Chikkaballapura Lokasabha Election Result 2024: ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬಾಗೇಪಲ್ಲಿ, ದೇವನಹಳ್ಳಿ, ಗೌರಿ ಬಿದನೂರು, ಹೊಸಕೋಟೆ, ನೆಲಮಂಗಲ ಮತ್ತು ಯಲಹಂಕ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಕ್ಷಾ ರಾಮಯ್ಯ ಇಲ್ಲಿ ಕಾಂಗ್ರೆಸ್ ಹರಿಯಾಳು. ಮಾಜಿ ಸಚಿವ ಡಾ. ಕೆ. ಸುಧಾಕರ್ ಬಿಜೆಪಿ ಅಭ್ಯರ್ಥಿ. ಇಬ್ಬರ ನಡುವೆ ತೀವ್ರವಾದ ಪೈಪೋಟಿ ನಡೆದಿದೆ. ಯಾರು ಗೆಲ್ಲುತ್ತಾರೆ ಎನ್ನುವುದಷ್ಟೇ ಈಗ ಉಳಿದಿರುವ ಕುತೂಹಲ.
Tumkur Lokasabha Election Result 2024 : ಹೊರಗಿನವರು ಅನ್ನೋ ಕೂಗಿನ ನಡುವೆಯೂ ಸೋಮಣ್ಣ ಭರ್ಜರಿ ಗೆಲುವನ್ನೇ ತಮ್ಮದಾಗಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ಸೋಮಣ್ಣಗೆ ತುಮಕೂರು ರಾಜಕೀಯ ಪುನರ್ಜನ್ಮ ನೀಡಿದೆ.
Mysuru Kodagu Lokasabha Election Result 2024 :ಈ ಬಾರಿ ಈ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ರಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಣದಲ್ಲಿದ್ದರೆ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ರಿಂದ ಎಂ.ಲಕ್ಷ್ಮಣ್ ಅಭ್ಯರ್ಥಿಯಾಗಿದ್ದಾರೆ.
Dakshina Kannada Loksabha Constituency Election Result 2023: ಬಿಜೆಪಿ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭರ್ಜರಿ ಗೆಲುವು ಸಾಧಿಸಿದ್ದಾರೆ
Zee AI Exit Poll: ZEE NEWS AI ಎಕ್ಸಿಟ್ ಪೋಲ್ ಪ್ರಕಾರ, ಒಟ್ಟು 543 ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ NDA ಬರೋಬ್ಬರಿ 310 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಅದೇ ರೀತಿ ಕಾಂಗ್ರೆಸ್ ನೇತೃತ್ವದ INDIA 188 ಮತ್ತು45 ಸ್ಥಾನಗಳಲ್ಲಿ ಇತರರು ಗೆಲುವು ಸಾಧಿಸಲಿದ್ದಾರೆಂದು ಭವಿಷ್ಯ ನುಡಿಯಲಾಗಿದೆ.
ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸೇರಿದಂತೆ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲ್ಪಟ್ಟ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್ ನಲ್ಲಿ ಮತಗಟ್ಟೆಗಳಿಗೆ ತೆರಳಿದರು.
ರೇವಂತ್ ರೆಡ್ಡಿ ಅವರ ವಿಶ್ಲೇಷಣೆ ಪ್ರಕಾರ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ತಮ್ಮ ಪಕ್ಷಕ್ಕೆ ಕೇವಲ 125 ಸ್ಥಾನಗಳು ಬೇಕಾಗುತ್ತದೆ ಎನ್ನುತ್ತಾರೆ. ಇನ್ನೊಂದೆಡೆಗೆ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲು ಕನಿಷ್ಠ 240-250 ಸ್ಥಾನಗಳನ್ನು ಗೆಲ್ಲಬೇಕು. ಆದ್ದರಿಂದ ಈ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಅವರ ಹೇಳಿಕೆಯನ್ನು ನಾವು ಸ್ವಲ್ಪ ವಿಭಿನ್ನ ದೃಷ್ಟಿಕೋನದಿಂದ ಅರ್ಥೈಸಿಕೊಳ್ಳಬೇಕು.
Loksabha Election 2024: ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.
Election Commission: ಅಭಿಜಿತ್ ಗಂಗೋಪಾಧ್ಯಾಯ ಅವರ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತವೆ ಎಂದು ಚುನಾವಣಾ ಸಮಿತಿ ಅಭಿಪ್ರಾಯಪಟ್ಟಿದೆ.ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಗಂಗೋಪಾಧ್ಯಾಯ ಮಾಡಿದ ಹೇಳಿಕೆಗಳಿಗಾಗಿ ತೃಣಮೂಲ ಕಾಂಗ್ರೆಸ್ ನೀಡಿದ ದೂರಿನ ಮೇರೆಗೆ ಚುನಾವಣಾ ಆಯೋಗವು ಕ್ರಮ ಕೈಗೊಂಡಿದೆ.
ಬಿಹಾರದ ಛಾಪ್ರಾ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಕಾರ್ಯಕರ್ತರ ನಡುವೆ ಮಂಗಳವಾರ ನಡೆದ ಮತದಾನದ ನಂತರ ನಡೆದ ಹಿಂಸಾಚಾರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಇತ್ತೀಚಿನ ವೀಡಿಯೋ ಸಂದೇಶದಲ್ಲಿ ಸೋನಿಯಾ ಗಾಂಧಿ ಅವರು ದೇಶದಲ್ಲಿ ಮಹಿಳೆಯರು ಕಷ್ಟಗಳನ್ನು ಎದುರಿಸುತ್ತಿದ್ದಾರೆ ಮತ್ತು ಅವರನ್ನು ಬೆಂಬಲಿಸುವ ಗುರಿಯನ್ನು 'ಮಹಾಲಕ್ಷ್ಮಿ' ಯೋಜನೆ ಹೊಂದಿದೆ ಎಂದು ಉಲ್ಲೇಖಿಸಿದ್ದಾರೆ. ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರನ್ನು ಗುರುತಿಸುತ್ತದೆ ಮತ್ತು ಅವರಿಗೆ ಮಾಸಿಕ 8,500 ರೂ ಗಳಂತೆ ಒಟ್ಟು 1 ಲಕ್ಷ ರೂ.ನೀಡಲಿದೆ ಎನ್ನಲಾಗಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.