ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಹಿರಂಗ ಸವಾಲು ಹಾಕಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯು ಕುಟುಂಬಕ್ಕೆ ನೆರವಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಕಾಳನಹುಂಡಿ ಗ್ರಾಮದಲ್ಲಿ ನಡೆದಿದೆ.
ಜೂನ್ 03 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಪದವೀಧರ ಮತದಾರರಿಗೆ ಮತದಾನ ಮಾಡಲು ಜೂನ್ 03 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಧಾರವಾಡ ಸರಸ್ವತಪುರದ ನಿವಾಸಿಯಾಗಿದ್ದ ಪ್ರಶಾಂತ ಶಾನಬಾಗ ಅನ್ನುವವರು ತನ್ನ ದ್ವಿ ಚಕ್ರ ವಾಹನದ ಮೇಲೆ ಪಿ.ಎ. ಕವರೇಜ್ ಸಮೇತ ವಿಮೆ ಮಾಡಿಸಿದ್ದರು. ಯಾವುದೇ ಅಪಘಾತದಿಂದ ವಿಮಾದಾರ ಮೃತನಾದಲ್ಲಿ ಅವನ ಅವಲಂಬಿತರಿಗೆ ರೂ.15 ಲಕ್ಷ ಪರಿಹಾರ ಕೊಡಲು ವಿಮಾ ಪಾಲಸಿಯಲ್ಲಿ ನಿಯಮ ಇತ್ತು.
Phone tapping: ಫೋನ್ ಟ್ಯಾಪ್ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್ ಅಧಿಕಾರಿಗಳು ಮಾಡಿ ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಒತ್ತಾಯಿಸಿದರು.
ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಂದಿನ ವರೆಗೆ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Pro-Pakistan Slogans in Karnataka: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಒಬ್ಬ ಮುಸ್ಲಿಂ ಅಭ್ಯರ್ಥಿ ಗೆದ್ದಾಕ್ಷಣ ಕರ್ನಾಟಕ ವಿಧಾನಸೌಧ ಒಳಗಡೆ ಹೀಗೆ ಪಾಕಿಸ್ತಾನ್ ಜಿಂದಾಬಾದ್ ಎಂದು ಜೈಕಾರ ಘೋಷಣೆ ಕೂಗಿರುವುದು ಸಾಮಾನ್ಯ ಸಂಗತಿಯಲ್ಲ. ಇದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಜೋಶಿ ಹೇಳಿದ್ದಾರೆ.
ಶಾಸಕರುಗಳ ಅಹವಾಲುಗಳನ್ನು ಆಲಿಸಿ ಬೇಡಿಕೆಗಳಿಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ನಡೆಸುವ ಮತ್ತು ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ಸಲುವಾಗಿ ಐದು ದಿನಗಳ ಕಾಲ ನಡೆದ 31 ಜಿಲ್ಲೆಗಳ 136 ಶಾಸಕರುಗಳೊಂದಿಗಿನ ಮುಖ್ಯಮಂತ್ರಿಗಳ ಸಭೆ ಅತ್ಯಂತ ಅರ್ಥಪೂರ್ಣವಾಗಿ ಮುಕ್ತಾಯವಾಗಿದೆ.
ಅವರು ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು, ಈ ಸಂಧರ್ಭದಲ್ಲಿ ಸಿದ್ದರಾಮಯ್ಯ ಅವರು ಹೇಳಿದಿಷ್ಟು:
ಹುಬ್ಬಳ್ಳಿ ಜೆ.ಸಿ.ನಗರದ ನಿವಾಸಿಗಳಾದ ಪ್ರದೀಪ್, ಸವಿತಾ, ಸಮರ್ಥ ಹುಬ್ಬಳಿಕರ್ ಎಂಬುವವರು ಹುಬ್ಬಳ್ಳಿಯ ವೈಷ್ಣವಿ ಪ್ರೋಜೆಕ್ಟ್ನವರು ಪುರುಷೋತ್ತಮ ನಗರದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದ ನೂತನ ಅಪಾರ್ಟಮೆಂಟ್ನಲ್ಲಿ ಪ್ಲ್ಯಾಟ್ ನಂ.402, ಖರೀದಿಸುವ ಕುರಿತು ಮುಂಗಡ ರೂ.36.50 ಲಕ್ಷ ಹಣಕೊಟ್ಟು 2015 ರಲ್ಲಿ ಒಪ್ಪಂದ ಮಾಡಿಕೊಂಡಿದ್ದರು.
ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗದೆ ಇರುವುದಕ್ಕೆ ವ್ಯಾಪಾಕ ಟೀಕೆಗಳು ವ್ಯಕ್ತವಾಗುತ್ತಿದೆ, ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಸಿ ಟಿ ರವಿ,ಅಧಿವೇಶನ ಕೇವಲ ಉತ್ತರ ಕರ್ನಾಟಕಕ್ಕೆ ಸೀಮಿತವಲ್ಲ.ಸಮಗ್ರ ಕರ್ನಾಟಕದ ದೃಷ್ಟಿಯಿಂದ ಅಧಿವೇಶನ ನಡೆಸಲಾಗಿದೆ.
ರಾಜಧಾನಿಯಲ್ಲಿ ಅಕ್ರಮವಾಗಿ ಹಾಗೂ ಗಡುವು ಮೀರಿ ಓಪನ್ ಇರುವ ಕ್ಲಬ್-ಪಬ್ ಹಾಗೂ ಇಸ್ಟೀಟ್ ಅಡ್ಡೆಗಳನ್ನು ಮುಲಾಜಿಲ್ಲದೆ ಮುಚ್ಚುವಂತೆ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಖಡಕ್ ಸೂಚನೆ ನೀಡಿದ್ದಾರೆ.
ಹೃದಯಾಘಾತಕ್ಕೆ ಒಳಗಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಮಂಡ್ಯದ 5 ರೂಪಾಯಿ ವೈದ್ಯರೆಂದು ಖ್ಯಾತಿ ಹೊಂದಿರುವ ಡಾ.ಶಂಕರೇಗೌಡ ಅವರನ್ನು ಇಂದು ಫೋರ್ಟಿಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಪ್ರಧಾನಿ ಮೋದಿ ಅವರು ಸಾಗುವ ದಾರಿಯಲ್ಲಿ ಇರುವ ಶಾಲಾ ಕಾಲೇಜುಗಳಿಗೆ ರಜೆ ನೀಡಿರುವ ಸರ್ಕಾರದ ಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.'ನಿಮ್ಮ ಶಾಸಕರ ಮಕ್ಕಳನ್ನು ಕಳುಹಿಸಿ. ನಿಮ್ಮ ಮಕ್ಕಳು ಮಾತ್ರ ಡಾಕ್ಟರ್, ಇಂಜಿನಿಯರ್, ಪ್ರೊಫೆಸರ್ ಗಳಾಗ ಬೇಕು. ಬೇರೆ ಬಡವರ ಮಕ್ಕಳು ಗಾರ್ಡ್ ಕೆಲಸ ಮಾಡಬೇಕಾ? ಇದಕ್ಕೆ ನಮ್ಮ ವಿರೋಧವಿದೆ' ಎಂದು ಅವರು ಹೇಳಿದ್ದಾರೆ.
ಅಕ್ರಮ ಮಣ್ಣು ಗಣಿಗಾರಿಕೆಗೆ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಶ್ಯಾಗೋಟಿ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟಿರುವ ಯುವಕರನ್ನು ಬಸವರಾಜ್ (17) ಹಾಗೂ ಈರಣ್ಣ (17) ಎಂದು ಗುರುತಿಸಲಾಗಿದೆ.
ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಕನಸುಕಾಣುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಉರ್ದು ಮಾತನಾಡು ಕೇಳಿದ್ದಾರೆ, ಆದರೆ ಅವನು ಉರ್ದು ಮಾತನಾಡದೆ ಕನ್ನಡದಲ್ಲಿ ಪ್ರತಿಕ್ರಿಯಿಸಿದ್ದಾನೆ, ಆದ್ದರಿಂದ ಅಮಾನುಷವಾಗಿ ದಲಿತ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಹೇಳಿಕೆ ನೀಡಿ ಗೃಹ ಸಚಿವ ಆರಗ ಜ್ಞಾನೇಂದ್ರ (Aaraga Jnanendra) ಪೇಚಿಗೆ ಸಿಲುಕಿದ್ದಾರೆ. ಆದರೆ ಇದಾದ ಸ್ವಲ್ಪ ಸಮಯದ ನಂತರ ಅವರು ತಮ್ಮ ಹೇಳಿಕೆಯನ್ನು ತಪ್ಪು ಎಂದು ಹೇಳಿ ಕ್ಷಮೆಯಾಚಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.