ರಾಜ್ಯದ ಎಲ್ಲಾ ಸಾರಿಗೆ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಲು ಬದ್ದವಾಗಿರುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ, ಜೂನ್ 11 ರಿಂದ ಉಚಿತ ಬಸ್ ಸೇವೆ ಪ್ರಾರಂಭವಾಗಲಿದೆ. ಓಲ್ವೋ, ಐಷಾರಾಮಿ ಬಸ್ ಗಳನ್ನ ಹೊರತುಪಡಿಸಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲಿ ಉಚಿತ ಬಸ್ ಸೇವೆ ಲಭ್ಯವಿದೆ ಎಂದು ಸ್ಪಷ್ಟಪಡಿಸಿದೆ.
Karnataka Assembly Election 2023 :ವಿಧಾನಸಭಾ ಚುನಾವಣೆ ಮೇ 10ಕ್ಕೆ ನಡೆಯಲಿದ್ದು, ಮತದಾನ ನಡೆಯುವ ಹಿಂದಿನ ದಿನ ಖಾಸಗಿ ಬಸ್ ಗಳಿಗೆ ಬೇಡಿಕೆ ಬಂದಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸುಮಾರು 7 ಸಾವಿರ ಬಸ್ ಗಳು ಸೇವೆ ಒದಗಿಸುವ ಬೇಡಿಕೆ ಬಂದಿದೆ.
Karnataka Assembly Election 2023: ಈ ಬಾರಿ 1 ಹಂತದಲ್ಲಿ ಎಲೆಕ್ಷನ್ ನಡೆಯುತ್ತಿರುವ ಹಿನ್ನೆಲೆ, ಮೇ 5ರಿಂದ ಮೇ 13ರವರೆಗೂ ಚುನಾವಣಾ ಕೆಲಸಕ್ಕೆ ಬಸ್ಸುಗಳ ಅವಶ್ಯತೆಯಿದೆ. ಚುನಾವಣಾ ಅಧಿಕಾರಿಗಳು KSRTC ಹಾಗೂ BMTC ಬಸ್ಸುಗಳನ್ನು ಬುಕಿಂಗ್ ಮಾಡಿದ್ದಾರೆ.
ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಇಂದಿನಿಂದ ಮುಷ್ಕರ ನಡೆಸುವುದಾಗಿ ಕರೆ ನೀಡಿತ್ತು.
ನೌಕರರ ಅಸಮಾಧಾನದ ನಡುವೆಯೂ ಸಂಬಳ ಹೆಚ್ಚಳ ಮಾಡಲಾಗಿದೆ.. ಶೇ.15ರಷ್ಟು ಸಂಬಳ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.. ಮಾ. 1ರಿಂದಲೇ ಹೊಸ ಪರಿಷ್ಕರಣೆ ಜಾರಿಗೆ ಸರ್ಕಾರ ಆದೇಶ ಮಾಡಿದೆ..
ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಇಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಲಾಗಿದೆ. ಕಳೆದ 27 ವರ್ಷಗಳಲ್ಲಿ ಅತ್ಯಧಿಕ ವೇತನ ಪರಿಷ್ಕರಣೆ ರಾಜ್ಯ ಸರ್ಕಾರ ಮಾಡಿದೆ.
Bengaluru Mysuru Toll: ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ವೇ ಟೋಲ್ ಸಂಗ್ರಹ ಹಿನ್ನೆಲೆ ಇಷ್ಟು ದಿವಸ ದುಬಾರಿ ಟೋಲ್ನಿಂದ ವಾಹನ ಸವಾರರು ಪರಾದಾಡುತ್ತಿದ್ದರು ಇನ್ನು ಮುಂದೆ ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರನ್ನು ಸಂಕಷ್ಕೆ ಈಡು ಮಾಡಿದೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಕಾಲಿಟ್ಟಿರೋ ನೂತನ ಅಂಬಾರಿ ಉತ್ಸವ ಬಸ್ ಗಳು ನಾಳೆಯಿಂದ ಅಧಿಕೃತವಾಗಿ ಸಂಚಾರ ನಡೆಸಲಿವೆ. ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ನೂತನ ಅಂಬಾರಿ ಉತ್ಸವ ವೋಲ್ವೋ 9600 ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸಲಿದೆ.ನಾಳೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ.
ಇಂದು ಮತ್ತೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ. ಎಲೆಕ್ಷನ್ ಹೊಸ್ತಿಲಲ್ಲಿ ಮತ್ತೆ ಸರ್ಕಾರದ ವಿರುದ್ಧ ಹೋರಾಟ. ಬೇಡಿಕೆಗಳನ್ನ ಈಡೇರಿಸುವಂತೆ ಸಾರಿಗೆ ನೌಕರರ ಆಗ್ರಹ. ಸಾರಿಗೆ ಸಿಬ್ಬಂದಿ ಅಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಹೋರಾಟ. ಸಾರಿಗೆ ಇಲಾಖೆಯ 4 ನಿಗಮಗಳ ನೌಕರರಿಂದ ಪ್ರತಿಭಟನೆ.
ಕೆಎಸ್ ಆರ್ ಟಿಸಿ ಬಸ್ ಚಾಲಕರ ಮಗನೊಬ್ಬ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಸಾಕ್ಷಾತ್ ಎಂಬ ಯುವಕ 05 ಬಾರಿ ಹ್ಯಾಂಡ್ಬಾಲ್ ಹಾಗೂ 03 ಬಾರಿ ನೆಟ್ಬಾಲ್ ನ್ಯಾಷನಲ್ ಲೆವಲ್ ನಲ್ಲಿ ಭಾಗವಹಿಸಿದ್ದಾರೆ. ಮುಂಬರುವ ಏಷಿಯನ್ ನೆಟ್ಬಾಲ್ ಚಾಂಪಿಯನ್ ಶಿಪ್ಗೆ ಭಾರತ ತಂಡಕ್ಕೆ ಆಯ್ಕೆಯಾಗಿರುತ್ತಾರೆ.
ಚಿತ್ರದುರ್ಗ ಡಿಪೋ ಚಾಲಕ ಕಂ ನಿರ್ವಾಹಕರಾಗಿದ್ದ ಉಮೇಶ್ ಎಂಬುವವರು ಬಸ್ ಚಾಲನೆ ಮಾಡುವ ವೇಳೆ ಅಪಘಾತ ಮೃತ್ತಪಟ್ಟಿದ್ದರು. ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಮೂಲಕ ಮೃತ ಉಮೇಶ್ ಕುಟುಂಬ ಕರೆಸಿ ಸಾರಿಗೆ ಸಚಿವ ಶ್ರೀರಾಮುಲು ಅವರು 1 ಕೋಟಿ ರೂ. ಚೆಕ್ ವಿತರಣೆ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.