ಅಣ್ಣಾ ಹಜಾರೆ ಚಳವಳಿಯಲ್ಲಿ ಭಾಗಿಯಲ್ಲದ ನನ್ನ ತಂದೆಗೆ ಯಾಕೆ ಆಮ್ ಆದ್ಮಿ ಪಕ್ಷ ಟಿಕೆಟ್ ನೀಡಿದೆ? ಅಷ್ಟಕ್ಕೂ ಒಬ್ಬ ಅನುಭವವಿಲ್ಲದ ರಾಜಕಾರಣಿಗೆ ಲೋಕಸಭೆ ಟಿಕೆಟ್ ದೊರೆತಿದೆ ಎಂದರೆ ಅದು ನಿಜಕ್ಕೂ 'ಅಚ್ಚರಿ' ತಂದಿದೆ ಎಂದು ಉದಯ್ ಹೇಳಿದ್ದಾರೆ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರದಂದು ರಫೇಲ್ ಪ್ರಕರಣದ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ನೀಡಿದ ಚೌಕಿದಾರ್ ಚೌರ್ ಹೈ ಹೇಳಿಕೆಗೆ ಈಗ ಸುಪ್ರೀಂಕೋರ್ಟ್ ಎದುರು ಬೇಷರತ್ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಈಗ ಹೊಸದಾಗಿ ಸಲ್ಲಿಸಿರುವ ಅಫಿದಾವಿತ್ತನಲ್ಲಿ ಮೀನಾಕ್ಷಿ ಲೇಖಿ ದೂರಿಗೆ ಮುಕ್ತಿ ಹಾಡುವಂತೆ ರಾಹುಲ್ ಮನವಿ ಮಾಡಿಕೊಂಡಿದ್ದಾರೆ.
ವಾರಣಾಸಿಯಲ್ಲಿ ಎಸ್ಪಿ-ಬಿಎಸ್ಪಿ ಅಭ್ಯರ್ಥಿಯಾಗಿ ಯೋಧ ತೇಜ್ ಬಹದೂರ್ ಯಾದವ್ ನಾಮಪತ್ರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಅವರು ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದರು.
ಇತ್ತೀಚಿಗೆ ರಾಜೀವ್ ಗಾಂಧಿ ಜೀವನ ಭ್ರಷ್ಟಾಚಾರಿ ನಂಬರ್ 1 ಆಗುವ ಮೂಲಕ ಅಂತ್ಯವಾಯಿತು ಎನ್ನುವ ಪ್ರಧಾನಿ ಹೇಳಿಕೆಗೆ ಕಟುವಾಗಿ ಉತ್ತರಿಸಿರುವ ಮಮತಾ ಬ್ಯಾನರ್ಜೀ ನಿಮ್ಮ ದೇಹ ಮುಡಿಯಿಂದ ಅಡಿಯವರೆಗೆ ರಕ್ತದಲ್ಲೇ ಮುಳುಗಿದೆ ಎಂದು ತಿರುಗೇಟು ನೀಡಿದ್ದಾರೆ.
ಪ್ರಧಾನಿ ಮೋದಿ ಫೋನಿ ಚಂಡಮಾರುತಕ್ಕೂ ಮುಂಚೆ ಮಮತಾ ದೀದಿಯೊಂದಿಗೆ ಮಾತನಾಡಲು ಇಚ್ಚಿಸಿದೆ ಆದರೆ ಅವರು ನನ್ನೊಂದಿಗೆ ಮಾತನಾಡದೆ ಸೋಕ್ಕಿನ ನಡೆ ತೋರಿದ್ದಾರೆ ಎಂದು ದೂರಿದ ಬೆನ್ನಲ್ಲಿ ಮಮತಾ ಬ್ಯಾನರ್ಜೀ ಮೋದಿಗೆ ತಿರುಗೇಟು ನೀಡಿ 'ನಿಮ್ಮನ್ನು ನಮ್ಮ ಪ್ರಧಾನ ಮಂತ್ರಿ ಎಂದು ಪರಿಗಣಿಸಿಯೇ ಇಲ್ಲ' ಎಂದು ಪ್ರತ್ಯುತ್ತರ ನೀಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೀವನಚರಿತ್ರೆ ಕುರಿತ ಚಲನಚಿತ್ರದಲ್ಲಿ ಮೋದಿ ಪಾತ್ರ ನಿರ್ವಹಿಸಿದ್ದ ಬಾಲಿವುಡ್ ನಟ ವಿವೇಕ್ ಒಬೆರಾಯ್ ಲೋಕಸಭಾ ಚುನಾವಣೆಯ ಬಳಿಕ ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಬಿಎಸ್ಪಿ ಮಾಯಾವತಿ "ಚುನಾವಣೆಯಲ್ಲಿ ಗೆಲುವು ಸಾಧಿಸಲು ಮೋದಿ ಸರ್ಕಾರವು ಅಧಿಕಾರವನ್ನು ದುರೋಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ದೆಹಲಿ ಬಿಜೆಪಿ ಉಸ್ತುವಾರಿ ಶ್ಯಾಮ್ ಜಾಜು ಮತ್ತು ಕೇಂದ್ರ ಸಚಿವ ವಿಜಯ್ ಗೋಯಲ್ ಸಮ್ಮುಖದಲ್ಲಿ ದೆಹಲಿ ಘಟಕದ ಕಚೇರಿಯಲ್ಲಿ ಅನಿಲ್ ಬಾಜಪೇಯಿ ಬಿಜೆಪಿಗೆ ಸೇರ್ಪಡೆಗೊಂಡರು.
ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಮಾಜವಾದಿ ಪಕ್ಷದ ನಾಯಕಿ ಜಯಾ ಬಚ್ಚನ್ ದೇಶದವನ್ನು ರಕ್ಷಿಸಬೇಕಾದವರೇ ಅರಾಜಕತೆಯನ್ನು ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.
40 ಟಿಎಂಸಿ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಚುನಾವಣೆ ಮುಗಿದ ಬಳಿಕ ಅವರು ತಮ್ಮನ್ನು ತೊರೆಯುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಎಚ್ಚರಿಕೆ ನೀಡಿದ್ದಾರೆ.
ಇದೇ ಮೊದಲ ಬಾರಿಗೆ ವಿದ್ಯಾರ್ಥಿ ಚಳುವಳಿಯಿಂದ ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸಿರುವ ಕನ್ನಯ್ಯ ಕುಮಾರ್ ಬೇಗುಸರಾಯೈಗೆ ಕೆಟ್ಟ ಹೆಸರು ತರಲು ಯತ್ನಿಸುತ್ತಿರುವ ಶಕ್ತಿಗಳು ಸೋಲಲಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಷಾ ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ ನೀಡಿದ್ದ ದೂರುಗಳಿಗೆ ಚುನಾವಣಾ ಆಯೋಗ ನಿರ್ಲಕ್ಷ ಧೋರಣೆ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿ ಈಗ ಸುಪ್ರೀಂಕೋರ್ಟ್ ಮೊರೆ ಹೋಗಿದೆ.ಈಗ ಸುಪ್ರಿಂಗೆ ನೀಡಿರುವ ದೂರಿನಲ್ಲಿ ಚುನಾವಣಾ ಆಯೋಗಕ್ಕೆ ಬಂದಂತಹ ದೂರುಗಳನ್ನು 24 ಗಂಟೆಗಳಲ್ಲಿ ನಿರ್ಧರಿಸುವಂತೆ ನಿರ್ದೇಶನ ನೀಡಲು ಕಾಂಗ್ರೆಸ್ ಸುಪ್ರೀಂಗೆ ಮನವಿ ಮಾಡಿದೆ.
ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಬಿಎಸ್ಪಿ ನಾಯಕಿ ಮಾಯಾವತಿ ರಾಜಕೀಯ ಉದ್ದೇಶಕ್ಕಾಗಿ ಮೋದಿ ತಮ್ಮ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇತ್ತೀಚೆಗೆ ಪ್ರಧಾನಿ ಪ್ರತಿಪಕ್ಷಗಳು ತಮ್ಮನ್ನು ನೀಚ್ ಎಂದು ಆರೋಪಿಸುತ್ತಿವೆ ಎಂದು ಹೇಳಿದ ಬೆನ್ನಲ್ಲೇ ಈಗ ಮಾಯಾವತಿ ಮೋದಿಗೆ ತಿರುಗೇಟು ನೀಡಿದ್ದಾರೆ.
ನಿಮಗೆ ನಿಯಮಗಳು ಗೊತ್ತಿಲ್ಲವೆಂದರೆ ಏಕೆ ಆಟವನ್ನು ಆಡುತ್ತೀರಿ ? ಎಂದು ಕಡಕ್ ಆಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅತೀಶಿ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರಿಗೆ ಪ್ರಶ್ನಿಸಿದ್ದಾರೆ.
ಅನುಮತಿ ಇಲ್ಲದೆ ಚುನಾವಣಾ ರ್ಯಾಲಿಯನ್ನು ಆಯೋಜಿಸಿದ್ದಕ್ಕೆ ಗೌತಮ್ ಗಂಭೀರ್ ವಿರುದ್ಧ ಕೇಸ್ ದಾಖಲಿಸಲು ಚುನಾವಣಾ ಆಯೋಗ ಪೂರ್ವ ದೆಹಲಿ ಕ್ಷೇತ್ರದ ರಿಟರ್ನಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.