2019 ಲೋಕಸಭೆ ಚುನಾವಣೆಯಲ್ಲಿ "ಬಿಹಾರಿ ಬಾಬು"ಗೆ ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಿಹಾರಿ ಬಾಬು ಶತ್ರುಘ್ನ ಸಿನ್ಹಾ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
ಎರಡನೇ ಹಂತದಲ್ಲಿ ತಮಿಳುನಾಡಿನ 39 ಸ್ಥಾನಗಳು, ಬಿಹಾರದ 40 ಸ್ಥಾನಗಳಲ್ಲಿ 5 ಸ್ಥಾನಗಳಿಗೆ, ಜಮ್ಮು ಕಾಶ್ಮೀರದ ಆರು, ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ 8, ಕರ್ನಾಟಕದ 28 ಸ್ಥಾನಗಳಲ್ಲಿ 14, ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 10 ಮತ್ತು ಪಶ್ಚಿಮ ಬಂಗಾಳದ 42 ಸ್ಥಾನಗಳಲ್ಲಿ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಈ ಬಾರಿ ಪಾಟ್ನಾ ಸಾಹಿಬ್ ನಿಂದ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಬದಲಿಗೆ ರವಿಶಂಕರ್ ಪ್ರಸಾದ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಬಿಹಾರದ ಭಾಗಲ್ಪುರ ಕ್ಷೇತ್ರವನ್ನು ಜೆಡಿಯು ಗೆ ಬಿಟ್ಟುಕೊಡಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
2014 ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ 620 ಕೋಟಿ ರೂ. ಆಸ್ತಿ ಘೋಷಿಸುವ ಮೂಲಕ ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದ ಗಲ್ಲಾ ಜಯದೇವ್ ಮತ್ತೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಗುಂಟೂರಿನಿಂದ ಸ್ಪರ್ಧಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.