ಮೇವು ಹಗರಣದ ಪ್ರಕರಣಗಳಲ್ಲಿ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿರುವುದನ್ನು ಈಗ ಸಿಬಿಐ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದೆ. ಸುಪ್ರೀಂ ಕೋರ್ಟ್ ಆಗಸ್ಟ್ 25 ರಂದು ಸಿಬಿಐನ ಅರ್ಜಿಯನ್ನು ಕೈಗೆತ್ತಿಕೊಳ್ಳಲಿದೆ.
Lalu Prasad Yadav Slams Narendra Modi: ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಪ್ರಧಾನಿ ಮೋದಿಯವರು ದೇಶ ಬಿಡಲು ಯೋಚಿಸುತ್ತಿದ್ದಾರೆ. ಹೀಗಾಗಿಯೇ ಅವರು ಹಲವಾರು ದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಲಾಲು ಪ್ರಸಾದ್ ಟೀಕಿಸಿದ್ದಾರೆ.
ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರ ವಯಸ್ಸಿನ ಬಗ್ಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ರಾಜಕೀಯದಲ್ಲಿ ಎಂದಿಗೂ ಯಾವುದೇ ನಿವೃತ್ತಿ ಎನ್ನುವುದು ಇಲ್ಲ ಎಂದು ಗುರುವಾರ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಪ್ರಧಾನಿ ಹುದ್ದೆ 'ಪತ್ನಿ ಇಲ್ಲದೆ' ಇರಬಾರದು ಎಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉಲ್ಲೇಖಿಸಿ ವ್ಯಂಗ್ಯವಾಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿ ಉಳಿದುಕೊಳ್ಳುವುದು ತಪ್ಪು ಎಂದು ಹೇಳಿದ್ದಾರೆ.
ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಅವರ ತಂದೆ ಹಾಗೂ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಹಾಗೂ ತಾಯಿ ಹಾಗೂ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಹಲವು ಸಮಾನ ಮನಸ್ಕ ವಿರೋಧ ಪಕ್ಷಗಳು ಶುಕ್ರವಾರ ಇಲ್ಲಿ ತಮ್ಮ ಮೊದಲ ಸಭೆಯಲ್ಲಿ ಭಾಗವಹಿಸುತ್ತಿದ್ದಂತೆ, ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮಾಜಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಅವರಿಗೆ ಮದುವೆಯಾಗುವಂತೆ ಸಲಹೆ ನೀಡಿದ್ದಾರೆ.
Lalu Yadav On Rahul Marriage: ಪ್ರತಿಪಕ್ಷಗಳ ಸಭೆಯ ಬಳಿಕ, ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಲಾಲು, ರಾಹುಲ್ ಅವರ ಭಾರತ್ ಜೋಡೋ ಯಾತ್ರೆಯನ್ನು ಉಲ್ಲೇಖಿಸಿ ಅವರ ಕುರಿತು ಹೊಗಳಿಕೆಯ ಮಾತುಗಳನ್ನು ಹೇಳಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ, 'ನೀವು ನಮ್ಮ ಸಲಹೆ ಕೇಳಲಿಲ್ಲ, ವಿವಾಹ ಮಾಡಿಕೊಳ್ಳಲಿಲ್ಲ. ಇನ್ನೂ ಸಮಯ ಕಳೆದಿಲ್ಲ. ನೀವು ಮದುವೆಯಾಗಿ, ನಾವು ಮೆರವಣಿಗೆಯಲ್ಲಿ ಶಾಮಿಲಾಗುತ್ತೇವೆ' ಎಂದಿದ್ದಾರೆ.
ಮಾರ್ಚ್ನಲ್ಲಿ ದೆಹಲಿ, ಮುಂಬೈ, ಪಾಟ್ನಾ ಮತ್ತು ರಾಂಚಿಯ 24 ಸ್ಥಳಗಳಲ್ಲಿ ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ ನಡೆಸಿದ ದಾಳಿಯಲ್ಲಿ 1 ಕೋಟಿ ರೂ, 1,900 ಡಾಲರ್, 540 ಗ್ರಾಂ ಚಿನ್ನ ಮತ್ತು 1.5 ಕೆಜಿ ಚಿನ್ನಾಭರಣಗಳು ಮತ್ತು ಇತರ ದೋಷಾರೋಪಣೆಯ ದಾಖಲೆಗಳನ್ನು ಇಡಿ ವಶಪಡಿಸಿಕೊಂಡಿದೆ.
ಶಸ್ತ್ರಚಿಕಿತ್ಸೆಯ ನಂತರ ಆರ್ಜೆಡಿ ಮುಖ್ಯಸ್ಥರು ಚೇತರಿಸಿಕೊಂಡಿರುವ ಬಗ್ಗೆ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡಿದ್ದರು.ಲಾಲು ಯಾದವ್ ಅವರು ತಮ್ಮ ಪುತ್ರಿ ರೋಹಿಣಿ ಆಚಾರ್ಯ ಅವರಿಂದ ಕಿಡ್ನಿ ಪಡೆದಿದ್ದಾರೆ.
ಬಿಹಾರದ ಮಾಜಿ ಸಿಎಂ ಲಾಲು ಯಾದವ್ ಅವರ ಪುತ್ರ ತೇಜಸ್ವ್ ಯಾದವ್ ಟ್ವೀಟ್ ಮಾಡಿದ್ದು, ‘ಯಶಸ್ವಿಯಾಗಿ ತಂದೆಯವರ ಮೂತ್ರಪಿಂಡ ಕಸಿ ಮಾಡಿದ ನಂತರ ಅವರನ್ನು ಆಪರೇಷನ್ ಥಿಯೇಟರ್ನಿಂದ ಐಸಿಯುಗೆ ಸ್ಥಳಾಂತರಿಸಲಾಗಿದೆ’ ಎಂದು ಹೇಳಿದ್ದಾರೆ.
ಫೋಟೋದಲ್ಲಿ ಲಾಲು ಅವರ ಪುತ್ರಿ ಮಿಸಾ ಭಾರತಿ ಕೂಡ ಕಾಣಿಸಿಕೊಂಡಿದ್ದಾರೆ. ವಿಡಿಯೋ ಕಾಲ್ ಮೂಲಕ ತಂದೆ ಲಾಲು ಯಾದವ್ ಜೊತೆ ಮಾತನಾಡುತ್ತಿರುವ ಫೋಟೋ ಕಂಡುಬಂದಿದೆ. ರೋಹಿಣಿ ಆಚಾರ್ಯ ಹೀಗೆ ಬರೆದುಕೊಂಡಿದ್ದಾರೆ. "ನನ್ನ ನಾಯಕ, ನನ್ನ ಬೆಂಬಲ ತಂದೆ. ಬೇಗ ಚೇತರಿಸಿಕೊಳ್ಳಿ. ಎಲ್ಲ ಅಡೆತಡೆಗಳಿಂದ ಮುಕ್ತಿ ಪಡೆದವನಿಗೆ ಕೋಟ್ಯಾಂತರ ಜನರ ಆಶೀರ್ವಾದವಿದೆ" ಎಂದು ಹೇಳಿದ್ದಾರೆ.
Fodder scam: ಮೇವು ಹಗರಣ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ಗೆ ಸಿಬಿಐ ನ್ಯಾಯಾಲಯ ಸೋಮವಾರ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂಪಾಯಿ ದಂಡ ವಿಧಿಸಿದೆ.
Sonia Gandhi Calls Lalu Yadav: ಬಿಹಾರದಲ್ಲಿ ಆರ್ಜೆಡಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಕೊನೆಗೊಳ್ಳಲಿದೆ ಎಂಬ ಚರ್ಚೆ ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಬಿಹಾರ ಉಪಚುನಾವಣೆಗೆ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರದಂದು ಪರೋಕ್ಷವಾಗಿ ಲಾಲೂ ಪ್ರಸಾದ್ ವಿರುದ್ಧ ವಾಗ್ದಾಳಿ ನಡೆಸಿದರು.ಜನರು ಬಿಹಾರದ 15 ವರ್ಷಗಳ ಅವಧಿಯಲ್ಲಿನ 'ಜಂಗಲ್ ರಾಜ್' ಮತ್ತು ಕಾನೂನುಬಾಹಿರತೆಯನ್ನು ಮರೆತಿಲ್ಲ ಎಂದು ಹೇಳಿದರು.
Lalu Prasad Yadav Latest News - ಮೇವು ಹಗರಣದಲ್ಲಿ ದುಮ್ಕಾ ಖಜಾನೆಯಿಂದ ಅಕ್ರಮವಾಗಿ ಹಣ ಹಿಂಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಚಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಇಂದು ಝಾರ್ಖಂಡ್ ಉಚ್ಛನ್ಯಾಯಾಲಯ ಜಾಮೀನು ನೀಡಿದೆ.
ಜೈಲಿನಲ್ಲಿರುವ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಯಾದವ್ ಅವರ ಆರೋಗ್ಯ ಕ್ಷೀಣಿಸಿದ ನಂತರ ಚಿಕಿತ್ಸೆಗಾಗಿ ಇಂದು ದೆಹಲಿಯ ಏಮ್ಸ್ ಗೆ ಕರೆದೊಯ್ಯಲು ಸಿದ್ಧತೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.