ಕೆಎಲ್ ರಾಹುಲ್ ಐಪಿಎಲ್ 2022 ರಿಂದ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲ. ತವರಿನ ಸರಣಿಯಲ್ಲಿ, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅವರನ್ನು ಟೀಮ್ ಇಂಡಿಯಾದ ನಾಯಕರನ್ನಾಗಿ ಮಾಡಲಾಯಿತು. ಆದರೆ ಬೆನ್ನುನೋವಿನ ಸಮಸ್ಯೆಯಿಂದಾಗಿ ಅವರು ಆಡಲು ಸಾಧ್ಯವಾಗಲಿಲ್ಲ. ಇನ್ನು ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸದಲ್ಲೂ ಭಾಗವಹಿಸಿರಲಿಲ್ಲ.
KL Rahul Athiya Shetty Marriage: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ಕೆ.ಎಲ್.ರಾಹುಲ್ ಶೀಘ್ರದಲ್ಲೇ ತಮ್ಮ ಗೆಳತಿ ಅಥಿಯಾ ಶೆಟ್ಟಿ ಅವರನ್ನು ವಿವಾಹವಾಗಲಿದ್ದಾರೆ. ಇನ್ನು ಮೂರು ತಿಂಗಳಲ್ಲಿ ಈ ಜೋಡಿ ಮದುವೆಯಾಗಲಿದ್ದಾರೆ.
ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ ಮತ್ತು ಅವರ ಸ್ಥಾನಕ್ಕೆ ಈಗ ರೋಹಿತ್ ಶರ್ಮಾ ಅವರೊಂದಿಗೆ ಹೊಸ ಬ್ಯಾಟ್ಸ್ಮನ್ ಇನ್ನಿಂಗ್ಸ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಕೆಎಲ್ ರಾಹುಲ್ ಅವರು ಈ 5 ಪಂದ್ಯಗಳ ಟಿ 20 ಅಂತರರಾಷ್ಟ್ರೀಯ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿರಬೇಕಿತ್ತು, ಆದರೆ ಅವರು ಗಾಯದ ಕಾರಣ ಸಂಪೂರ್ಣ ಸರಣಿಯಿಂದ ಹೊರಗುಳಿದಿದ್ದಾರೆ. ಈಗ ಇವರ ಸ್ಥಾನ ತುಂಬಾ ಈ ಆಟಗಾರರು ಮೈದಾನಕ್ಕೆ ಇಳಿಯಲಿದ್ದಾರೆ. ಅವರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಈಗ ಟೀಮ್ ಇಂಡಿಯಾದ ನಾಯಕ ಕೆ.ಎಲ್.ರಾಹುಲ್ ಹಾಗೂ ಕುಲದೀಪ್ ದೀಪ್ ಯಾದವ್ ಅವರು ಗಾಯಗೊಂಡಿರುವ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟಿ 20 ಐ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಜೂನ್ 9 ರಿಂದ 19ರವರೆಗೆ ಟೀಮ್ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ಸರಣಿಯು ಪ್ರಾರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಕಮಾಂಡ್ ಕೆಎಲ್ ರಾಹುಲ್ ಕೈಯಲ್ಲಿದೆ. ಇನ್ನು ಭಾರತದ 5 ಆಟಗಾರರು ಈ ಬಾರಿ ಹೆಚ್ಚು ಗಮನ ಸೆಳೆಯುವ ನಿರೀಕ್ಷೆಯಿದೆ. ಏಕೆಂದರೆ ಈ ಆಟಗಾರರು ಕೆಎಲ್ ರಾಹುಲ್ ಅವರ ದೊಡ್ಡ ಅಸ್ತ್ರವೆಂದು ಪರಿಗಣಿಸಲಾಗಿದೆ. ಅಷ್ಟೇ ಅಲ್ಲದೆ, ಸರಣಿಯನ್ನು ಗೆಲ್ಲಲು ತಂಡಕ್ಕೆ ಸಹಾಯ ಮಾಡಲಿದ್ದಾರೆ.
ಭಾರತೀಯ ಕ್ರಿಕೆಟ್ ಅಭಿಮಾನಿಗಳು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗಾಗಿ ಕಾಯುತ್ತಿದ್ದಾರೆ. ಈ ಸರಣಿಯಲ್ಲಿ ಭಾರತವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಈ ಸರಣಿಯಲ್ಲಿ ದೊಡ್ಡ ಆಟಗಾರರಿಗೆ ವಿಶ್ರಾಂತಿ ನೀಡಿ, ಯುವ ಆಟಗಾರರಿಗೆ ಮಣೆ ಹಾಕಲಾಗಿದೆ. ಆದರೆ ಕೆಎಲ್ ರಾಹುಲ್ಗೆ ಯುವ ಆಟಗಾರರೊಂದಿಗೆ ಸರಣಿ ಗೆಲ್ಲುವಿದೇ ದೊಡ್ಡ ಸವಾಲಾಗಿದೆ.
ಟೀಂ ಇಂಡಿಯಾ ಜೂನ್ 9 ರಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಸರಣಿಯಲ್ಲಿ ಹಲವು ಆಟಗಾರರ ಪ್ರದರ್ಶನಕ್ಕೆ ವಿಶೇಷ ಗಮನ ನೀಡಲಾಗುವುದು. ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದ್ದು, ಕೆಲ ಆಟಗಾರರಿಗೆ ಅವಕಾಶ ಸಿಗಲಿದೆ ಎಂಬುದು ಇದರ ಹಿಂದಿನ ಕಾರಣ. ಈ ನಡುವೆ ಭಾರತದ ಮಾಜಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಇಬ್ಬರು ಆಟಗಾರರನ್ನು ಹಾಡಿ ಹೊಗಳಿದ್ದಾರೆ. ಆ ತಗಾರರು ಯಾರು? ಯಾಕೆ ಹೊಗಳಿದ್ದಾರೆ? ಇಲ್ಲಿದೆ ನೋಡಿ.
ಲಕ್ನೋ ಸೂಪರ್ ಜೈಂಟ್ಸ ತಂಡದ ನಾಯಕ ಹಾಗೂ ಭಾರತೀಯ ತಂಡದ ಉಪನಾಯಕ ಕೆ.ಎಲ್.ರಾಹುಲ್ ಅವರು ಐಪಿಎಲ್ 2022 ರ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು, ಅಷ್ಟೇ ಅಲ್ಲದೆ ತಮ್ಮ ತಂಡವನ್ನು ಪ್ಲೇ ಆಫ್ ಗೆ ಕೊಂಡೊಯ್ಯುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.