ ಜನ್ಮ ದಿನಾಚರಣೆಗೆ ಮೂರೂ ದಿನಗಳು ಮುಂಚಿತವಾಗಿ
ಕರ್ತಾರ್ಪುರ ಕಾರಿಡಾರ್ ಅನ್ನು ಕಾರ್ಯರೂಪಕ್ಕೆ ತರಲು ಕೇಂದ್ರ ಸರ್ಕಾರ ಇಚ್ಚಿಸಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಅಕ್ಟೋಬರ್ 14 ರಂದು, ಕರ್ತಾರ್ಪುರ ಕಾರಿಡಾರ್ನಲ್ಲಿ ಪಾಕಿಸ್ತಾನ ತನ್ನದೇ ಆದ ಕರಡು ಪ್ರಸ್ತಾಪವನ್ನು ಕಳುಹಿಸಿದ್ದು, ಭಾರತೀಯ ಯಾತ್ರಿಕರು ಕಾರಿಡಾರ್ ಅನ್ನು ಬಳಸುವ ಸೇವೆಗಳಿಗೆ ಶುಲ್ಕವಾಗಿ 20 ಡಾಲರ್ (ಅಂದಾಜು 1,500 ರೂ.) ಪಾವತಿಸಬೇಕಾಗುತ್ತದೆ ಎಂದು ಉಲ್ಲೇಖಿಸಿದ್ದಾರೆ.
ಕರ್ತಾರ್ಪುರ ಕಾರಿಡಾರ್ನ ಉದ್ಘಾಟನಾ ಸಮಾರಂಭಕ್ಕೆ ತಾವು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಗುರುವಾರ ಸ್ಪಷ್ಟಪಡಿಸಿದ್ದಾರೆ. ಅದೇ ರೀತಿಯಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಭಾವಿಸಿರುವುದಾಗಿ ಅಮರಿಂದರ್ ಸಿಂಗ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.