land dispute: ಆ ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆಯುತ್ತಿತ್ತು ಜಗಳ. ಹಲವು ವರ್ಷಗಳಿಂದಲೂ ನಡೆಯುತ್ತಿದ್ದ ಜಮೀನು ಜಗಳ ಕೊನೆಗೆ ಪೊಲೀಸ್ ಠಾಣೆವರೆಗೂ ಹೋಗಿತ್ತು. ಆದರೆ ಈ ಜಮೀನು ವ್ಯಾಜ್ಯಕ್ಕೆ ಯಾವುದೇ ಪರಿಹಾರ ಸಿಗಲಿಲ್ಲ. ಇದೀಗ ಇದೇ ವಿಷಯಕ್ಕೆ ಅಡಿಕೆ ತೋಟವನ್ನೇ ನಾಶ ಮಾಡಲಾಗಿದೆ. ಹೌದು, ಎರಡು ಎಕರೆ ಅಡಿಕೆ ಗಿಡಗಳನ್ನೇ ಸರ್ವ ನಾಶ ಮಾಡಲಾಗಿದೆ. ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು ಕಣ್ಣೀರಿಡುವಂತಾಗಿದೆ. ಎಲ್ಲಿ ಅಂತೀರಾ ನೋಡಿ ಈ ವರದಿ.
ಮಥುರಾದಲ್ಲಿರುವ ಸಿವಿಲ್ ಕೋರ್ಟ್ ವೊಂದರಲ್ಲಿ ಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಅರ್ಜಿ ದಾಖಲಿಸಲಾಗಿದೆ. ಈ ಅರ್ಜಿಯಲ್ಲಿ ಪ್ರತಿಯೊಂದು ಭೂಮಿಯನ್ನು ಮರುಪಡೆಯುವ ಕುರಿತು ಹೇಳಿಕೆ ನೀಡಲಾಗಿದೆ. ಅರ್ಜಿಯಲ್ಲಿ ಈ ಭೂಮಿ ಶ್ರೀಕೃಷ್ಣ ಭಕ್ತರು ಹಾಗೂ ಹಿಂದೂ ಸಮುದಾಯದ ಜನರ ಪಾಲಿಗೆ ತುಂಬಾ ಪವಿತ್ರವಾಗಿದೆ ಎಂದು ಹೇಳಲಾಗಿದೆ.
ಭೂವಿವಾದಕ್ಕೆ ಸಂಬಂಧಿಸಿದಂತೆ ಪೂರ್ವ ಉತ್ತರ ಪ್ರದೇಶದ ಸೋನ್ಭದ್ರ ಜಿಲ್ಲೆಯ ಹಳ್ಳಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ಚಕಮಕಿಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.