ವಿಜಯಪುರ ಬಿಜೆಪಿ ಶಾಸಕ ಬಸನಗೌಡ್ ಯತ್ನಾಳ್ ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್ ಹಗರಣಗಳ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಂಕೇತ್ ಆಗಾಗ ಬೆಂಗಳೂರಿನಲ್ಲಿರುವ ತಮ್ಮ ಅಕ್ಕನ ಬಗ್ಗೆ ಹೋಗಿ ಬರುತ್ತಿದ್ದ. ಈ ವೇಳೆ ಕರೀಂಖಾನ್ ಎಂಬುವರ ಪರಿಚಯವಾಗಿತ್ತು. ಸಂಕೇತ್ನ ವೃತ್ತಿ ಬಗ್ಗೆ ತಿಳಿದುಕೊಂಡು ಕರೀಂಖಾನ್ ತನ್ನ ಅಳಿಯ ದುಬೈನಿಂದ ಕಡಿಮೆ ಬೆಲೆಗೆ ಚಿನ್ನ ತಂದು ಮಾರಾಟ ಮಾಡ್ತಾನೆ. ನಿಮಗೆ ಬೇಕಾದರೆ ಖರೀದಿಸಿ ಸುಲಭವಾಗಿ ಹಣ ಸಂಪಾದನೆ ಮಾಡಬಹುದು ಎಂದು ಆಸೆ ಹುಟ್ಟಿಸಿದ್ದ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ಮುನ್ನವೇ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದ ಮಾಜಿ ಸಚಿವ ಡಾ. ಕೆ. ಸುಧಾಕರ್,
ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿರುದ್ಧ 'ಎಕ್ಸ್' ಖಾತೆಯಲ್ಲಿ ದುರುದ್ದೇಶ ಪೂರಿತ ಪೋಸ್ಟ್ ಮಾಡಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಪಾರ್ಟಿಯ ಐಟಿ ಸೆಲ್ ಉದ್ಯೋಗಿಯನ್ನು ಬಂಧಿಸಲಾಗಿದೆ.
ಬಿಜೆಪಿ ಸರಕಾರವು ಡಿಕೆ ಶಿವಕುಮಾರ್ ಅವರು ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಗಳ ಮೇರೆಗೆ 2019 ರ ಸೆಪ್ಟೆಂಬರ್25 ರಂದು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಒಮ್ಮೆ ತನಿಖೆಗೆ ನೀಡಿದ್ದ ಪ್ರಕರಣವನ್ನು ಹಿಂದೆ ಪಡೆಯಲು ಬರುವುದಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಪಾದಿಸಿದರು.
ಬ್ಯಾಂಕ್ ನೋಟೀಸ್ ನೀಡಲು ತೆರಳಿದ್ದವರ ಮೇಲೆ ವೃದ್ದರೊಬ್ಬರು ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಮೇಕೆ ಸಾಕಾಣಿಕೆದಾರರು ಸತ್ತ ಮೇಕೆಗಳನ್ನು ಕಸದ ತಿಪ್ಪೆ ಅಥವಾ ಭೂಮಿಯಲ್ಲಿ ಹೂಳುವುದನ್ನು ಮಾಡುತ್ತಿರುವುದರಿಂದ ಮತ್ತಷ್ಟು ಕುರಿಗಳಿಗೆ ಈ ವೈರಸ್ ಹರಡಿದೆ. ಕಾಯಿಲೆ ನಿಯಂತ್ರಣಕ್ಕೆ ಪಶು ಇಲಾಖೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಕಾಂತರಾಜು ಹೇಳಿದ್ದಾರೆ.
ಬಿಜೆಪಿ ನಾಲ್ಕು ವರ್ಷ ಅಧಿಕಾರಿದಲ್ಲಿದ್ದಾಗ ಏಕೆ ಗುಂಡಿ ಮುಚ್ಚಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬ್ರಾಂಡ್ ಬೆಂಗಳೂರು ಕುರಿತಂತೆ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂಬ ಕಮಲ ಪಾಳಯದ ಆರೋಪಕ್ಕೆ ತಿರುಗೇಟು ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.