ಈ ಕ್ಷಣದ ಪ್ರಮುಖ ಸುದ್ದಿಗಳು
>> ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಪತ್ತೆ ಪ್ರಕರಣ - ಬಿಜೆಪಿ ನಾಯಕರ ಕೈಗೆ ಐಟಿ ದಾಳಿ ಅಸ್ತ್ರ
>> IT ದಾಳಿ ಬೆನ್ನಲ್ಲೇ ಕೈ ವಿರುದ್ಧ ಕೇಸರಿ ಗುಡುಗು - ಪಂಚರಾಜ್ಯ ಚುನಾವಣೆಗೆ ಕಾಂಗ್ರೆಸ್ ಹಣ ಸಂಗ್ರಹ ಆರೋಪ
>> ಸಾಂಸ್ಕೃತಿಕ ನಗರಿಯಲ್ಲಿ ಕಳೆಗಟ್ಟಿದ ದಸರಾ ಮಹೋತ್ಸವ - ಕೆ.ಆರ್.ಎಸ್. ಬೃಂದಾವನಕ್ಕೆ ವಿಶೇಷ ದೀಪಾಲಂಕಾರ
>> ದಸರಾ ನೆಪದಲ್ಲಿ ಸುಲಿಗೆಗೆ ಇಳಿದ ಖಾಸಗಿ ಬಸ್ಗಳು - ಸಾಮಾನ್ಯ ದರಕ್ಕಿಂತ ಮೂರು ಪಟ್ಟು ಹೆಚ್ಚಿನ ವಸೂಲಿ
>> ವಿಶ್ವ ಚಾಂಪಿಯನ್ನರಿಗೆ ಶಾಕ್ ಕೊಟ್ಟ ಅಫ್ಘಾನಿಸ್ತಾನ್ - 69 ರನ್ಗಳಿಂದ ಸೋಲಿಸಿ ಹೊಸ ಇತಿಹಾಸ ನಿರ್ಮಾಣ
'ಪರ್ಸಂಟೇಜ್ ಪಟಾಲಂ' ಈಗ ಕಸಕ್ಕೂ ಬಾಯಿ ಹಾಕಿದೆ! ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ!! ಅದರ ಒಳಗುಟ್ಟು ರಟ್ಟಾಗಿದೆ!! ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್ʼಗಳನ್ನು ಸೃಷ್ಟಿ ಮಾಡುತ್ತಿರುವುದು ದಿಟ ಎಂದು ಉಪಮುಖ್ಯಮಂತ್ರಿ
ಈಚರ್ ವಾಹನ, ಕಾರುಗಳನ್ನು ಬಳಸಿಕೊಂಡು ಉದ್ಯಮಿ ಕಾರು ಅಡ್ಡಗಟ್ಟಿ 40 ಲಕ್ಷ ನಗದು, ಮೊಬೈಲ್ ಹಾಗೂ ಆ್ಯಪಲ್ ವಾಚ್ ನ್ನು ದರೋಡೆ ಮಾಡಿದ್ದ ಪ್ರಕರಣ ಸಂಬಂಧಿಸಿ 10 ಮಂದಿಯನ್ನು ಬಂಧಿಸಲಾಗಿದೆ.
ಈ ಕ್ಷಣದ ಪ್ರಮುಖ ಸುದ್ದಿಗಳು
>> ಸಿಲಿಕಾನ್ ಸಿಟಿಯಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟೆ
>> ಚುನಾವಣೆಗೆ ರಾಜ್ಯವೇ ಕಲೆಕ್ಷನ್ ಕೇಂದ್ರ ಎಂದ ಕಟೀಲ್
>> ಹುಬ್ಬಳ್ಳಿಯಲ್ಲಿ ಪಂಚಮಸಾಲಿ ಸಮುದಾಯದ ರಣಕಹಳೆ
>> ಭಾರತ vs ಪಾಕ್ ವಿಶ್ವಕಪ್ ಕದನ
>> ಎಂಟನೇ ದಿನವೂ ಯುದ್ಧಭೂಮಿಯಲ್ಲಿ ಸಾವಿನ ರಣಕೇಕೆ
ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಆ ಹೆಸರುಗಳನ್ನು ಈಗ ಬಹಿರಂಗ ಮಾಡುವುದಿಲ್ಲ. ವಿರೋಧ ಪಕ್ಷಗಳ ಮೈತ್ರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ನಾನು ಮದುವೆ ಆಗೊ ಹುಡುಗಿಯ ಖಾಸಗಿ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡ್ಬಿಟ್ಟಿದ್ದಾರೆ. ಹೇಗಾದ್ರು ಮಾಡಿ ಅದನ್ನ ಡಿಲೀಟ್ ಮಾಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿ ಅಂತಾ ಪರಿ ಪರಿಯಾಗಿ ಬೇಡಿಕೊಂಡಿದ್ದ. ತನಿಖೆ ನಡೆಸಿದ ಪೊಲೀಸರು ಪ್ರಿಯತಮನ ಕೈಗೆ ಕೋಳ ತೊಡಿಸಿದ್ರು.
ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ (ಗುದ್ದಲಿ ಪೂಜೆ)ಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೆರವೇರಿಸಿದರು. ಈ ವೇಳೆ ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ ನೀಡುವುದಾಗಿ ಘೋಷಿಸಿದರು
ಲೋಕಸಭೆ ಚುನಾವಣೆ ಬಂದಾಗ ಪಾಕಿಸ್ತಾನ, ಭಯೋತ್ಪಾದಕರು, ಅಂಜನಾದ್ರಿ ಆಂಜನೇಯ, ಮಸೀದಿ ನೆನಪಾಗುತ್ತದೆ. ಹಿಂದೂ ಹೆಸರಿನಲ್ಲಿ ಬಿಜೆಪಿಗರು ರಾಜಕಾರಣ ಮಾಡುತ್ತಾರೆ. ಕಾಂಗ್ರೆಸ್ನಲ್ಲಿ ಹಿಂದೂಗಳಿಲ್ವಾ.? ನಾವೆಲ್ಲ ಹಿಂದೂಗಳಲ್ವಾ.? ಎಂದು ಸಚಿವ ಶಿವರಾಜ ತಂಗಡಗಿ ಪ್ರಶ್ನೆ ಮಾಡಿದರು.
ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕೆಂದು ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಸೈಲಂಟಾಗಿದ್ದ ಸೊಸೆ ತನ್ನ ಕರಾಮತ್ತನ್ನ ತೋರಿಸುತ್ತಾಳೆ. ತನ್ನ ಅತ್ತೆಯ ಹೆಸರಲ್ಲಿದ್ದ ಮನೆಯನ್ನ ನಕಲಿ ಜಿಪಿಎ ಮಾಡಿ ನಂತರ ತನ್ನ ಮಗನ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳುತ್ತಾಳೆ. ಈ ವಿಷಯ ತಿಳಿದ ಅಪ್ಪಾಜಿ ಸೊಸೆಯ ನಕಲಿ ದಾಖಲೆಯ ವಿರುದ್ಧ ಕೋರ್ಟ್ ಮೊರೆ ಹೋಗುತ್ತಾರೆ. ಇಲ್ಲಿಗೆ ಸೊಸೆ ವರ್ಸಸ್ ಮಾವನ ನಡುವೆ ಗುದ್ದಾಟ ಸ್ಟಾರ್ಟ್ ಆಗುತ್ತೆ.
ಡಿ.ಕೆ. ಶಿವಕುಮಾರ್ ಅವರು ಅತಿ ಹೆಚ್ಚು ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಆದರೆ, ಅಧಿಕಾರಿಗಳಿಂದ ಮಾಹಿತಿ ಪಡೆದಾಗ ಸುಮಾರು 2000 ಕ್ಯೂಸೆಕ್ಸ್ ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಡಿಕೆಶಿವಕುಮಾರ್ ಅವರು ಯಾಕೆ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಒಂದು ಕೋಟಿ ಲೋನ್ ಮಾಡಿಸಿ ಅಸಲು ಬಡ್ಡಿ ಸೇರಿ 23 ಲಕ್ಷ ಹಣವನ್ನ ಸಂತೋಷನಿಗೆ ನೀಡಿದ್ದ. ಇತ್ತ ಹಣ ಒಟ್ಟಿಗೆ ಕೊಡುತ್ತಿದ್ದಂತೆ ದುರಾಸೆಗೆ ಬಿದ್ದ ಸಂತೋಷ ನಾನು ನಿನ್ನ ಕಷ್ಟಕ್ಕೆ ಸಹಾಯ ಮಾಡಿದ್ದೆ. ನೀನು ನನ್ನ ಕಷ್ಟಕ್ಕೆ ಸಹಾಯ ಮಾಡು ಎಂದು ಬೇರೆಯವರ ಹೆಸರಲ್ಲಿ ರಂಜಿತ್ ಬಳಿ 20 ಲಕ್ಷ ಹಣ ಸಾಲ ಪಡೆದಿದ್ದ.
ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಕರ್ನಾಟಕ ತನ್ನ ಜಾಗದಲ್ಲಿ ಆಣೆಕಟ್ಟುಕೊಳ್ಳಲು ಅಡ್ಡಿಪಡಿಸಬೇಡಿ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಬಿಜೆಪಿ ನಾಯಕರು ರಾಜಕೀಯ ಬಿಟ್ಟು ರಾಜ್ಯದ ಹಿತಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು.
ತಮಿಳುನಾಡಿಗೆ ನೀರು ಹರಿಸುವ ತೀರ್ಮಾನ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿನ್ನೆ ಮೇಲ್ಮನವಿ ಸಲ್ಲಿಸಿದ್ದೇವೆ. ಒಳ ಹರಿವು ಹೆಚ್ಚಾಗಿದ್ದು, ರಾಜ್ಯದಲ್ಲಿ ಹೆಚ್ಚಿನ ಮೇಳೆ ಬೀಳಲಿ ಎಂದು ಎಲ್ಲಾ ಜನರು ಪ್ರಾರ್ಥನೆ ಮಾಡಬೇಕಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ನಕಲಿ ದಾಖಲೆ ಸೃಷ್ಟಿಸಿ ಸುಮಾರು 15 ಕೋಟಿಗೂ ಹೆಚ್ಚು ಲೋನ್ ಪಡೆದು ವಂಚನೆ ಮಾಡಿರುವ ಈತನಿಗೆ ಖಾಲಿ ಸೈಟ್, ಆಸ್ತಿ ಮಾರಾಟ ಮಾಡುವವರ ಇವನ ಟಾರ್ಗೆಟ್ ಆಗಿದ್ದರು. ಆಸ್ತಿ ಖರೀದಿಸುತ್ತೇನೆಂದು ಮಾಲೀಕರಿಂದ ಆಸ್ತಿಯ ದಾಖಲೆ ಪಡೆಯುತ್ತಿದ್ದ.
ಕೇಂದ್ರ ಬಿಜೆಪಿ ನಾಯಕರು ರಾಜ್ಯದ ಬೆಳವಣಿಗೆಯನ್ನು ಗಮನಿಸುತ್ತಿದ್ದಾರೆ. ರಾಜ್ಯಾಧ್ಯಕ್ಷ ನೇಮಕ ವಿಚಾರವಾಗಿ ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ. ನಮ್ಮ ತಪ್ಪೇನಾದರು ಇದ್ದರೆ ಕರೆದು ಬುದ್ದಿ ಹೇಳಿ ಎಂದು ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ ಬಿಜೆಪಿ ಹೈಕಮಾಂಡ್ಗೆ ಮನವಿ ಮಾಡಿದರು.
ಕೊಳ್ಳೆ ಹೊಡೆದ ಮೇಲೆ ಬಾಗಿಲು ಹಾಕಿದಂತೆ ಈಗ ಕಾನೂನು ಹೊರಾಟ ಮಾಡಲು ಹೊರಟಿದ್ದಾರೆ. ಕಾನೂನು ತಜ್ಞರ ಜೊತೆ ಮಾತನಾಡುವ ಕೆಲಸವನ್ನು ಮುಂಚೆಯೇ ಮಾಡಬೇಕಿತ್ತು ಎಂದು ಕಾವೇರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.