ಕಾಂಗ್ರೆಸ್ ಪಕ್ಷದಲ್ಲಿನ ಸಂಘಟನಾ ಜವಾಬ್ದಾರಿಯನ್ನು ನಿಭಾಯಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ತಿಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಗೌತಮ್ ಗಂಭೀರ್ ತನ್ನ ಆಡಳಿತದ ವೈಫಲ್ಯಗಳನ್ನು ಮರೆಮಾಚುವ ಸಲುವಾಗಿ ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುತ್ತದೆ ಎಂದು ಹೇಳಿದರು.
ನಾಲ್ಕನೇ ಹಂತದ ಲೋಕಸಭಾ ಚುನಾವಣಾ ಪ್ರಚಾರದ ದೇಶದೆಲ್ಲಡೆ ತೀವ್ರಗೊಂಡಿದ್ದು, ಈಗ ರಾಜಕೀಯ ನಾಯಕರು ಮತದಾರರ ಗಮನ ಸೆಳೆಯಲು ಮುಂದಾಗುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯಕ್ಕೆ ಸವಾಲಾಗಿರುವ ಎಸ್ಪಿ-ಬಿಎಸ್ಪಿ ಮೈತ್ರಿಕೂಟ ರಾಜಕೀಯ ಸಮೀಕರಣದ ಬದಲಾವಣೆಯಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸುತ್ತಿದ್ದಾರೆ.
ಶುಕ್ರವಾರ ನಡೆದ ಚುನಾವಣಾ ರ್ಯಾಲಿಯಲ್ಲಿ ಬಹಿರಂಗವಾಗಿ ಕಪಾಳಮೋಕ್ಷವಾದ ನಂತರ ಈಗ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ತಮ್ಮ ಜೀವಕ್ಕೆ ಬೆದರಿಕೆ ಇದೆ. ಆದ್ದರಿಂದ ಪೊಲೀಸರು ಸೂಕ್ತ ರಕ್ಷಣೆ ಒದಗಿಸಬೇಕೆಂದು ಕೇಳಿಕೊಂಡಿದ್ದಾರೆ.
ಮತದಾರರ ಮನ ಒಲಿಸಲು ಚುನಾವಣಾ ಸಂದರ್ಭದಲ್ಲಿ ರಾಜಕಾರಣಿಗಳು ಬಗೆ ಬಗೆಯ ಅವತಾರವನ್ನು ತಾಳುತ್ತಾರೆ. ಅದು ಭಾಷಣದ ಮೂಲಕವಾಗಲಿ,ಅಥವಾ ಜನರಿಗೆ ಆಶ್ವಾಸನೆ ನೀಡುವುದರ ಮೂಲಕ ಗಮನ ಸೆಳೆಯಲು ಯತ್ನಿಸುತ್ತಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಸಮರ್ಥಿಸಿಕೊಂಡ ಹಿನ್ನಲೆಯಲ್ಲಿ ಈಗ ಚುನಾವಣಾ ಆಯೋಗ ಪ್ರಗ್ಯಾಸಿಂಗ್ ಠಾಕೂರ್ ಅವರಿಗೆ ನೋಟಿಸ್ ನ್ನು ಜಾರಿ ಮಾಡಿದೆ.ಖಾಸಗಿ ಚಾನಲ್ ಗೆ ನೀಡಿದ ಸಂದರ್ಶನವೊಂದರಲ್ಲಿ ಪ್ರಜ್ಞಾ ಠಾಕೂರ್ 1992 ರ ಡಿಸೆಂಬರ್ 6 ರಂದು ಅಯೋಧ್ಯೆಯಲ್ಲಿ ನಡೆದ ಬಾಬರಿ ಮಜೀದ್ ಧ್ವಂಸಕ್ಕೆ ಯಾವುದೇ ಪಶ್ಚಾತ್ತಾಪವಿಲ್ಲವೆಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ-ಆರ್ಎಲ್ಡಿ ಅಭ್ಯರ್ಥಿಯಾಗಿ ಲಕ್ನೋದಿಂದ ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸ್ಪರ್ಧಿಸುತ್ತಿದ್ದಾರೆ. ಈಗ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಪತಿ ಶತ್ರುಘ್ನ ಸಿನ್ಹಾ ಕುಟುಂಬದ ಸದಸ್ಯರಿಗೆ ಬೆಂಬಲಿಸುವುದು ತಮ್ಮ ಕರ್ತವ್ಯವೆಂದು ತಿಳಿಸಿದ್ದಾರೆ.
ಒಂದು ಕಡೆ ಕಾಂಗ್ರೆಸ್ ಪಕ್ಷ ರಫೇಲ್ ಒಪ್ಪಂದದ ವಿಚಾರವಾಗಿ ಅನಿಲ್ ಅಂಬಾನಿ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿರುವ ಬೆನ್ನಲ್ಲೇ ಈಗ ರಿಲಯನ್ಸ್ ನ ಅಧ್ಯಕ್ಷ ಮುಖೇಶ್ ಅಂಬಾನಿ ಈಗ ಮುಂಬೈ ದಕ್ಷಿಣದ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದಿಯೋರಾ ಅವರನ್ನು ಬೆಂಬಲಿಸಿದ್ದಾರೆ.
ಆದಾಯ ತೆರೆಗೆ ಅಧಿಕಾರಿಗಳು ಕನಿಮೋಳಿ ಮನೆಯ ಮೇಲೆ ದಾಳಿ ಮಾಡಿದ ನಂತರ ಪ್ರತಿಕ್ರಿಯಿಸಿರುವ ಡಿಎಂಕೆ ಕನಿಮೋಳಿ ಕೇಂದ್ರ ಸರ್ಕಾರದ ಎಲ್ಲ ಸಂಸ್ಥೆಗಳು ಬಿಜೆಪಿ ಪಕ್ಷದ ಭಾಗವಾಗಿವೆ ಎಂದು ಆರೋಪಿಸಿದ್ದಾರೆ.
ಚುನಾವಣಾ ಅವಧಿಯಲ್ಲಿ ನಮೋ ಟಿವಿ ಚುನಾವಣಾ ವಿಷಯಗಳನ್ನು ಪ್ರಸಾರ ಮಾಡುವಂತಿಲ್ಲವೆಂದು ಚುನಾವಣಾ ಆಯೋಗ ಸೂಚನೆ ನೀಡಿದೆ.ಉಳಿದ ಆರು ಹಂತದ ಚುನಾವಣೆಗಳಲ್ಲಿ ನಮೋ ಟಿವಿ ಚುನಾವಣಾ ಆಯೋಗದ ನಿರ್ದೇಶನಗಳನ್ನು ಅನುಸುತ್ತದೆಯೇ ಇಲ್ಲವೇ ಎನ್ನುವ ಕುರಿತಾಗಿ ದೆಹಲಿಯ ಚುನಾವಣಾಧಿಕಾರಿಗಳು ಪರಿಶೀಲಿಸಬೇಕೆಂದು ಆಯೋಗ ಸೂಚಿಸಿದೆ.
ಭಾರಿ ಮಳೆಯಿಂದಾಗಿ ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಗುಡುಗು ಸಿಡಿಲಿನಿಂದಾಗಿ ಮೃತಪಟ್ಟಿದ್ದಾರೆ. ಆದರೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಕೇವಲ ಗುಜರಾತಿನಲ್ಲಿ ಮೃತಪಟ್ಟಿರುವವರಿಗಾಗಿ ಸಂತಾಪ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.